ಜಿಲ್ಲಾದ್ಯಂತ ಬಸವ ಜಯಂತಿ ಸಂಭ್ರಮ


Team Udayavani, May 8, 2019, 3:00 AM IST

jilla

ದೇವನಹಳ್ಳಿ: ಬಸವಣ್ಣನವರು ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ, ಕಂದಾಚಾರ, ಮೂಢ ನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದ್ದಲ್ಲದೇ, ಮಾನವೀಯತೆಯನ್ನು ಎತ್ತಿ ಹಿಡಿದ ವಿಶ್ವದ ಮಹಾನ್‌ ಗುರು ಎಂದು ಗುರುತಿಸಿಕೊಂಡಿದ್ದಾರೆ ಎಂದು ಬಸವ ತತ್ವ ಚಿಂತಕ ಬಸವರಾಜ್‌ ತಿಳಿಸಿದರು.

ಕುಂದಾಣ ಹೋಬಳಿ ಚಪ್ಪರದಕಲ್ಲು ಸರ್ಕಲ್‌ ಬಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಸ್ಯೆಗಳ ವಿರುದ್ಧ ಹೋರಾಟ: 12ನೇ ಶತಮಾನದಲ್ಲಿ ಬಿಜ್ಜಳನ ರಾಜ್ಯದಲ್ಲಿ ಅರ್ಥ ಸಚಿವರಾಗಿದ್ದ ಬಸವಣ್ಣ, ಸಮಾಜದಲ್ಲಿನ ಹಲವಾರು ಸಮಸ್ಯೆಗಳನ್ನು ಬುಡ ಸಮೇತ ಕಿತ್ತು ಹಾಕಲು ಶ್ರಮಿಸಿದ್ದಾರೆ ಎಂದು ಹೇಳಿದರು.

ಸಂವಿಧಾನದಲ್ಲೂ ಬಸವಣ್ಣನ ತತ್ವ: ವೀರಶೈವ ಲಿಂಗಾಯುತ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಶಾಂತ್‌ ಕಲ್ಲೂರು ಮಾತನಾಡಿ, ಬಸವಣ್ಣ ಇದೇ ನೆಲದಲ್ಲಿ ಹುಟ್ಟಿ 886ವರ್ಷಗಳೇ ಕಳೆದಿವೆ. ಸಮಾನತೆಗಾಗಿ ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದಲ್ಲಿಯೂ ಸಹ ಬಸವಣ್ಣನವರ ತತ್ವಗಳ ಪರಿಕಲ್ಪನೆಗಳಿವೆ.

ಬಸವ ಜಯಂತಿ ಬರೀ ಲಿಂಗಾಯತ ವೀರಶೈವರಿಗೆ ಮಾತ್ರ ಸೀಮಿತವಲ್ಲ. ಎಲ್ಲಾ ಸಮುದಾಯಗಳ ಒಳತಿಗಾಗಿ ಹೋರಾಟ ನಡೆಸಿದ ಆದರ್ಶ ಪುರಷ ಬಸವಣ್ಣನವರ ಜಯಂತಿಯನ್ನು ಎಲ್ಲರೂ ಆಚರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾಜ ಸುಧಾರಕ: ರಾಜ್ಯ ವಿಜ್ಞಾನ ಪರಿಷತ್‌ ಉಪಾಧ್ಯಕ್ಷ ಹುಲಿಕಲ್‌ ನಟರಾಜ್‌ ಮಾತನಾಡಿ, ಬಸವಣ್ಣ ಬದುಕಿದ್ದು ಕೇವಲ 65 ವರ್ಷ. 12ನೇ ಶತಮಾನದಲ್ಲಿ ಹದಗೆಟ್ಟಿದ್ದ ಸಮಾಜದಲ್ಲಿನ ಅಂಕುಡೊಂಕುಗಳನ್ನು ಸುಧಾರಿಸುವ ಕಾಯಕವನ್ನು ಬಸವಣ್ಣನವರು ಮಾಡುತ್ತಿದ್ದರು. ಸಮಾನತೆ ಎಂಬ ದಿವ್ಯ ಜ್ಯೋತಿಯನ್ನು ತರುವುದರ ಮೂಲಕ ಎಲ್ಲರ ಮನಸ್ಸಿನಲ್ಲಿ ಚಿರಾಯು ಆದವರಲ್ಲಿ ಒಬ್ಬರಾರಿಗದ್ದಾರೆ.

ಹಲವಾರು ಗಣ್ಯರು ವಿಶ್ವಕ್ಕೆ ತಮ್ಮದೇ ಆದ ಹಲವಾರು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಬಸವಣ್ಣನವರು ಸಹ ವಚನ ಸಾಹಿತ್ಯದ ಮೂಲಕ ತಮ್ಮ ಅಪಾರ ಕೊಡುಗೆಯನ್ನು ನೀಡಿದ್ದಾರೆ. ವೈಚಾರಿಕತೆಗೆ ಹೆಚ್ಚಾಗಿ ಒತ್ತು ನೀಡುತ್ತಿದ್ದರು. ಅಸ್ಪೃಶ್ಯತೆಯ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು ಎಂದು ಹೇಳಿದರು.

ವ್ಯಕ್ತಿ ಪೂಜೆ ಬೇಡ: ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಬುದ್ಧ, ಬಸವಣ್ಣ, ಅಂಬೇಡ್ಕರ್‌ ಒಂದು ರೀತಿಯ ಕೆಚ್ಚೆದೆಯ ವೀರರು. ವಚನಗಳು ಸಂವಿಧಾನ ಹಾಗೂ ಕಾನೂನು ರಚನೆಗೆ ಮೂಲ ಪ್ರೇರಣೆಯಾಗಿದೆ. ವ್ಯಕ್ತಿ ಪೂಜೆಗಿಂತ ಮಹನೀಯರ ಆದರ್ಶ ಪಾಲನೆಗೆ ಹೆಚ್ಚು ಒತ್ತು ನೀಡುವಂತಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಧಾ ಪಾಟೀಲ್‌, ವಕೀಲೆ ಪೂರ್ಣಿಮ ಮಲ್ಲೇಶ್‌, ವೀರಶೈವ ಲಿಂಗಾಯುತ ಸಮಾಜದ ತಾಲೂಕು ಘಟಕಾಧ್ಯಕ್ಷ ರಮೇಶ್‌, ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್‌, ಖಜಾಂಚಿ ಕೋಡಿಹಳ್ಳಿ ನಾಗೇಶ್‌, ಉಪಾಧ್ಯಕ್ಷ ನಾಗಭೂಷಣ್‌, ಮಹಿಳಾ ಘಟಕದ ಉಪಾಧ್ಯಕ್ಷ ಶಶಿಕಲಾ, ಮುಖಂಡರಾದ ಬಸವರಾಜು, ವೀರಭದ್ರಪ್ಪ, ವೈ.ಸಿ.ಸತೀಶ್‌, ಆರ್‌.ಗಿರೀಶ್‌, ಪ್ರಕಾಶ್‌, ವಿಶ್ವನಾಥ್‌, ಸೋಮಶೇಖರ್‌, ಶಾಂತಕುಮಾರ್‌, ನಳಿನಾ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.