ಜಿಂಕೆಗಳ ಸರಣಿ ಸಾವಿನ ಪ್ರಕರಣಕ್ಕೆ ಎಳ್ಳು ನೀರು !


Team Udayavani, May 7, 2019, 1:19 PM IST

Udayavani Kannada Newspaper

ಕೊಪ್ಪಳ: ಕಳೆದ ವರ್ಷ ಜಿಲ್ಲೆಯಲ್ಲಿ ಸರಣಿ ಜಿಂಕೆಗಳ ಸಾವಿನ ಸರಣಿ ಬೆಚ್ಚಿ ಬೀಳಿಸಿದ್ದು ಆ ಪ್ರಕರಣದಲ್ಲಿ ಎರಡು ಮೃತ ಜಿಂಕೆಗಳ ಅಂಗಾಂಗದಲ್ಲಿ ಬೆಳೆನಾಶಕ ವಿಷಕಾರಿ ಅಂಶ ಇರುವುದನ್ನು ಪ್ರಯೋಗಾಲಯದ ವರದಿ ದೃಢಪಡಿಸಿದೆ. ಆದರೆ ಈ ಪ್ರಕರಣದಲ್ಲಿ ಯಾರ ಮೇಲೆ ಕ್ರಮ ಕೈಗೊಳ್ಳಬೇಕೆನ್ನುವುದೇ ಅರಣ್ಯ ಇಲಾಖೆಗೆ ತಿಳಿಯದಾಗಿದ್ದು, ಬಹುತೇಕ ಪ್ರಕರಣಕ್ಕೆ ಎಳ್ಳುನೀರು ಬಿಟ್ಟಂತೆ ಕಾಣುತ್ತಿದೆ.

ಹೌದು. ಕಳೆದ ವರ್ಷ ಕೊಪ್ಪಳ ತಾಲೂಕಿನ ಅಳವಂಡಿ, ಬೆಟಗೇರಿ ಭಾಗದಲ್ಲಿ ಸರಣಿ ಜಿಂಕೆಗಳ ಸಾವಿನ ಪ್ರಕರಣ ವರದಿಯಾಗಿದ್ದವು. ಬೇಟೆಗಾರರ ತಂಡವು ಜಿಂಕೆಗಳನ್ನು ಕೊಂದು ಅವುಗಳ ಅಂಗಾಗ, ಚರ್ಮವನ್ನು ಅನ್ಯಕಡೆ ಮಾರಾಟ ಮಾಡುವ ಅನುಮಾನ ಜನಸಾಮಾನ್ಯರಲ್ಲಿ ವ್ಯಕ್ತವಾಗಿದ್ದವು. ಇನ್ನೂ ಕೆಲವೆಡೆ ರೈತರೇ ಬೆಳೆಹಾನಿಯಾಗುವುದನ್ನು ತಪ್ಪಿಸಲು ಜಿಂಕೆಗಳನ್ನು ಹತ್ಯೆ ಮಾಡುತ್ತಿದ್ದಾರೆ ಎಂಬ ಆಪಾದನೆ ಕೇಳಿ ಬಂದಿದ್ದವು. ಜೊತೆಗೆ ಬೆಳೆಗೆ ಕೀಟಬಾಧೆ ನಿಯಂತ್ರಿಸಲು ಕ್ರಿಮಿನಾಶಕ ಸಿಂಪರಣೆ ಮಾಡಿದ್ದು, ಆ ಬೆಳೆಯನ್ನು ತಿಂದು ಬೆಟಗೇರಿ ಹಾಗೂ ಅಳವಂಡಿ ಭಾಗದಲ್ಲಿ ಜಿಂಕೆಗಳ ನಿಗೂಢ ಸಾವಿನ ಬಗ್ಗೆ ಮಾಧ್ಯಮಗಳಲ್ಲೂ ವರದಿ ಬಿತ್ತರವಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋರಾತ್ರಿ ದೌಡಾಯಿಸಿ ಎಲ್ಲೆಡೆ ಹುಡುಕಾಟ ನಡೆಸಿ ಏಳು ಜಿಂಕೆಗಳ ಮೃತದೇಹ ಪತ್ತೆ ಮಾಡಿದ್ದರು. ಅವುಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಯೋಗಾಲಯಕ್ಕೆ ಅಂಗಾಗಳ ರವಾನೆ ಮಾಡಲಾಗಿತ್ತು. ಏಳೆಂಟು ತಿಂಗಳ ತರುವಾಯ, ಅಂಗಾಂಗದ ವರದಿ ಬಂದಿದ್ದು, ಐದು ಜಿಂಕೆಗಳ ಸಾವಿನ ಪೈಕಿ ಮೂರು ಜಿಂಕೆಗಳು ಸಿಡಿಲಿನ ಆರ್ಭಟಕ್ಕೆ ಸತ್ತಿವೆ ಎಂದಿದ್ದರೆ, 2 ಜಿಂಕೆಗಳ ದೇಹದಲ್ಲಿ ಕ್ಲೋರೋಫೈರಿಪಾಸ್‌ನ ಅಂಶ ಇರುವುದು ಪತ್ತೆಯಾಗಿದೆ.

ಯಾರ ಮೇಲೆ ಕ್ರಮವೆಂಬ ಚಿಂತೆ?: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೈಗೆ ವರದಿ ತಲುಪಿದೆ. ಆದರೆ ಯಾರ ಮೇಲೆ ಕ್ರಮ ಕೈಗೊಳ್ಳಬೇಕೆಂಬ ಗೊಂಗಲದಲ್ಲಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳು ರೈತರ ಬೆಳೆಗೆ ಬಿದ್ದಿರುವ ಬೆಳೆಹಾನಿ ತಡೆಯಲು ರಾಸಾಯನಿಕ ಔಷಧಿಗಳನ್ನು ನಿಗದಿತ ಪ್ರಮಾಣದಲ್ಲಿ ಸಲಹೆ ನೀಡಿದ್ದಾರೆ. ಅದನ್ನು ಆಧರಿಸಿ ರೈತರು ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ಔಷಧಿ ಸಿಂಪರಣೆ ಮಾಡಿದ್ದಾರೆ. ಇಲ್ಲಿ ಯಾರ ಮೇಲೆ ಕ್ರಮವೆಂಬ ಪ್ರಶ್ನೆ ಉದ್ಭವಿಸುತ್ತಿದೆ ಎಂದು ಸ್ವತಃ ಅಧಿಕಾರಿಗಳೇ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಪ್ರಕರಣಕ್ಕೆ ಬಹುತೇಕ ಎಳ್ಳು ನೀರು!: ಜಿಂಕೆಗಳ ಸರಣಿ ಸಾವಿನ ಪ್ರಕರಣ ಗಂಭೀರವಾಗಿದ್ದರೂ ಕ್ರಮ ಯಾರ ಮೇಲೂ ಇಲ್ಲವೆಂಬ ಮಾತು ಕೇಳಿ ಬರುತ್ತಿದೆ. ಇತ್ತ ರೈತನ ಮೇಲೂ ಕ್ರಮ ಕೈಗೊಳ್ಳುವಂತಿಲ್ಲ. ಅತ್ತ ಕೃಷಿ ಇಲಾಖೆ ಬೆಳೆಗೆ ಕೀಟಬಾಧೆ ನಿಯಂತ್ರಣಕ್ಕೆ ಸಲಹೆ ನೀಡಿದೆ. ರೈತನೂ ಕೃಷಿ ಇಲಾಖೆಯ ಮೇಲೆ ಹಾಕಿ ಸುಮ್ಮನಾಗುತ್ತಿದ್ದಾನೆ ಎನ್ನುವ ಮಾತು ವ್ಯಕ್ತವಾಗಿದ್ದು, ಬಹುತೇಕ ಈ ಪ್ರಕರಣಕ್ಕೆ ಎಳ್ಳುನೀರು ಬಿಡಲಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಆದರೆ ಇನ್ಮುಂದೆ ರೈತರಿಗೆ ಬಿತ್ತನೆ ಮಾಡುವ ವೇಳೆ ಸಾವಯವ ಬಿತ್ತನೆಗೆ ಹೆಚ್ಚು ಒತ್ತುಕೊಟ್ಟು ಜಾಗೃತಿ ಮೂಡಿಸಲಿದ್ದೇವೆ ಎಂದು ಅರಣ್ಯ ಇಲಾಖೆ ಹೇಳುತ್ತಿದೆ.

•ಕ್ರಮ ಯಾರ ಮೇಲೆ ಎನ್ನುತ್ತಿದೆ ಇಲಾಖೆ

•2 ಜಿಂಕೆ ದೇಹದಲ್ಲಿ ವಿಷಕಾರಿ ಅಂಶ ಪತ್ತೆ

•ರೈತರಲ್ಲಿ ಜಾಗೃತಿ ಮೂಡಿಸುವ ಮಾತು

•ಕೀಟಬಾಧೆ ನಿಯಂತ್ರಿಸಲು ಕ್ರಿಮಿನಾಶಕ ಸಿಂಪರಣೆ

•ಅಸಹಾಯಕರಾದ ಅಧಿಕಾರಿಗಳು

•ಸಾವಯವ ಕೃಷಿ ಕೈಗೊಳ್ಳಲು ರೈತರಿಗೆ ಸಲಹೆ

ಜಿಂಕೆಗಳ ಸಾವಿನ ವರದಿ ಬಂದಿದೆ. ಐದು ಜಿಂಕೆಗಳ ಸಾವಿನ ಪೈಕಿ 3 ಸಿಡಿಲಿನಿಂದ ಸತ್ತಿವೆ. 2 ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕದ ಅಂಶ ಇರುವುದು ಪತ್ತೆಯಾಗಿದೆ. ಆದರೆ ಈ ಪ್ರಕರಣದಲ್ಲಿ ಯಾರ ಮೇಲೆ ಕ್ರಮ ಕೈಗೊಳ್ಳಬೇಕೆಂಬ ಪ್ರಶ್ನೆ ಮೂಡಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವೆನು. ಅಲ್ಲದೇ, ಇನ್ಮುಂದೆ ರೈತರಿಗೆ ಸಾವಯವ ಬೆಳೆಗೆ ಒತ್ತು ನೀಡುವಂತೆ ರೈತರಲ್ಲಿ ಜಾಗೃತಿ ಮೂಡಿಸುವ ಕುರಿತು ಕ್ರಮ ಕೈಗೊಳ್ಳಲಿದ್ದೇವೆ. –ಯಶಪಾಲ್, ಡಿಎಫ್‌ಒ
•ದತ್ತು ಕಮ್ಮಾರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.