ಮರಿದೇವ ಇನ್ನು ಮುಂದೆ ಮಾದೇವ
ವಾರಾಂತ್ಯದಲ್ಲಿ ಮಾದೇಶ್ವರನ ಮಹಿಮೆ!
Team Udayavani, May 8, 2019, 3:00 AM IST
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಭಕ್ತಿ ಪ್ರಧಾನ ಕಥಾಹಂದರ ಹೊಂದಿರುವ ಉಘೇ ಉಘೇ ಮಾದೇಶ್ವರ ಧಾರಾವಾಹಿ ಸಾಕಷ್ಟು ಅದ್ಧೂರಿಯಾಗಿ, ವೀಕ್ಷಕರ ಮನಗೆಲ್ಲುತ್ತ ಮೂಡಿ ಬರುತ್ತಿದೆ. ಸದ್ಯ ಉಘೇ ಉಘೇ ಮಾದೇಶ್ವರ ಧಾರಾವಾಹಿ ಪ್ರಮುಖ ಘಟ್ಟಕ್ಕೆ ಬಂದು ನಿಂತಿದ್ದು, ಬಾಲಕ ಮರಿದೇವ ಇನ್ನು ಮುಂದೆ ದುಂಡುಮುಖದ ಅಂದಗಾರ ಮಾದಪ್ಪನಾಗಿ, ಮಾದೇಶ್ವರರಾಗಿ ಬೆಳೆದು ನಿಲ್ಲುವ ಪರ್ವಕಾಲದ ಚಿತ್ರಣ ಆರಂಭವಾಗಲಿದೆ.
ಇದೇ ಮೇ 11ರ ಸಂಚಿಕೆಯಿಂದ ಬಾಲಕ ಮರಿದೇವ, ಮಾದೇಶ್ವರನಾಗಿ ವೀಕ್ಷಕರ ಮುಂದೆ ಬರುತ್ತಿದ್ದಾನೆ. ಇನ್ನು ಮುಂದೆ ಮಾದೇಶ್ವರರ ಪಾತ್ರದಲ್ಲಿ ನಟ ಆರ್ಯನ್ ರಾಜ್ ಕಾಣಿಸಿಕೊಳ್ಳುತ್ತಿದ್ದು, ಮಲೆ ಮಾದೇಶ್ವರನ ಇನ್ನೂ ಹಲವಾರು ಮಹಿಮೆಗಳನ್ನು ಮುಂದಿನ ಸಂಚಿಕೆಗಳಲ್ಲಿ ಕಾಣಬಹುದಾಗಿದೆ.
ಮುಂಬರುವ ಸಂಚಿಕೆಗಳನ್ನು ತುಂಬಾ ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುವಂತೆ ಮಾಡಲು ಧಾರಾವಾಹಿಯಲ್ಲಿ ವಿಶೇಷ ಗ್ರಾಫಿಕ್ಸ್ ತಂತ್ರಜ್ಞಾನವನ್ನೂ ಬಳಸಿಕೊಳ್ಳಲಾಗಿದೆ. ಉಘೇ ಉಘೇ ಮಾದೇಶ್ವರ ವಾರಾಂತ್ಯದ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6ಗಂಟೆಗೆ ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ನವೀನ್ ಕೃಷ್ಣ ನಿರ್ದೇಶನ ಮತ್ತು ಮಹೇಶ್ ಸುಖಧರೆ ಅವರ ಪ್ರಧಾನ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಧಾರಾವಾಹಿ ಮೂಡಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.