ಮುದ್ದು ಮಕ್ಕಳ ಲೋಕ


Team Udayavani, May 9, 2019, 10:20 AM IST

Chinnari—Race

ಕಾಡು ಕೋಳಿಯನ್ನುನೋಡಿ ನಾಗರಹಾವು ಬಾಯಿ ಚಪ್ಪರಿಸಿತು. ಅದು “ಬನ್ನಿ ಬನ್ನಿ ಮಕ್ಕಳೇ… ನಿಮಗೆ ಈ ದಿನ ಹಬ್ಬದೂಟ” ಎಂದು ತನ್ನ ಮರಿಗಳನ್ನು ಕೂಗಿ ಕರೆಯಿತು. ಹಾವಿನ ಮರಿಗಳು ಬುಸುಗುಡುತ್ತಾ, ನಾಲಗೆ ಹೊರಚಾಚುತ್ತಾ ಕಾಡುಕೋಳಿಯತ್ತ ಮುನ್ನುಗ್ಗಿದವು…

ಒಂದು ಕಾಡಿನಲ್ಲಿ ತನ್ನ ಪಾಡಿಗೆ ತಾನು ಆಹಾರ ಹುಡುಕಿಕೊಂಡು ಅಲೆದಾಡುತ್ತಿದ್ದ ಕಾಡು ಕೋಳಿಯೊಂದು ಬೇಟೆಗಾರನ ಕಣ್ಣಿಗೆ ಕಾಣಿಸಿಕೊಂಡು ಬಿಟ್ಟಿತು. “ನಾನು ಕೆಟ್ಟೆ. ಬೇಟೆಗಾರ ನನ್ನನ್ನು ಕೊಲ್ಲದೆ ಬಿಡುವುದಿಲ್ಲ’ ಎಂದು ಭಯದಿಂದ ಕಾಡು ಕೋಳಿ ಓಡಿತು. ಕಾಡಿನ ಗಿಡ-ಮರಗಳ, ಬೇಲಿ-ಬಳ್ಳಿಗಳ, ಸಂದಿಗೊಂದಿಗಳ ನಡುವೆ ಪ್ರಾಣ ಭೀತಿಯಿಂದ ನುಗ್ಗಿತು.

ಕಡೆಗೆ, ದಿಕ್ಕು ತೋಚದಂತಾಗಿ ಒಂದು ದೊಡ್ಡ ಹುತ್ತದ ಹತ್ತಿರಕ್ಕೆ ಬಂದು ಭಯದಿಂದ ನಡುಗುತ್ತಾ ನಿಂತುಕೊಂಡಿತು. ಹುತ್ತದೊಳಗಿದ್ದ ಹಾವೊಂದು ತನ್ನ ತಲೆಯನ್ನು ಹೊರಚಾಚಿ ಕಾಡು ಕೋಳಿಯ ಪರಿಸ್ಥಿತಿಯನ್ನು ನೋಡಿತು. ಅದು “ಕಾಡು ಕೋಳಿಯೇ, ನೀನೇನೂ ಹೆದರಬೇಡ. ಬಾ ನನ್ನ ಹುತ್ತದೊಳಕ್ಕೆ. ಆತಂಕ ಬೇಡ. ಬೇಟೆಗಾರನಿಂದ ನಿನ್ನನ್ನು ನಾನು ಕಾಪಾಡುತ್ತೇನೆ’ ಎಂದು ಆಹ್ವಾನಿಸಿತು. ಸದ್ಯ, ಬದುಕಿದರೆ ಸಾಕೆಂಬ ಸ್ಥಿತಿಯಲ್ಲಿದ್ದ ಕಾಡು ಕೋಳಿ ಹಿಂದೆ ಮುಂದೆ ಯೋಚನೆ ಮಾಡದೆ ಹಾವಿನ ಹುತ್ತವನ್ನು ಹೊಕ್ಕಿತು.

ಹೊರಗಡೆ ಕಾಡು ಕೋಳಿ ಕಾಣದೆ ಬೇಟೆಗಾರ ಚಡಪಡಿಸಿದ. ಹುತ್ತದ ಸುತ್ತಮುತ್ತಲೆಲ್ಲಾ ಹುಡುಕಿದ. “ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಹೋಯಿತಲ್ಲ’ ಎಂದು ತನ್ನನ್ನು ತಾನು ಶಪಿಸುತ್ತಾ ಅಲ್ಲಿಂದ ಹೊರಡಲನುವಾದ. ಆದರೆ ಕಾಡು ಕೋಳಿ ಹತ್ತಿರದಲ್ಲೇ ಎಲ್ಲಾದರೂ ಅವಿತಿದ್ದರೆ ಎಂಬ ಆಸೆಯಿಂದ ಸ್ವಲ್ಪ ಹೊತ್ತು ಕಾದು ನಂತರ ಹೊರಡುವುದಾಗಿ ನಿಶ್ಚಯಿಸಿದ.

ಇತ್ತ ಹಾವು, ಹುತ್ತದೊಳಕ್ಕೆ ಬಂದ
ಕಾಡು ಕೋಳಿಯನ್ನು ತಿನ್ನುವ ಸಂಚು ಹೂಡಿತ್ತು. ಹಸಿದಿದ್ದ ತನ್ನ ಮರಿಗಳಿಗೆ ಆಹಾರ ನೀಡುವ ಸಲುವಾಗಿ ಅದು ಕಾಡು ಕೋಳಿಯನ್ನು ಹುತ್ತದೊಳಕ್ಕೆ ಆಹ್ವಾನಿಸಿತ್ತು. “ಬನ್ನಿ ಬನ್ನಿ ಮಕ್ಕಳೇ, ಈ ದಿನ ನಮಗೆ ಹಬ್ಬದೂಟ’ ಎಂದು ತನ್ನ ಮರಿಗಳನ್ನು ಕೂಗಿ ಕರೆಯಿತು. ಹಾವಿನ ಮರಿಗಳೆಲ್ಲಾ ಬುಸುಗುಡುತ್ತಾ, ನಾಲಗೆ ಹೊರ ಚಾಚುತ್ತಾ ಕಾಡು ಕೋಳಿಯತ್ತ ಧಾವಿಸಿದವು.

ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿತ್ತು ಕಾಡು ಕೋಳಿಯ ಪರಿಸ್ಥಿತಿ. ಬೇಟೆಗಾರನಿಂದ ತಪ್ಪಿಸಿಕೊಳ್ಳಲು ಹೋಗಿ ಈ ವಿಷಜಂತುವಿಗೆ ಆಹಾರವಾಗುವಂತಾಯಿತಲ್ಲ ಎಂದು ಕಾಡು ಕೋಳಿ ಪ್ರಾಣಭಯದಿಂದ ಥರಥರನೆ ನಡುಗಿತು. ಇಲ್ಲಿಂದ ಹೇಗಾದರೂ ತಪ್ಪಿಸಿಕೊಳ್ಳಲೇಬೇಕೆಂದು ನಿರ್ಧರಿಸಿತು.

“ಆಪತ್ತಿನಲ್ಲಿ ಧೈರ್ಯವೇ ಆಪ್ತರಕ್ಷಕ’ ಎಂಬ ಮಾತು ಕಾಡು ಕೋಳಿಗೆ ನೆನಪಾಯಿತು. ಅಪಾಯದ ಸ್ಥಿತಿಯಲ್ಲಿದ್ದಾಗಲೇ ಉಪಾಯವೊಂದು ಹೊಳೆಯಿತು. ದೀರ್ಘ‌ ಉಸಿರು ತೆಗೆದುಕೊಂಡು ನಿಟ್ಟುಸಿರು ಬಿಟ್ಟಿತು. ನಂತರ ಮತ್ತೆ ದೀರ್ಘ‌ ಉಸಿರು ಒಳಗೆಳೆದುಕೊಂಡು ಇಡೀ ಕಾಡು ಕಂಪಿಸುವಂತೆ ಜೋರಾಗಿ ಕೂಗಿತು. ಆ ಕೂಗು ಕೇಳಿ ಪ್ರಾಣಿ-ಪಕ್ಷಿಗಳ ಕಿವಿಗಳು ಒಂದು ಕ್ಷಣ ಅದುರಿದವು. ಅಷ್ಟೊಂದು ಜೋರು ಧ್ವನಿಯನ್ನು ಕಾಡು ಕೋಳಿ ಹೊರಡಿಸಿತ್ತು.

ಬೇಟೆಗಾರನ ಕಿವಿಗೂ ಆ ಕೂಗು ಕೇಳಿಸಿತು. ಬೇಟೆ ತಪ್ಪಿಸಿಕೊಂಡುಬಿಟ್ಟಿತೆಂದು ಬೇಸರದಿಂದ ಮನೆಗೆ ಹೊರಟಿದ್ದ ಬೇಟೆಗಾರ ಸದ್ದು ಬಂದ ಕಡೆ ಓಡೋಡಿ ಬಂದನು. ಸದ್ದು ಬಂದಿದ್ದು ಹುತ್ತದೊಳಗಿಂದ ಎಂಬುದು ಅವನಿಗೆ ಖಚಿತವಾಯಿತು. ಒಂದು ಕ್ಷಣವೂ ತಡಮಾಡದೆ ಹುತ್ತವನ್ನು ಒಡೆದು ಬಗೆದು ಹಾಕಿದನು.

ಕಾಡು ಕೋಳಿಯ ಮೇಲೆ ಮುಗಿಬೀಳುತ್ತಿದ್ದ ಹಾವಿನ ಮರಿಗಳ ಮೇಲೆ ಬೇಟೆಗಾರದ ಗುದ್ದಲಿ ಏಟುಗಳು ಬಿದ್ದು ಅವು ಗಾಯಗೊಂಡವು. ಮರಿಗಳು ಗಾಯಗೊಂಡಿದ್ದನ್ನು ಕಂಡು ರೊಚ್ಚಿಗೆದ್ದ ತಾಯಿ ಹಾವು ಬೇಟೆಗಾರನನ್ನು ಕಚ್ಚಲು ಮುಂದಾಯಿತು. ವಿಷಪೂರಿತ ಹಾವನ್ನು ನೋಡುತ್ತಲೇ ಬೇಟೆಗಾರ ಗುದ್ದಲಿ, ಬಂದೂಕು ಎರಡನ್ನೂ ಅಲ್ಲಿಯೇ ಬಿಟ್ಟು ಪ್ರಾಣ ಉಳಿಸಿಕೊಳ್ಳಲು ಪಲಾಯನಗೈದನು. ಇತ್ತ, ಬೇಟೆಗಾರ ಮತ್ತು ನಾಗರಹಾವು ಎರಡರಿಂದಲೂ ಬಚಾವಾದ ಕಾಡು ಕೋಳಿ ಕಾಡಿನೊಳಗೆ ಮರೆಯಾಯಿತು.

— ಬನ್ನೂರು ಕೆ. ರಾಜು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.