ಬಸವಣ್ಣನವರ ತತ್ವಾದರ್ಶ ಇಂದಿಗೂ ಪ್ರಸ್ತುತ: ಜೋಶಿ


Team Udayavani, May 8, 2019, 10:41 AM IST

hubali-tdy-5..

ಹುಬ್ಬಳ್ಳಿ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ಸಾಹಿತ್ಯ ಕೃತಿ ವಿತರಿಸಲಾಯಿತು.

ಹುಬ್ಬಳ್ಳಿ: ಬಸವಣ್ಣವರು ಜಗತ್ತಿಗೆ ಕಾಯಕ, ದಾಸೋಹ ತತ್ವಗಳನ್ನು ನೀಡಿದ ಆದರ್ಶ ವ್ಯಕ್ತಿಯಾಗಿದ್ದು, ಈ ಎರಡನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ವರ್ಗ ಕಾಣಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ಬನಶಂಕರಿ ಬಡಾವಣೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬಸವ ಸೇವಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರು ಜಗತ್ತಿಗೆ ವಿಶ್ವಶಾಂತಿಯ ಸಂದೇಶ ನೀಡಿದರು. ಶರಣ ಹಾಗೂ ಶರಣೆಯರಿಗೆ ವಚನಗಳನ್ನು ರಚಿಸಲು ಪ್ರೇರಣೆಯಾಗಿದ್ದರು. ಇವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಬಾಳಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಬಸವಣ್ಣವರ ಸಮಾನತೆ ತತ್ವ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಲಿಂಗ, ವರ್ಣ, ವರ್ಗಭೇದ ಹೋಗಲಾಡಿಸಲು ಪ್ರಯತ್ನಪಟ್ಟರು. ಜನರಿಗೆ ಬೋಧಿಸಿದಂತೆ ತಾವು ಬದುಕಿ ತೋರಿಸಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು ಎಂದು ಸಾರಿದರು. ಇವರ ವಚನಗಳು, ಚಿಂತನೆ ಕೇವಲ ಬೋಧನೆಗೆ ಸೀಮಿತವಾಗದೆ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣವರು ಸಮಾನತೆಗೆ ಹೋರಾಡಿದರು. ಅಂತರ್ಜಾತಿ ವಿವಾಹಕ್ಕೆ ನಾಂದಿ ಹಾಡಿದರು. ಆದರೆ ಇವು ಇಂದಿಗೂ ಸಮಸ್ಯೆಯಾಗಿ ಉಳಿದಿವೆ. 770 ವಚನಕಾರರು ಇವರ ಅನುಭವ ಮಂಟಪದಲ್ಲಿದ್ದರು. ಶರಣರ ವಚನಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಸಂಘ-ಸಂಸ್ಥೆಗಳಿಂದ ನಡೆಯಬೇಕು ಎಂದರು.

ಮಕ್ಕಳಿಗಾಗಿ ಆಯೋಜಿಸಿದ್ದ ವೇಷ ಭೂಷಣ ಸ್ಪರ್ಧೆಯಲ್ಲಿ ಪವಿತ್ರಾ ಪಿತಾಂಬರ ಪ್ರಥಮ, ಮಂದಾರ ಜಾಬಿನ್‌ ದ್ವಿತೀಯ, ದಾನೇಶ್ವರಿ ಜಾಬಿನ್‌ ತೃತೀಯ ಸ್ಥಾನ ಗಳಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಸವ ಸೇವಾ ಸಮಿತಿ ಅಧ್ಯಕ್ಷ ಡಾ| ಎಚ್.ವಿ. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ಕೆ. ಶಾಂತಾ ಬಸವರಾ, ರಾಘವೇಂದ್ರ ಕರೆಗಾರ, ಬಿ.ಎಸ್‌. ಮಾಳವಾಡ, ಸಿದ್ದರಾಮನಗೌಡ ಮಾಲೀಪಾಟೀಲ, ಮಹೇಶ ಬುರ್ಲಿ, ವಿ.ವಿ. ಕುರ್ತಕೋಟಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.