ಕೋಚಿಮುಲ್: 67 ನಾಮಪತ್ರ ಸ್ವೀಕೃತ

54 ಮಂದಿಯಿಂದ 67 ಉಮೇದುವಾರಿಕೆ • ರಂಗೇರಿದ ಹಾಲು ಒಕ್ಕೂಟದ ಚುನಾವಣೆ

Team Udayavani, May 8, 2019, 3:08 PM IST

kolar-tdy-2…

ಕೋಲಾರ: ಕೋಚಿಮುಲ್(ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ) ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ರಂಗೇರಿದ್ದು, ಒಟ್ಟು 54 ಮಂದಿ ಅಭ್ಯರ್ಥಿಗಳಿಂದ 67 ನಾಮಪತ್ರ ಸಲ್ಲಿಕೆಯಾಗಿದ್ದು, ಮಂಗಳವಾರ ನಡೆದ ಪರಿಶೀಲನೆಯಲ್ಲಿ ಎಲ್ಲವೂ ಸ್ವೀಕೃತಗೊಂಡವು.

ನಾಮಪತ್ರ ಸಲ್ಲಿಸಲು ಕಡೆ ದಿನವಾದ ಸೋಮವಾರ 39 ಮಂದಿ 53 ಉಮೇದುವಾರಿಕೆ ಸಲ್ಲಿಕೆಯಾಗಿದ್ದು, ಮಂಗಳವಾರ ಚುನಾವಣಾಧಿ ಕಾರಿ ಸೋಮಶೇಖರ್‌ ನಾಮಪತ್ರಗಳ ಪರಿಶೀಲನೆ ನಡೆಸಿದ್ದು, ಒಟ್ಟು 54 ಮಂದಿ ಸಲ್ಲಿಸಿದ್ದ 67 ಉಮೇದುವಾರಿಕೆ ಸ್ವೀಕೃತಗೊಂಡಿವೆ.

ಕೊನೆ ದಿನ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸುವ ಕೊನೆ ದಿನವಾದ ಮಂಗಳವಾರ ನಗರದ ಉಪವಿಭಾಗಾಧಿಕಾರಿ ಕಚೇರಿ ಆವರಣವು ಕಣಕ್ಕಿಳಿ ಯುವವರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿ ಯಾಯಿತು. ಬೆಳಗ್ಗೆಯಿಂದಲೆ ಚುನಾ ವಣಾಧಿಕಾರಿಯಾದ ಉಪವಿಭಾಗಾಧಿಕಾರಿ ಕಚೇರಿ ಸಮೀಪ ಹಲವು ಮಂದಿ ಜಮಾಯಿಸಿದ್ದರು. ಕಣಕ್ಕಿಳಿಯುವ ಅಭ್ಯ ರ್ಥಿಗಳ ಬೆಂಬಲಿಗರು ಹಾಜರಾಗಿದ್ದರು. ಕೋಲಾರ ಮಾತ್ರವಲ್ಲದೆ ಅವಳಿ ಜಿಲ್ಲೆ ಚಿಕ್ಕಬಳ್ಳಾಪುರ ದಿಂದ ಆಗಮಿಸಿದ್ದ ಜನತೆ ಅಭ್ಯರ್ಥಿ ಹಾಗೂ ಅಭ್ಯರ್ಥಿಗೆ ಸಾಥ್‌ ನೀಡಿದ ನಾಯಕರಿಗೆ ಜೈಕಾರ ಹಾಕಿದರು.

ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ನಾಮಪತ್ರ ಸಲ್ಲಿಸುವವರೊಂದಿಗೆ ಕೆಲವರಿಗಷ್ಟೇ ಕಚೇರಿ ಆವರಣದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಾಮಪತ್ರ ಸಲ್ಲಿಸಿ ಹೊರಬರುತ್ತಿದ್ದಂತೆ ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿದರಲ್ಲದೆ, ಮತ್ತೂಮ್ಮೆ ಕಣಕ್ಕಿಳಿದಿರುವ ಹಾಲಿ ನಿರ್ದೇಶಕ ಜಯಸಿಂಹ ಕೃಷ್ಣಪ್ಪ ಅವರು ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದರು.

ಕೋಚಿಮುಲ್ ಅಧ್ಯಕ್ಷರಾದ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರಲ್ಲದೆ, ಹಾಲಿ ನಿರ್ದೇಶಕರ ಪೈಕಿ ಬಹುತೇಕ ಮಂದಿ ಮತ್ತೂಮ್ಮೆ ಕಣಕ್ಕಿಳಿದಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಮಾತ್ರವಲ್ಲದೆ, ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷ ಮಂಜುನಾಥ್‌, ಮಾಜಿ ಅಧ್ಯಕ್ಷ ಪಿ.ಎನ್‌. ಕೇಶವರೆಡ್ಡಿ, ಮುಖಂಡರಾದ ಕೇಶವರೆಡ್ಡಿ, ಯಲುವಹಳ್ಳಿ ರಮೇಶ್‌, ಚಿಕ್ಕಬಳ್ಳಾಪುರ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌, ಮಾಲೂರು ಮಾಜಿ ಶಾಸಕ ಮಂಜುನಾಥಗೌಡ ಸೇರಿದಂತೆ ಹಲವು ಮಂದಿ ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಸಾಥ್‌ ನೀಡಿದರು.

ಉಪವಿಭಾಗಾಧಿಕಾರಿ ಕಚೇರಿ ಆವರಣದ ಹೊರಭಾಗದಲ್ಲಿ ನಾಮಪತ್ರ ಸಲ್ಲಿಸುವ ಹಾಗೂ ಅವರಿಗೆ ಸಾಥ್‌ ನೀಡಿದ ನಾಯಕರ ಬೆಂಬಲಿಗರು ಜಮಾಯಿಸಿದ್ದರು. ಜತೆಗೆ, ಕಾರುಗಳ ಕಾರುಬಾರು ಹೆಚ್ಚಿನ ಪ್ರಮಾಣದಲ್ಲಿತ್ತು. ಇದರಿಂದ ಸಂಚಾರ ಅಸ್ತವ್ಯವಸ್ಥಗೊಂಡಿತ್ತು. ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಗಿಂತಲೂ ರಂಗೇರಿರುವ ಕೋಚಿಮುಲ್ ನಿರ್ದೇಶಕ ಸ್ಥಾನ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಕೆಲ ನಾಯಕರು ಪ್ರತಿಷ್ಠೆಯಾಗಿ ಸ್ವೀಕರಿಸಿರುವುದು, ಒಕ್ಕೂಟದ ಅಕಾರ ಚುಕ್ಕಾಣಿ ಹಿಡಿಯುವ ಹಂಬಲ ಇದಕ್ಕೆ ಕಾರಣವಾಗಿದೆ.

ನಾಮಪತ್ರ ಸಲ್ಲಿಕೆಗೆ ಯಮಗಂಡಕಾಲ ಅಡ್ಡಿ: ಉಮೇದುವಾರಿಕೆ ಸಲ್ಲಿಸಲು ಒಳ್ಳೆ ಕಾಲಾಕ್ಕಾಗಿ ಕಾದರು ನಾಮಪತ್ರ ಸಲ್ಲಿಸುವ ಅಭ್ಯರ್ಥಿ, ನಾಯಕರಿಗೆ ಯಮಗಂಡಕಾಲವೂ ಕಾಡ ತೊಡಗಿತು. ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಯಮಗಂಡಕಾಲವಿದೆ. ಬಳಿಕ ಒಳ್ಳೆ ಕಾಲ ಕೂಡಿಬರಲಿದೆ ಎಂದು ಕೆಲ ಅಭ್ಯರ್ಥಿಗಳು ಹಾಗೂ ಅವರಿಗೆ ಸಾಥ್‌ ನೀಡಿದ ನಾಯಕರು ಕಾದಿದ್ದ ದೃಶ್ಯ ಕಂಡುಬಂತು. ಮಧ್ಯಾಹ್ನ 12ರ ಬಳಿಕ ನಾಮಪತ್ರ ಸಲ್ಲಿಸಲು ಮುಗಿಬಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.