ಕೆಂಪಿಮಜಲು: ನದಿ ನೀರು ತಡೆದಿದ್ದ ಮರಳು ಚೀಲಗಳ ತೆರವು
Team Udayavani, May 8, 2019, 5:15 AM IST
ಕೆಂಪಿಮಜಲು ಸಮೀಪ ನದಿ ನೀರಿಗೆ ಅಡ್ಡವಾಗಿಟ್ಟಿದ್ದ ಮರಳು ಚೀಲಗಳನ್ನು ತೆರವುಗೊಳಿಸಲಾಯಿತು.
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಗಡಿ ಗ್ರಾಮವಾದ ಇಳಂತಿಲ – ಉಪ್ಪಿನಂಗಡಿ ನಡುವೆ ನೇತ್ರಾವತಿ ನದಿಯಲ್ಲಿ ಕೆಂಪಿಮಜಲು ಎಂಬಲ್ಲಿ ನೀರಿನ ಹರಿವನ್ನು ತಡೆಯಲು ಇರಿಸಿದ್ದ ಮರಳು ಹಾಗೂ ಚರಳಿನ ಗೋಣಿ ಚೀಲಗಳನ್ನು ಕಾಮಗಾರಿ ಮೂಲಕ ತೆರವುಗೊಳಿಸಲಾಗಿದೆ.
ನದಿಯಲ್ಲಿ ಹರಿಯುವ ನೀರಿಗೆ ಖಾಸಗಿ ವ್ಯಕ್ತಿಗಳು ತಡೆಯೊಡ್ಡಿದ್ದರಿಂದ ಇಳಂತಿಲ ಗ್ರಾಮದ ಕಡವಿನಬಾಗಿಲು ಬಳಿ ಪಂಚಾಯತ್ ನಿರ್ಮಿಸಿದ ಭಾರೀ ಗಾತ್ರದ ಬಾವಿ ಬತ್ತಿ ಹೋಗುವ ಆತಂಕ ಎದುರಾಗಿತ್ತು. ಇದರಿಂದ ಎಚ್ಚೆತ್ತ ಇಳಂತಿಲ ಗ್ರಾ.ಪಂ. ಅಧ್ಯಕ್ಷ ಇಸುಬು ಪೆದಮಲೆ ಹಾಗೂ ಸದಸ್ಯ ಯು.ಟಿ. ಫಯಾಜ್ ಅಹಮ್ಮದ್ ಅವರು ನದಿ ನೀರಿನ ಹರಿವಿಗೆ ತಡೆಯಾಗಿರುವ ಕಾರಣವನ್ನು ಪತ್ತೆಹಚ್ಚಿದರು. ಕೆಂಪಿಮಜಲು ಎಂಬಲ್ಲಿ ಮರಳಿನ ಹಾಗೂ ಚರಳಿನ ಚೀಲವನ್ನು ನೀರಿಗೆ ಅಡ್ಡಲಾಗಿ ಇರಿಸಿದ್ದನ್ನು ಗಮನಿಸಿ, ತತ್ಕ್ಷಣವೇ ಜೆಸಿಬಿ ಹಾಗೂ ಕಾರ್ಮಿಕರನ್ನು ಕರೆಸಿ, ಸತತ ಆರು ಗಂಟೆಗಳ ಕಾಲ ಕೆಲಸ ನಿರ್ವಹಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದಾರೆ. ಈ ಪ್ರಯತ್ನದಿಂದಾಗಿ ನದಿ ಪಕ್ಕದಲ್ಲಿ ಗ್ರಾ.ಪಂ. ನಿರ್ಮಿಸಿರುವ ಕಾಂಕ್ರೀಟ್ ಬಾವಿಗೆ ನೀರು ಹರಿದಿದೆ.
ಸುಮಾರು 200ಕ್ಕೂ ಹೆಚ್ಚು ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಆಗುವುದನ್ನು ಮನಗಂಡು ಈ ಕಾರ್ಯಾಚರಣೆ ನಡೆಸಿದ್ದಾಗಿ ಅಧ್ಯಕ್ಷರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.