ಬಸವಣ್ಣನವರ ತತ್ವಾದರ್ಶ ಇಂದಿಗೂ ಪ್ರಸ್ತುತ: ಜೋಶಿ
Team Udayavani, May 8, 2019, 10:41 AM IST
ಹುಬ್ಬಳ್ಳಿ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ಸಾಹಿತ್ಯ ಕೃತಿ ವಿತರಿಸಲಾಯಿತು.
ಹುಬ್ಬಳ್ಳಿ: ಬಸವಣ್ಣವರು ಜಗತ್ತಿಗೆ ಕಾಯಕ, ದಾಸೋಹ ತತ್ವಗಳನ್ನು ನೀಡಿದ ಆದರ್ಶ ವ್ಯಕ್ತಿಯಾಗಿದ್ದು, ಈ ಎರಡನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ವರ್ಗ ಕಾಣಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಇಲ್ಲಿನ ಬನಶಂಕರಿ ಬಡಾವಣೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬಸವ ಸೇವಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರು ಜಗತ್ತಿಗೆ ವಿಶ್ವಶಾಂತಿಯ ಸಂದೇಶ ನೀಡಿದರು. ಶರಣ ಹಾಗೂ ಶರಣೆಯರಿಗೆ ವಚನಗಳನ್ನು ರಚಿಸಲು ಪ್ರೇರಣೆಯಾಗಿದ್ದರು. ಇವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಬಾಳಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಬಸವಣ್ಣವರ ಸಮಾನತೆ ತತ್ವ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಲಿಂಗ, ವರ್ಣ, ವರ್ಗಭೇದ ಹೋಗಲಾಡಿಸಲು ಪ್ರಯತ್ನಪಟ್ಟರು. ಜನರಿಗೆ ಬೋಧಿಸಿದಂತೆ ತಾವು ಬದುಕಿ ತೋರಿಸಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು ಎಂದು ಸಾರಿದರು. ಇವರ ವಚನಗಳು, ಚಿಂತನೆ ಕೇವಲ ಬೋಧನೆಗೆ ಸೀಮಿತವಾಗದೆ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣವರು ಸಮಾನತೆಗೆ ಹೋರಾಡಿದರು. ಅಂತರ್ಜಾತಿ ವಿವಾಹಕ್ಕೆ ನಾಂದಿ ಹಾಡಿದರು. ಆದರೆ ಇವು ಇಂದಿಗೂ ಸಮಸ್ಯೆಯಾಗಿ ಉಳಿದಿವೆ. 770 ವಚನಕಾರರು ಇವರ ಅನುಭವ ಮಂಟಪದಲ್ಲಿದ್ದರು. ಶರಣರ ವಚನಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಸಂಘ-ಸಂಸ್ಥೆಗಳಿಂದ ನಡೆಯಬೇಕು ಎಂದರು.
ಮಕ್ಕಳಿಗಾಗಿ ಆಯೋಜಿಸಿದ್ದ ವೇಷ ಭೂಷಣ ಸ್ಪರ್ಧೆಯಲ್ಲಿ ಪವಿತ್ರಾ ಪಿತಾಂಬರ ಪ್ರಥಮ, ಮಂದಾರ ಜಾಬಿನ್ ದ್ವಿತೀಯ, ದಾನೇಶ್ವರಿ ಜಾಬಿನ್ ತೃತೀಯ ಸ್ಥಾನ ಗಳಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಸವ ಸೇವಾ ಸಮಿತಿ ಅಧ್ಯಕ್ಷ ಡಾ| ಎಚ್.ವಿ. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ಕೆ. ಶಾಂತಾ ಬಸವರಾ, ರಾಘವೇಂದ್ರ ಕರೆಗಾರ, ಬಿ.ಎಸ್. ಮಾಳವಾಡ, ಸಿದ್ದರಾಮನಗೌಡ ಮಾಲೀಪಾಟೀಲ, ಮಹೇಶ ಬುರ್ಲಿ, ವಿ.ವಿ. ಕುರ್ತಕೋಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.