ಶಾಂತಂ ತಾಪಂ

ಬೇಸಿಗೆಯಲ್ಲಿ ಮೈಮೇಲೆ ಗುಳ್ಳೆಗಳು!

Team Udayavani, May 8, 2019, 6:00 AM IST

1

ಬೇಸಿಗೆ ಕಾಲದಲ್ಲಿ ಚರ್ಮ ರೋಗಗಳು, ಅದರಲ್ಲಿಯೂ “ಉಷ್ಣ ಗುಳ್ಳೆಗಳು’ ಅಥವಾ “ಕುರು’ ಸಾಮಾನ್ಯವಾಗಿ ಕಂಡುಬರುತ್ತವೆ. ಇದು ಬ್ಯಾಕ್ಟೀರಿಯಾ ಸೋಂಕಾಗಿದ್ದು, ಚರ್ಮದ ಮೇಲೆ ಅಥವಾ ಒಳಗಡೆ ಆಗುವ ಬಾವು/ಕೀವು ತುಂಬಿಕೊಳ್ಳುವ ಸಮಸ್ಯೆಯಾಗಿದೆ. ದೇಹದ ನಿರ್ಜಲೀಕರಣ, ಚರ್ಮದ ಬಿರುಕು ಹಾಗೂ ತುರಿಕೆ, ಸೀಳುವಿಕೆ ಅಥವಾ ಗಾಯಗಳು, ಬೆವರು ಗ್ರಂಥಿಗಳ ಕಾರ್ಯದಲ್ಲಾಗುವ ಅಡಚಣೆ ಇದಕ್ಕೆ ಕಾರಣ.

ಸ್ತ್ರೀಯರು ಪುರುಷರಿಗಿಂತ ಹೆಚ್ಚು ಬೆವರುತ್ತಾರೆ. ದೇಹದಲ್ಲಿನ ತಾಪ ಮಟ್ಟವನ್ನು ಕಡಿಮೆ ಮಾಡಲು ಬೆವರಿನ ರೂಪದಲ್ಲಿ ಚರ್ಮವು ನೀರಿನ ಅಂಶವನ್ನು ಹೊರಹಾಕುತ್ತದೆ. ಈ ಸಮಯದಲ್ಲಿ ಬ್ಯಾಕ್ಟೀರಿಯಾಗಳು ಬೆವರಿನ ಜೊತೆ ಸೇರಿ ರಾಸಾಯನಿಕ ಚಟುವಟಿಕೆಗಳನ್ನು ನಡೆಸಿದಾಗ ಬೆವರಿನ ವಾಸನೆ ಅಧಿಕವಾಗುವುದಲ್ಲದೆ, ಸೋಂಕು ತಗುಲುವ ಸಂಭವಗಳೂ ಹೆಚ್ಚು. ಇವು ದೇಹದ ಯಾವುದೇ ಭಾಗದಲ್ಲಿ ಕಂಡು ಬರಬಹುದಾದರೂ, ಹೆಚ್ಚಾಗಿ ಕಂಕುಳ ಭಾಗ, ತೊಡೆಗಳ ಸಂಧಿ, ಕಾಲು, ಸೊಂಟದ ಭಾಗಗಳಲ್ಲಿ ಉಂಟಾಗುತ್ತವೆ. ಉಷ್ಣ ಗುಳ್ಳೆಗಳು ಚರ್ಮದ ಮೇಲೆ ಅಥವಾ ಒಳಗೆ ಆಗುತ್ತವೆ.

ಚರ್ಮದ ಮೇಲೆ ಕುರು ಆದಾಗ ಆ ಜಾಗದಲ್ಲಿ ತೀವ್ರ ನೋವು ಹಾಗೂ ಚರ್ಮ ಬಿಸಿಯಾಗಿ ಕೀವು ತುಂಬಿಕೊಂಡಿರುತ್ತದೆ. ಸೆಳೆತದಿಂದಾಗಿ 2-3 ದಿನ ಜ್ವರ ಕಾಣಿಸಿಕೊಳ್ಳಲೂಬಹುದು. ಚರ್ಮದ ಒಳಗೆ ಕುರು ಆದಲ್ಲಿ ಹೊಟ್ಟೆ ನೋವು ಅಥವಾ ಹಸಿವಿಲ್ಲದಿರುವುದು, ಸುಸ್ತು, ಜ್ವರ, ತೂಕದಲ್ಲಿ ವ್ಯತ್ಯಾಸ ಕಂಡುಬರಬಹುದು.

ಏನ್‌ ಪರಿಹಾರ?
– ಕುರು ಆದ ಜಾಗದ ಸುತ್ತ ತೆಂಗಿನೆಣ್ಣೆ ಅಥವಾ ಬೇವಿನ ಎಣ್ಣೆಯನ್ನು ಸವರಿ, ಒಂದು ಗಂಟೆಯ ನಂತರ ಸ್ನಾನ ಮಾಡಿ.
– ಅಲೋವೆರಾ ಜೆಲ… ಮತ್ತು ಅರಿಶಿನ ಮಿಕ್ಸ್ ಮಾಡಿ ಹಚ್ಚುವುದರಿಂದ ಚರ್ಮದ ಆರೋಗ್ಯ ಹೆಚ್ಚುತ್ತದೆ.
– ಕುರು ಆದ ಜಾಗದಲ್ಲಿ ಬೆಳ್ಳುಳ್ಳಿಯನ್ನು ಜಜ್ಜಿ ಅದರ ಪೇಸ್ಟ್ ಅನ್ನು ಇಟ್ಟು ಒಂದು ತೆಳು ಬಟ್ಟೆಯಿಂದ ಕಟ್ಟಿಕೊಂಡರೆ ಸಮಸ್ಯೆ ಬೇಗನೆ ನಿವಾರಣೆ ಆಗುತ್ತದೆ.
– ಲಿಂಬೆ ರಸವನ್ನು ನೇರವಾಗಿ ಕುರುವಿನ ಸುತ್ತ ಹಚ್ಚಿ 5 -10 ನಿಮಿಷದ ಬಳಿಕ ತೊಳೆದರೆ ಉರಿ, ನೋವು ಕಡಿಮೆಯಾಗುವುದು.
– ಕಹಿಬೇವಿನ ಸೊಪ್ಪನ್ನು ಅರೆದು ಪೇಸ್ಟ್ ಮಾಡಿ ಹಚ್ಚುವುದರಿಂದ ಅಥವಾ ಬೇವಿನ ಎಲೆಗಳನ್ನು ನೀರಿನಲ್ಲಿ ಹಾಕಿ ಸ್ನಾನ ಮಾಡುವುದರಿಂದ ಕುರು ಮಾಯವಾಗುತ್ತದೆ.

ಹೀಗೆ ಮಾಡಿ…
– ದೇಹವನ್ನು ತಂಪುಗೊಳಿಸುವುದರ ಮೂಲಕ ಆಂತರಿಕ ಹಾಗೂ ಬಾಹ್ಯ ಆರೋಗ್ಯವನ್ನು ಕಾಪಾಡಿಕೊಳ್ಳಿ.
– ಸಾಕಷ್ಟು ನೀರು ಕುಡಿಯಿರಿ.
– ಜಂಕ್‌ ಆಹಾರ ಪದಾರ್ಥಗಳ ಸೇವನೆಯನ್ನು ನಿಲ್ಲಿಸಿ.
– ಹಣ್ಣು, ತರಕಾರಿ, ಸೊಪ್ಪು, ಧಾನ್ಯಗಳನ್ನು ಹೆಚ್ಚೆಚ್ಚು ಸೇವಿಸಿ.
– ಮೆಂತೆ, ಗಸಗಸೆ, ಜೀರಿಗೆ, ಮಜ್ಜಿಗೆಯಂಥ ತಂಪು ಪದಾರ್ಥಗಳು ದೇಹಕ್ಕೆ ಹಿತಕಾರಿ.

– ಡಾ. ಶ್ರೀಲತಾ ಪದ್ಯಾಣ, ಪ್ರಕೃತಿ ಚಿಕಿತ್ಸಾತಜ್ಞೆ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.