ಘಟಬಂಧನ್‌ಗೆ ಗೌಡರೇ ಸೇತು


Team Udayavani, May 9, 2019, 6:07 AM IST

gowda

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿಯೇತರ ಒಕ್ಕೂಟ ರಚನೆಗೆ ಮುಂದಾಗಿರುವ ಟಿಆರ್‌ಎಸ್‌ ಮುಖ್ಯಸ್ಥ ಚಂದ್ರಶೇಖರರಾವ್‌ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ನ ಮಖ್ಯಸ್ಥ ಜಗನ್‌ಮೋಹನ್‌ರೆಡ್ಡಿ ಅವರ ಮನವೊಲಿಸಿ ಮಹಾಘಟ್ಬಂಧನ್‌ ತೆಕ್ಕೆಗೆ ಸೆಳೆಯಲು ಎಐಸಿಸಿ ಅಧ್ಯಕ್ಷ ರಾಹುಲ್ ಮುಂದಾಗಿದ್ದಾರೆ.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಈ ಕುರಿತು ಟಿಆರ್‌ಎಸ್‌ನ ಚಂದ್ರಶೇಖರರಾವ್‌ ಹಾಗೂ ವೈಆರ್‌ಎಸ್‌ನ ಜಗನ್‌ಮೋಹನ್‌ರೆಡ್ಡಿ ಜತೆ ಮಾತನಾಡುವಂತೆ ರಾಹುಲ್ ಮನವಿ ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಟಿಆರ್‌ಎಸ್‌ ಮುಖ್ಯಸ್ಥ ಚಂದ್ರಶೇಖರ್‌ ಅವರು ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿದ ಮಾಹಿತಿ ಪಡೆದುಕೊಂಡಿರುವ ರಾಹುಲ್ಗಾಂಧಿ, ಕಾಂಗ್ರೆಸ್‌ ಹಾಗೂ ಬಿಜೆಪಿಯೇತರ ಒಕ್ಕೂಟ ಸ್ಥಾಪನೆಗಿಂತ ಬಿಜೆಪಿ ದೂರ ಇಡುವ ಗುರಿಯೊಂದಿಗೆ ಮಹಾಘಟ್ಬಂಧನ್‌ನಲ್ಲೇ ಸೇರುವುದು ಸೂಕ್ತ ಎಂದಿದ್ದಾರೆ.

ಟಿಆರ್‌ಎಸ್‌, ವೈಎಸ್‌ಆರ್‌, ಎಸ್‌ಪಿ-ಬಿಎಸ್‌ಪಿ, ಟಿಎಂಸಿ, ಬಿಜೆಡಿ, ಎಎಪಿ, ಎಡ ಪಕ್ಷಗಳು ಮಹಾಘಟ್ಬಂಧನ್‌ ಜತೆಗೂಡಿದರೆ ಅಗತ್ಯವಾದರೆ ಮೈತ್ರಿಕೂಟದ ಹೆಸರು ಸರ್ವಸಮ್ಮತವಾಗಿ ಬದಲಾವಣೆ ಸಹ ಮಾಡಬಹುದು. ಆಗ ಬಿಜೆಪಿ ವಿರುದ್ಧ ನಿಜಕ್ಕೂ ಒಂದು ಪ್ರಬಲ ಶಕ್ತಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ರಾಹುಲ್ಗಾಂಧಿ, ದೇವೇಗೌಡರಿಗೆ ತಿಳಿಸಿದ್ದಾರೆ.

ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್‌ ಜತೆಗೂ ರಾಹುಲ್ಗಾಂಧಿ ಮಾತನಾಡಿದ್ದು, ಈಗಾಗಲೇ ಡಿಎಂಕೆ ಮಹಾಘಟ್ಬಂಧನ್‌ ಜತೆ ಇರುವುದರಿಂದ ಚಂದ್ರಶೇಖರರಾವ್‌ ಅವರ ಭೇಟಿಗೆ ಒಪ್ಪಿಲ್ಲ ಎಂದು ಹೇಳಲಾಗಿದೆ.

ಲೋಕಸಭೆ ಚುನಾವಣೆಯ ಐದು ಹಂತಗಳ ಮತದಾನದ ನಂತರದ ಪರಿಸ್ಥಿತಿಯಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಂ ಮಾಧವ್‌ ಸೇರಿ ಬಿಜೆಪಿ ನಾಯಕರೇ ಅನುಮಾನ ವ್ಯಕ್ತಪಡಿಸುತ್ತಿರುವುದರಿಂದ ಎಲ್ಲರೂ ಒಂದಾದರೆ ಬಿಜೆಪಿಯೇತರ ಮೈತ್ರಿಕೂಟ ಅಧಿಕಾರ ಹಿಡಿಯುವ ಸಾಧ್ಯತೆಯೂ ಇರುವುದರಿಂದ ಟಿಆರ್‌ಎಸ್‌-ವೈಎಸ್‌ಆರ್‌ ತಮ್ಮ ತೆಕ್ಕೆಗೆ ಸೆಳೆಯುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್‌ ಹೊಂದಿದೆ. ಇದೇ ಕಾರಣಕ್ಕೆ ಚಂದ್ರಶೇಖರ ರಾವ್‌ ಹಾಗೂ ಜಗನ್‌ಮೋಹನ್‌ರೆಡ್ಡಿ ಅವರೊಂದಿಗೆ ವೈಯಕ್ತಿಕವಾಗಿ ಉತ್ತಮ ಬಾಂಧವ್ಯ ಹೊಂದಿರುವ ದೇವೇಗೌಡರಿಗೆ ತಿಳಿಸಿದೆ ಎಂದು ತಿಳಿದು ಬಂದಿದೆ.

ನಿಲುವು

ಜೆಡಿಎಸ್‌, ಡಿಎಂಕೆ ಸೇರಿ ಲೋಕಸಭೆ ಚುನಾವಣೆಗೆ ಮುಂಚೆಯೇ ಮಹಾಘಟ್ಬಂಧನ್‌ ಜತೆ ಗುರುತಿಸಿಕೊಂಡಿರುವ ಪಕ್ಷಗಳು ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರಬೀಳುವವರೆಗೂ ಬೇರೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ತೀರ್ಮಾನಿಸಿವೆ. ಕಾಂಗ್ರೆಸ್‌ ನೇತೃತ್ವದ ಮಹಾಘಟ್ಬಂಧನ್‌ ಅಧಿಕಾರಕ್ಕೆ ಬಂದರೆ ರಾಹುಲ್ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಪಾದಿಸುವ ನಿಲುವು ತಾಳಿದೆ. ಆಂತರಿಕವಾಗಿ ಬಿಜೆಪಿಯಿಂದ ದೂರ ಇರುವ ಪಕ್ಷಗಳನ್ನು ಒಟ್ಟುಗೂಡಿಸುವ ಇರಾದೆ ಹೊಂದಿದೆ . ಸದ್ಯದಲ್ಲೇ ಚಂದ್ರಶೇಖರ್‌ ರಾವ್‌ ಜತೆ ದೇವೇಗೌಡರು ಅಥವಾ ಕುಮಾರಸ್ವಾಮಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.