ಚಿಕ್ಕರಸಿನಕೆರೆ ಸಹಕಾರ ಸಂಘದಲ್ಲಿ ಅವ್ಯವಹಾರ

ಸಿಇಒ ಅವ್ಯವಹಾರದ ವಿರುದ್ಧ ಸದಸ್ಯರು, ನಿರ್ದೇಶಕರ ಆಕ್ರೋಶ • ಪ್ರತಿಭಟನೆ, ದೂರುಗಳಿಗೂ ಕಿಮ್ಮತ್ತಿಲ್ಲ

Team Udayavani, May 7, 2019, 3:20 PM IST

mandya-tdy-2..

ಭಾರತೀನಗರ: ರೈತರಿಗೆ ಕೃಷಿ ಮಾಹಿತಿ, ಸಾಲ ಸೌಲಭ್ಯ ಒದಗಿಸಲು ರೂಪುಗೊಂಡಿದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು. ರಾಜ್ಯಾದ್ಯಂತ ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಿದೆ. ಆದರೆ ಚಿಕ್ಕರಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಮ್ಮ ಸರ್ವಾಧಿಕಾರಿ ಧೋರಣೆ, ಅವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಸಂಘದ ನಿರ್ದೇಶಕರು, ಸದಸ್ಯರ ಆಗ್ರಹಿಸಿದ್ದಾರೆ.

ಸಹಕಾರ ಸಂಘದಲ್ಲಿ 13 ಮಂದಿ ನಿರ್ದೇಶಕರು ಆಯ್ಕೆಗೊಂಡಿದ್ದಾರೆ. ಆದರೆ ಚುನಾಯಿತ ಪ್ರತಿನಿಧಿಗಳಿಗಿಂತ ಸಿಇಒ ಗಿರಿಜಮ್ಮ ಅವರೇ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಇವರ ಅಕ್ರಮ, ಅವ್ಯವಹಾರ ಒಂದೆರಡಲ್ಲ. ಸಂಘಕ್ಕೆ ಬರುವ ಸರ್ಕಾರಿ ಯೋಜನೆಗಳ ಸೌಲಭ್ಯಗಳಲ್ಲಿ ಬಹುಪಾಲು ಈಕೆಯೇ ಗುಳುಂ ಮಾಡುತ್ತಿದ್ದಾರೆ. ಮೇಲಧಿಕಾರಿಗಳು ಜಾಣಕುರುಡುತನದಿಂದ ವರ್ತಿಸುತ್ತಿರುವುದು ಮತ್ತಷ್ಟು ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ಸಾಲ ಮನ್ನಾ: ಚಿಕ್ಕರಸಿನಕೆರೆ ಕೆಲ ರೈತರಿಂದ ಹೆಬ್ಬೆಟ್ಟು ಸಹಿ ಪಡೆದು ತಾನೇ ಸಾಲ ಪಡೆದುಕೊಂಡು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ ಸಾಲಮನ್ನಾ ಸೌಲಭ್ಯವನ್ನೂ ಪಡೆದಿದ್ದಾರೆ. ಸಂಘದಲ್ಲಿ 195 ರೈತರು ಸಾಲ ಪಡೆದಿದ್ದು, ಅವರಲ್ಲಿ ಸುಮಾರು 67 ಮಂದಿಗೆ ಸಾಲ ಮನ್ನಾ ಸೌಲಭ್ಯ ದೊರೆತಿಲ್ಲ. ಆದರೆ, ಇವರು ಹೆಬ್ಬೆಟ್ಟು ಹಾಕಿಸಿಕೊಂಡು ಪಡೆದಿರುವ ಸಾಲಕ್ಕೆ ಮಾತ್ರ ಮನ್ನಾ ಸೌಲಭ್ಯ ದೊರೆತಿದೆ.

ವೇತನ ನೀಡಿಲ್ಲ: ಸಂಘದ ನೌಕರರಿಗೂ ಒಂದು ವರ್ಷದಿಂದ ವೇತನ ನೀಡಿಲ್ಲ. ಜೊತೆಗೆ ನೌಕರರ ಪಿಎಫ್ 3.80 ಲಕ್ಷ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆಂದು ನೌಕರರು ಆರೋಸಿದ್ದಾರೆ. ಇದಲ್ಲದೆ ಪಡಿತರ ವಿತರಣೆ, ಸ್ತ್ರೀಶಕ್ತಿ ಸಂಘಗಳ ಹಣ ದುರುಪಯೋಗ ಮಾಡಿಕೊಂಡಿರುವ ಸಿಇಒ ಗಿರಿಜಮ್ಮ ದಬ್ಟಾಳಿಕೆ ಖಂಡಿಸಿ ಸಂಘದ ಸದಸ್ಯರು, ನಿರ್ದೇಶಕರು ಆಡಳಿತ ಮಂಡಳಿಯ ವಾರ್ಷಿಕ ಸಭೆಯನ್ನೂ ರದ್ದು ಪಡಿಸಿ ಅನೇಕ ಬಾರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಕ್ಯಾರೇ ಎನ್ನದ ಗಿರಿಜಮ್ಮನ ಡೋಂಟ್ ಕೇರ್‌ ವರ್ತನೆಯಿಂದ ಬೇಸತ್ತ ಗ್ರಾಮಸ್ಥರು ಅವರ ಅನ್ಯಾಯ, ಅಕ್ರಮಗಳನ್ನು ಕರಪತ್ರದಲ್ಲಿ ಮುದ್ರಿಸಿ ಇಡೀ ಗ್ರಾಮಕ್ಕೆ ಹಂಚಿಸಿದ್ದರು.

ಚಿಕ್ಕರಸಿನಕೆರೆ, ಗುರುದೇವರಹಳ್ಳಿ ಮತ್ತು ಕೆಂಚೇಗೌಡನದೊಡ್ಡಿ ವ್ಯಾಪ್ತಿಗೊಳಪಡುವ ಈ ಕೃಷಿ ಪತ್ತಿನ ಸಹಕಾರ ಸಂಘ ದಿವಾಳಿಯಾಗುತ್ತದೆಂಬ ಆತಂಕ ಗ್ರಾಮಸ್ಥದ್ದು. ಸಿಇಒ ಗಿರಿಜಮ್ಮ ನನಗೆ ಮೇಲಧಿಕಾರಿಗಳು, ರಾಜಕಾರಣಿಗಳು ನನ್ನ ಸಂಪರ್ಕದಲ್ಲಿದ್ದಾರೆ. ನನ್ನನ್ನು ಯಾರೂ ಏನೂ ಮಾಡಲಾಗಲ್ಲ ಎಂದು ಬೆದರಿಸುವುದಲ್ಲದೆ, ಹಿಟ್ಲರ್‌ ಆಡಳಿತ ನಡೆಸುತ್ತಿದ್ದಾರೆ ಎಂದು ಸಂಘದ ಸದಸ್ಯರು, ನಿರ್ದೇಶಕರು ಆರೋಪಿಸಿದ್ದಾರೆ.

ಕಳೆದ 10 ವರ್ಷಗಳಿಂದಲೂ ಸಹಕಾರ ಸಂಘದಲ್ಲಿ ಹಣ ದುರುಪಯೋಗವಾಗುತ್ತಲೇ ಇದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸಂಘದ ಆಡಳಿತ ವ್ಯವಸ್ಥಾಪಕರಾಗಲಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಲಿ ಯಾರೂ ಸಿಇಒ ಗಿರಿಜಮ್ಮ ಅವರನ್ನು ಪ್ರಶ್ನಿಸುತ್ತಿಲ್ಲ. ಮೂರು ಗ್ರಾಮಗಳಲ್ಲಿ ಗಿರಿಜಮ್ಮ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಗಿರಿಜಮ್ಮ ಮಾಡಿರುವ ಅಕ್ರಮ ಅವ್ಯವಹಾರಗಳ ಕುರಿತು ತನಿಖೆಯೂ ನಡೆಯುತ್ತಿದೆ. ಆದರೂ ಪ್ರಭಾವಿ ರಾಜಕಾರಣಿಗಳು ಮತ್ತು ಮೇಲಧಿಕಾರಿಗಳಿಂದ ಪ್ರಭಾವ ಬೀರಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

● ಅಣ್ಣೂರು ಸತೀಶ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.