ಬರಹಗಾರರಿಗೆ ಪ್ರೇರಣೆ ನೀಡುವಂತವರಾಗಿ

ಕೃತಿಯಲ್ಲಿನ‌ ವೈಚಾರಿಕತೆ-ಮೌಡ್ಯ ವಿರೋಧಿ ಧೋರಣೆ ಸ್ವಾಗತಾರ್ಹ: ಬಸವಶಾಂತಲಿಂಗ ಶ್ರೀ

Team Udayavani, May 7, 2019, 12:47 PM IST

haveri-tdy-1..

ಹಾವೇರಿ: ಶ್ರೀದ್ವಯರು, ಗಣ್ಯರು, ಸಾಹಿತಿಗಳು ಕೃತಿ ಲೋಕಾರ್ಪಣೆಗೊಳಿಸಿದರು.

ಹಾವೇರಿ: ಸಮಕಾಲೀನ ಸಮಸ್ಯೆಗಳನ್ನು ಅರ್ಥೈಸಿ ಅವುಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡಿ ಚರ್ಚೆಗೊಡ್ಡುವ ಶಕ್ತಿ ಅಂಕಣ ಬರಹಗಳಿಗಿದೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.

ಇಲ್ಲಿಯ ಹೊಸಮಠದ ಆವರಣದಲ್ಲಿ ನಡೆದ ಜಿಲ್ಲೆಯ ಆರು ಯುವ ಬರಹಗಾರರು ಬರೆದ ‘ಆರಂಕಣಕಾರರು’ ಮತ್ತು ಕವಯತ್ರಿ ಗಾಯತ್ರಿ ರವಿಯವರ ‘ಕುರುಡನಿಗೆ ಕನ್ನಡಿ’ ಎಂಬೆರಡು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಾವೇರಿ ನೆಲದ ಆರು ಯುವ ಬರಹಗಾರರ ಸಂಪಾದಿತ ‘ಆರಂಕಣಕಾರರು’ ಕೃತಿಯಲ್ಲಿ ವೈಚಾರಿಕತೆ ಮತ್ತು ಮೌಡ್ಯ ವಿರೋಧಿ ಧೋರಣೆಗಳಿರುವುದು ಸ್ವಾಗತಾರ್ಹ. ಇದೊಂದು ಸಾಮಾಜಿಕ ಜಾಗೃತಿಯ ಕೆಲಸ ಎಂದರು.

ತಮ್ಮ ಜೀವನದಲ್ಲಿ ಕಂಡುಂಡ ಸಹಜ ಅನುಭವಗಳನ್ನು ‘ಕುರುಡನಿಗೆ ಕನ್ನಡಿ’ ಕಾವ್ಯ ಸಂಕಲನದಲ್ಲಿ ಬಹಳ ಸೂಕ್ಷ ್ಮವಾಗಿ ಗಾಯತ್ರಿ ರವಿ ಚಿತ್ರಿಸಿದ್ದಾರೆ. ಇದು ಹೊಸ ಕವಿಗಳಿಗೆ ಕಾವ್ಯ ಪ್ರೀತಿ ಬೆಳೆಯಲು ಪ್ರೇರಣಾದಾಯಕವಾಗಿದೆ ಎಂದರು.

ಸಾನ್ನಿಧ್ಯವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಬರಹಗಾರರಾಗಲು ಸಾಧ್ಯವಾಗದಿದ್ದರೆ ಬರಹಗಾರರಿಗೆ ಪ್ರೇರಣೆ ನೀಡುವಂತವರಾಗಬೇಕು. ಈ ಎರಡೂ ಕೆಲಸಗಳು ‘ಆರಂಕಣಕಾರರು’ ಮತ್ತು ‘ಕುರುಡನಿಗೆ ಕನ್ನಡಿ’ ಪುಸ್ತಕಗಳ ಸಂದರ್ಭದಲ್ಲಿ ಆಗಿರುವುದು ಶ್ಲಾಘನೀಯ. ಹಲವು ಹೊಸ ಬರಹಗಾರರಿಗೆ ನೆಲೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕವಿಪ್ರ ನೌಕರರ ಸಂಘದ ನಾಯಕರಾದ ವಿಜಯಕುಮಾರ ಮುದಕಣ್ಣನವರ ಮಾತನಾಡಿ, ಹೊಸ ಕಾಲದಲ್ಲಿ ಪುಸ್ತಕದ ಸ್ವರೂಪ ಮತ್ತು ಅಸ್ತಿತ್ವ ತುಂಬ ಬೇರೆಯಾಗಿದೆ. ಕ್ಷಣಾರ್ಧದಲ್ಲಿ ನೂರಾರು ಪುಟಗಳ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮುಳಗಿಸಿ ಬಿಡುವ ಈ ದಿನಗಳಲ್ಲಿ ಪುಸ್ತಕಗಳು ಉಳಿಯಬೇಕು. ಪುಸ್ತಕದ ಓದು ಮಾತ್ರ ಸುಖ ಕೊಡಬಲ್ಲವು. ಪುಸ್ತಕ ಸಂಸ್ಕೃತಿ ನಾಶವಾಗಬಾರದು ಎಂದರು.

‘ಆರಂಕಣಕಾರರು’ ಕೃತಿ ಪರಿಚಯಿಸಿದ ಲೇಖಕಿ ರೇಖಾ ಭೈರಕ್ಕನವರ, ಸರಳ ಭಾಷೆ, ನಿತ್ಯದ ಜ್ವಲಂತ ಅನುಭವಗಳನ್ನು ಕಟ್ಟಿಕೊಡವ ಅಂಕಣ ಬರಹ ತುಂಬ ಕಠಿಣವಾದ ಕೆಲಸ. ಆದರೆ, ಹಾವೇರಿ ಆರು ಹೊಸ ಪ್ರತಿಭೆಗಳು ವಿಮರ್ಶೆ, ಲಲಿತ ಪ್ರಬಂಧ ಹಾಗೂ ಸಾಮಾಜಿಕ ಸಮಸ್ಯೆಗಳ ಬರೆದ ‘ಆರಂಕಣಕಾರರು’ ಓದಿಗೆ ಸೆಳೆಯುವ ಕೃತಿ ಎಂದರು.

ಲೇಖಕಿ ಗಾಯತ್ರಿ ರವಿ ಅವರ ‘ಕುರುಡನಿಗೆ ಕನ್ನಡಿ’ ಸಂಕಲನ ಪರಿಚಯ ಮಾಡಿಕೊಟ್ಟ ಪ್ರತಿಭಾವಂತ ಕವಿ ಶಿಗ್ಗಾವಿಯ ರಂಜಾನ್‌ ಕಿಲ್ಲೇದಾರ್‌, ಮಾತು ಮತ್ತು ಮೌನಗಳ ಮೌಲ್ಯಗೊತ್ತಿರುವ ಗಾಯತ್ರಿ ರವಿಯವರು ಅತ್ಯಂತ ಸೂಕ್ಷ ್ಮಗ್ರಾಹಿಯಾಗಿ ಕಾವ್ಯ ರಚಿಸಿದ್ದು ಹಾವೇರಿ ನೆಲದ ಹೆಮ್ಮೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ‘ಆರಂಕಣಕಾರರು’ ಕೃತಿಯೊಳಗಿನ ಲೇಖಕರಾದ ವಾಗೀಶ ಬ. ಹೂಗಾರ, ಜಿ.ಎಂ. ಓಂಕಾರಣ್ಣನವರ, ಚಿನ್ನು ಎಸ. ರಾಗಿ (ಸವಣೂರು), ಗಾಯತ್ರಿ ರವಿ, ಲತಾ ರಮೇಶ ವಾಲಿ (ಸವಣೂರು) ಹಾಗೂ ರಾಜೇಶ್ವರಿ ರವಿ ಸಾರಂಗಮಠ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಗಣ್ಯರಾದ ಡಾ| ಜೆ.ಜಿ. ದೇವಧರ, ಮಾಧುರಿ, ನಾಗೇಂದ್ರ ಕಟಕೋಳ, ಎನ್‌.ಕೆ. ಮರೋಳ, ಕರಿಯಪ್ಪ ಹಂಚಿನಮನಿ, ವೈ.ಬಿ. ಆಲದಕಟ್ಟಿ, ಗಂಗಾಧರ ನಂದಿ, ಮಾರುತಿ ಶಿಡ್ಲಾಪೂರ, ದಾಕ್ಷಾಯಿಣಿ ಗಾಣಗೇರ, ಲಲಿತಕ್ಕ ಹೊರಡಿ, ರುದ್ರಪ್ಪ ಜಾಬೀನ್‌, ಸಿ.ಎ. ಕೂಡಲಮಠ, ಶಶಿಕಲಾ ಅಕ್ಕಿ, ಮುಂತಾದವರು ಭಾಗವಹಿಸಿದ್ದರು.

ವೈಷ್ಣವಿ ಪ್ರಾರ್ಥನೆ ಹಾಡಿದಳು. ನಾಗರಾಜ ನಡುವಿನಮಠ ಸ್ವಾಗತಿಸಿದರು. ಎಸ್‌.ಆರ್‌. ಹಿರೇಮಠ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಲ್ಲಕಾರ್ಜುನ ಹಿಂಚಿಗೇರಿ ಕಾರ್ಯಕ್ರಮ ನಿರೂಪಿಸಿದರು. ಪೃಥ್ವಿರಾಜ ಬೆಟಗೇರಿಯವರು ವಂದಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.