ವೇತನ ವಿಳಂಬ; ಆರೋಗ್ಯ ಸಿಬ್ಬಂದಿ ಪ್ರತಿಭಟನೆ

•ಡಿಎಚ್ಒ ವಾಹನಕ್ಕೆ ಮುತ್ತಿಗೆ•ಸಂಬಳಕ್ಕೆ ಲಂಚ ಆರೋಪ•ಕ್ರಮಕ್ಕೆ ಆಗ್ರಹ

Team Udayavani, May 7, 2019, 12:35 PM IST

gadaga-tdy-2..

ರೋಣ: ಆರೋಗ್ಯ ಇಲಾಖೆ ಮಾಸಿಕ ಸಭೆ ಸಂದರ್ಭದಲ್ಲಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

ರೋಣ: ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರಿಗೆ 4 ತಿಂಗಳಿಂದ ವೇತನ ನೀಡದ್ದನ್ನು ಖಂಡಿಸಿ, ಇಲಾಖೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭ್ರಷ್ಟಾಚಾರ ನಿಗ್ರಹಿಸಬೇಕೆಂದು ಒತ್ತಾಯಿಸಿ ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ಜಿಲ್ಲಾ ಆರೋಗ್ಯಾಧಿಕಾರಿ ವಿರೂಪಾಕ್ಷರಡ್ಡಿ ಮಾದಿನೂರ ಅವರ ಎದುರು ಸಾಮೂಹಿಕವಾಗಿ ದೂರುವುದರ ಜೊತೆಗೆ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಗ್ಗೆ 11 ಗಂಟೆಗೆ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆಯಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ಮಾಸಿಕ ಸಭೆಗೆ ಹಾಜರಾಗದೆ, ಇಲಾಖೆಯ ಎಲ್ಲ ಸಿಬ್ಬಂದಿ ದೂರ ಉಳಿದು ಪ್ರತಿಭಟನೆ ನಡೆಸಿದರು. 12 ಗಂಟೆಗೆ ರೋಣ ಪಟ್ಟಣಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಮಾದಿನೂರ ಪಕ್ಕದಲ್ಲಿಯೇ ಸಿಬ್ಬಂದಿ ಪ್ರತಿಭಟನಾ ಸ್ಥಳವಿತ್ತು. ಅಲ್ಲಿಗೆ ಬರದೆ ಇರುವುದರಿಂದ ರೊಚ್ಚಿಗೆದ್ದ ಸಿಬ್ಬಂದಿ ಡಿಎಚ್ಒ ವಾಹನಕ್ಕೆ ಮುತ್ತಿಗೆ ಹಾಕಿದರು. ನಂತರ ಡಿಎಚ್ಒ ಮಾದಿನೂರ ಮಾತನಾಡಿ, ಸಭಾಂಗಣಕ್ಕೆ ಬನ್ನಿ ಎಲ್ಲವನ್ನು ಅಲ್ಲಿಯೇ ಚರ್ಚೆ ಮಾಡೋಣ ಎಂದರು. ಇದಕ್ಕೆ ಸ್ಪಂದಿಸಿದ ಸಿಬ್ಬಂದಿ ಸಭಾಂಗಣಕ್ಕೆ ತೆರಳಿದರು. ಇತ್ತ ಸಭೆಯು ಪ್ರಾರಂಭವಾಗುತ್ತಿದ್ದಂತೆ ವೇತನ ಜೊತೆಗೆ ಪ್ರಾಂತ್ಯವಾರು ವೇತನ ತಾರತಮ್ಯ ಸೇರಿದಂತೆ ಅನೇಕ ವಿಚಾರಗಳ ಕುರಿತು ಗೊಂದಲ-ಗಲಾಟೆ ನಡೆಯಿತು.

ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಎ. ಹಾದಿಮನಿ ಹಾಗೂ ಯಲ್ಲಪ್ಪ ಬೂದಿಹಾಳ ಮಾತನಾಡಿ, ಇಲಾಖೆಯಲ್ಲಿ ಲಂಚವನ್ನು ಕೊಟ್ಟರೆ ಮಾತ್ರ ಸಿಬ್ಬಂದಿಗೆ ವೇತನವನ್ನು ಮಂಜೂರು ಮಾಡುತ್ತಾರೆ. ಯಾವ ಸಿಬ್ಬಂದಿ ಲಂಚ ಕೊಡಲು ಹಿಂದೇಟು ಹಾಕುತ್ತಾರೋ ಅವರಿಗೆ ವೇತನ ನೀಡುವುದಿಲ್ಲ. ಇದರಿಂದ ಕಳೆದ ನಾಲ್ಕು ತಿಂಗಳಿಂದ ಅನೇಕ ಸಿಬ್ಬಂದಿ ಕುಟುಂಬಗಳು ಪಡಬಾರದ ಕಷ್ಟ ಅನುಭವಿಸುತ್ತಿವೆ ಎಂದರು.

ಇದಕ್ಕೆ ಉತ್ತರಿಸಿದ ಜಿಲ್ಲಾ ಅಧಿಕಾರಿ ಮಾದಿನೂರ, ಯಾವ ವ್ಯಕ್ತಿ ನಿಮ್ಮಿಂದ ಹಣ ಪಡೆಯುತ್ತಾನೋ ಅವನ ಹೆಸರನ್ನು ನಮೂದಿಸಿ ಒಂದು ಲಿಖೀತವಾದ ದೂರನ್ನು ನೀಡಿ. ತಕ್ಷಣವೇ ಕ್ರಮ ಕೈಗೊಳ್ಳುತ್ತೇನೆ. ಒಂದು ವೇಳೆ ನಾನು ಹಣವನ್ನು ನಿಮ್ಮ ಬಳಿ ಕೇಳಿದ್ದರೆ ನನ್ನ ಬಗ್ಗೆಯೂ ದೂರು ನೀಡಿ ಎಂದು ಸಿಬ್ಬಂದಿಯನ್ನು ಸಮಾಧಾನ ಮಾಡಿದರು. ಇಷ್ಟಕ್ಕೆ ಸುಮ್ಮನಾಗದ ಸಿಬ್ಬಂದಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುವ ಒಬ್ಬ ವ್ಯಕ್ತಿಯಿಂದ ಇಷ್ಟೆಲ್ಲ ತೊಂದರೆಯಾಗುತ್ತಿದೆ. ಅದು ನಿಮಗೂ ಗೊತ್ತಿದೆ. ಆದ್ದರಿಂದ ಸಾಮೂಹಿಕವಾಗಿ ನಮಗೆ ಬೇರೆ ಕಡೆ ವರ್ಗವಣೆ ಮಾಡಿ. ಇಲ್ಲವಾದರೆ ಅವನನ್ನು ಬೇರೆ ಕಡೆ ವರ್ಗವಣೆ ಮಾಡಿ ಎಂದು ಮನವಿ ಮಾಡಿಕೊಂಡರು.

ರೋಣ ಮತ್ತು ಗಜೇಂದ್ರಗಡ ಸೇರಿದಂತೆ ಅನೇಕ ಪಿಎಚ್ಸಿಗಳ ಸಿಬ್ಬಂದಿಗೆ ಬರಬೇಕಾದ 6ನೇ ವೇತನ ಆಯೋಗದ ವ್ಯತ್ಯಾಸದ ಮೊತ್ತವನ್ನು ನೀಡಿಲ್ಲ. ಆದರೆ ನರೇಗಲ್ ಮತ್ತು ಅಬ್ಬಿಗೇರಿ ಸಿಬ್ಬಂದಿಗೆ ಈಗಾಗಲೇ ಜಮಾ ಮಾಡಿದ್ದೀರಿ ಏಕೆ? ಅವರಿಗೊಂದು ನ್ಯಾಯ ನಮಗೊಂದು ನ್ಯಾಯವೇ? ಎಂದು ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಎಲ್ಲ ಸಿಬ್ಬಂದಿ ಒಕ್ಕೊರಲಿನಿಂದ ಪ್ರಶ್ನೆ ಮಾಡಿದರು. ಸಭೆ¿ಲ್ಲಿ ಆರೋಗ್ಯ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು, ವೈದ್ಯರು ಸೇರಿದಂತೆ ಆರೋಗ್ಯ ಸಹಾಯಕರು ಹಾಜರಿದ್ದರು.

ಇಲಾಖೆ ಸಿಬ್ಬಂದಿ ವೇತನ ನೀಡಲು ಯಾವ ವ್ಯಕ್ತಿ ಹಣ ಪಡೆಯುತ್ತಾನೋ ಆತನ ವಿರುದ್ಧ ಸೂಕ್ತ ದಾಖಲೆ ಕೊಟ್ಟರೆ ಯಾವುದೇ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನಾನು ಬಂದು ಎರಡು ತಿಂಗಳಾಗಿದೆ. ಈಗಾಗಲೇ ಸರ್ಕಾರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಪತ್ರ ಬರೆದಿದ್ದೇನೆ. ಬಜೆಟ್ ಬಂದ ಕೂಡಲೇ ಸಿಬ್ಬಂದಿ ವೇತನ ಮಂಜೂರು ಮಾಡುತ್ತೇನೆ. –ವಿರೂಪಾಕ್ಷರಡ್ಡಿ ಮಾದಿನೂರ, ಜಿಲ್ಲಾ ಆರೋಗ್ಯ ಅಧಿಕಾರಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.