ಮಗನ ನೋಡಲು ಬಂದು ಮೃತದೇಹ ಕೊಂಡೊಯ್ದರು!


Team Udayavani, May 7, 2019, 4:29 PM IST

2-b

ಬೆಂಗಳೂರು: ಮಗನ ಬರುವಿಕೆಗೆ ಕಾದಿದ್ದ ಪೋಷಕರು, ಹಲವು ಬಾರಿ ದೂರವಾಣಿ ಕರೆ ಮಾಡಿದರೂ ಆತ ಸ್ವೀಕರಿಸದ ಹಿನ್ನೆಲೆಯಲ್ಲಿ ಆತ ವಾಸವಿದ್ದ ಪಿ.ಜಿ ಬಳಿ ತೆರಳಿದಾಗ ಮಗ ಮಲಗಿದ್ದ ಹಾಸಿಗೆಯಲ್ಲೇ ಪ್ರಾಣ ಬಿಟ್ಟಿದ್ದ ಘಟನೆ ಮತ್ತಿಕೆರೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಆಂಧ್ರಪ್ರದೇಶದಿಂದ ಮಗನನ್ನು ನೋಡಲು ಬಂದಿದ್ದ ರೈಲ್ವೆ ಅಧಿಕಾರಿ ಮೋಹನ್‌ ದಂಪತಿ, ದಿಢೀರ್‌ ಹೃದಯಾಘಾತದಿಂದ ಮೃತಪಟ್ಟಿದ್ದ ಮಗ ರಾಮಸ್ವಾಮಿಯ ಮೃತದೇಹವನ್ನು ಕೊಂಡೊಯ್ದ ಕರುಣಾಜನಕ ಘಟನೆ ಇದು.

ರಾಮಸ್ವಾಮಿ ಸಾಯಿ (21) ಹೃದಯಾಘಾತದಿಂದ ಮೃತಪಟ್ಟ ಯುವಕ. ಎಂ.ಎಸ್‌ ರಾಮಯ್ಯ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ರಾಮಸ್ವಾಮಿ, ಮತ್ತಿಕೆರೆಯ ಪಿ.ಜಿ ಒಂದರಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವಾಸವಿದ್ದ. ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಪೋಷಕರಿಂದ ಸಹಿ ಬೇಕಿತ್ತು. ಹೀಗಾಗಿ, ಬೆಂಗಳೂರಿಗೆ ಬರುವಂತೆ ಪೋಷಕರಿಗೆ ತಿಳಿಸಿದ್ದ.

ಹಲವು ತಿಂಗಳಿಂದ ಮಗನನ್ನು ನೋಡಿರದೆ ಹೆತ್ತವರು, ಅವನನ್ನು ನೋಡಿದಂತಾಗುತ್ತದೆ ಎಂದು ಭಾನುವಾರ ರಾತ್ರಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದಾರೆ. ಸೋಮವಾರ ಮುಂಜಾನೆ 5.30ರ ಸುಮಾರಿಗೆ ತಂದೆಗೆ ಕರೆಮಾಡಿದ್ದ ರಾಮಸ್ವಾಮಿ, ಮತ್ತಿಕೆರೆ ಬಸ್‌ ನಿಲ್ದಾಣದ ಹತ್ತಿರ ಬನ್ನಿ, ನಾನು ಬಂದು ಕರೆದೊಯ್ಯುತ್ತೇನೆ ಎಂದು ತಿಳಿಸಿದ್ದ.

ಅದರಂತೆ ಮತ್ತಿಕೆರೆ ಬಸ್‌ ನಿಲ್ದಾಣದ ಹತ್ತಿರ ಹೋದ ಪೋಷಕರು ಮಗನಿಗೆ ಹಲವು ಬಾರಿ ಕರೆ ಮಾಡಿದರೂ ಸ್ವೀಕರಿಸಿಲ್ಲ. ಹೀಗಾಗಿ ಮಗ ವಾಸವಿದ್ದ ಮತ್ತಿಕರೆಯ ಪಿ.ಜಿಗೆ ಹೋಗಿದ್ದಾರೆ. ಆತನಿದ್ದ ಕೊಠಡಿ ಒಳಗೆ ಪ್ರವೇಶಿಸಿದ ಪೋಷಕರಿಗೆ ಗರಬಡಿದಂತಾಗಿದೆ. ಮಗ ರಾಮಸ್ವಾಮಿ ಹಾಸಿಗೆಯಲ್ಲಿ ಮಲಗಿದ್ದವನು ಅಲುಗಾಡುತ್ತಿರಲಿಲ್ಲ.

ಗಾಬರಿಕೊಂಡ ಮೋಹನ್‌ ದಂಪತಿ, ಕೂಗಿಕೊಂಡಿದ್ದಾರೆ. ಪಿ.ಜಿಯಲ್ಲಿದ್ದವರ ಸಹಕಾರದಿಂದ ಪುತ್ರನನ್ನು ಆಸ್ಪತ್ರೆಗೆ ಕರೆದೊಯ್ದಾಗ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಠಾಣೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಹೃದಯಾಘಾತ
ವಿದ್ಯಾರ್ಥಿ ರಾಮಸ್ವಾಮಿ ಸಾಯಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಅವರ ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಪೋಷಕರು ಕೂಡ ಸಾವಿನ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಅವರು ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಯಶವಂತಪುರ ಠಾಣೆ
ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.