ಕೈಗೆ ಗದಗ ನಂಟು; ಕಮಲಕ್ಕೆ ಮೋದಿ ಬಲ


Team Udayavani, May 9, 2019, 12:48 PM IST

gad-1

ಮುಧೋಳ: ಜಿಲ್ಲೆಯ ಏಕೈಕ ಮೀಸಲು ಮುಧೋಳ ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳ ಪ್ರಮುಖರಲ್ಲಿ ಪಕ್ಷಕ್ಕಿಂತ ಜಾತಿ ಹೊಂದಾಣಿಕೆ ಮತ್ತು ಕೊಡು-ಕೊಳ್ಳುವಿಕೆಯ ಚುನಾವಣೆ ನಡೆದಿದೆ. ಹೀಗಾಗಿ ಕಳೆದ ಲೋಕಸಭೆ ಚುನಾವಣೆಗಿಂತ ಈ ಬಾರಿ ಬಿಜೆಪಿ ಅಷ್ಟೊಂದು ಲೀಡ್‌ ಪಡೆಯಲು ಸಾಧ್ಯವಿಲ್ಲ ಎಂಬುದು ಬಹುತೇಕರ ಲೆಕ್ಕಾಚಾರ.

ಹೌದು, ಕಾಂಗ್ರೆಸ್‌ ಪಕ್ಷ, ಗದಗ-ಹಾವೇರಿ ಲೋಕಸಭೆ ಕ್ಷೇತ್ರದ ನಂಟನ್ನು ಇಲ್ಲಿ ಬಳಿಸಿಕೊಂಡಿದೆ. ನೀವು ಇಲ್ಲಿ ನಮಗೆ ಮತ ಕೊಡಿಸಿ, ನಾವು ನಿಮಗೆ ಅಲ್ಲಿ ಮತ ಕೊಡಿಸುತ್ತೇವೆ ಎಂಬುದು ರಡ್ಡಿ ಮತ್ತು ಪಂಚಮಸಾಲಿ ಪ್ರಮುಖರು (ಎರಡೂ ಪಕ್ಷಗಳು ಒಳಗೊಂಡಂತೆ) ಒಳ ಒಪ್ಪಂದ ಮಾಡಿಕೊಂಡೇ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಕ್ಷೇತ್ರದಲ್ಲಿ ಎದುರಿಸಿದ್ದಾರೆ. ಇದರ ಜತೆಗೆ ಪ್ರಮುಖವಾಗಿ ತಾಲೂಕಿನ ಪ್ರಮುಖ ಸಹಕಾರಿ ವಲಯದ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಚುನಾವಣೆಗೂ, ಲೋಕಾ ಚುನಾವಣೆಗೂ ಲಿಂಕ್‌ ಮಾಡಲಾಗಿತ್ತು. ಅದಕ್ಕಾಗಿಯೇ ಕಳೆದ ಬಾರಿ ತುರುಸಿನಿಂದ ನಡೆದಿದ್ದ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆ, ಈ ಬಾರಿ ಬಹುತೇಕ ಅವಿರೋಧ ಆಯ್ಕೆಗೂ ಕಾರಣವಾಗಿತ್ತು ಎಂಬುದು ತಾಲೂಕಿನಲ್ಲಿರುವ ಬಹಿರಂಗ ಗುಟ್ಟು ಎನ್ನಲಾಗಿದೆ.

ಏನಿದು ಒಳ ಒಪ್ಪಂದ-ನಂಟು: ಮುಧೋಳ ನಗರದಲ್ಲಿ ಕಾಂಗ್ರೆಸ್‌ ಒಂದಷ್ಟು ಪ್ರಭಾವ ಹೊಂದಿದ್ದರೆ, ಗ್ರಾಮೀಣ ಭಾಗದಲ್ಲಿ ಮೋದಿ ಅಲೆ, ಹಿಂದುತ್ವದ ಬಲ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮುಧೋಳದ ಗ್ರಾಮೀಣ ಭಾಗದಲ್ಲೇ 17,898 ಮತಗಳ ಲೀಡ್‌ ಬಿಜೆಪಿಗೆ ಬಂದಿತ್ತು. ಈ ಕ್ಷೇತ್ರದ ಹಾಲಿ ಸಚಿವ ಆರ್‌.ಬಿ. ತಿಮ್ಮಾಪುರ, ಕಳೆದ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಬಂಡಿವಡ್ಡರ, ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ ಒಟ್ಟಿಗೆ ಕುಳಿತು, ಸಹಕಾರಿ ಕಾರ್ಖಾನೆ ಚುನಾವಣೆಗೆ ಕಾಂಗ್ರೆಸ್ಸಿಗರು ಸ್ಪರ್ಧೆ ಮಾಡಲ್ಲ. ನೀವು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಕೊಡಿ ಎಂಬ ಒಪ್ಪಂದ ಮಾಡಿಕೊಂಡರೆ, ಮತ್ತೂಂದೆಡೆ ಗದಗ-ಹಾವೇರಿ ಕ್ಷೇತ್ರದ ಪಂಚಮಸಾಲಿ ಸಮಾಜದಿಂದ ಅಲ್ಲಿನ ಅಭ್ಯರ್ಥಿ ಡಿ.ಆರ್‌. ಪಾಟೀಲರಿಗೆ ಬೆಂಬಲಿಸುತ್ತೇವೆ, ನೀವು (ರಡ್ಡಿ) ಇಲ್ಲಿ ಕಾಂಗ್ರೆಸ್‌ಗೆ ಬೆಂಬಲಿಸಬೇಕು ಎಂಬ ಒಪ್ಪಂದವನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಮಧ್ಯಸ್ಥಿಕೆಯಲ್ಲಿ ನಡೆದಿತ್ತು ಎನ್ನಲಾಗಿದೆ. ಹೀಗಾಗಿ ಈ ಬಾರಿ, ಪಕ್ಷ ಬದಿಗಿಟ್ಟು, ಜಾತಿ ಪ್ರಮುಖರಲ್ಲಿ ಒಳ ಒಪ್ಪಂದ ನಡೆಸಲಾಗಿತ್ತು ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬಂದ ಸತ್ಯದ ಮಾತು. ಇದರಿಂದ ಈ ಬಾರಿ ಕಾಂಗ್ರೆಸ್‌ ಇಲ್ಲಿ ಹೆಚ್ಚಿನ ಮತ ಪಡೆಯಲಿದೆ ಎಂಬುದು ಪಕ್ಷದ ಹಿರಿಯರ ನಿರೀಕ್ಷೆ.

ಮೋದಿ ಅಲೆ: ಎರಡು ಪಕ್ಷಗಳ ರಾಜಕೀಯ ಮುಖಂಡರು ಏನೇ ಒಳ ಒಪ್ಪಂದ ಮಾಡಿಕೊಂಡರೂ, ಈ ಕ್ಷೇತ್ರದ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಬಿಜೆಪಿಗೆ ಭದ್ರ ನೆಲೆಯ ಜತೆಗೆ ಮೋದಿಯ ಅಲೆಯೂ ಇದೆ. ಅಲ್ಲದೇ ಕಳೆದ ಮೂರು ಅವಧಿಗೆ ರಡ್ಡಿ ಸಮಾಜಕ್ಕೆ ಲೋಕಸಭೆ ಟಿಕೆಟ್ ಕೊಟ್ಟು, ಈ ಬಾರಿ ಸಮಾಜಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬ ಅಸಮಾಧಾನ, ಕಾಂಗ್ರೆಸ್‌ಗೆ ಮೈನಸ್‌ ಆಗಿತ್ತು. ಹೀಗಾಗಿ ರಡ್ಡಿ ಸಮಾಜ, ಕಾಂಗ್ರೆಸ್‌ ಬೆಂಬಲಿಸಲು ಸಾಧ್ಯವಿಲ್ಲ. ಎಲ್ಲ ಸಮಾಜದೊಂದಿಗೂ ಉತ್ತಮವಾಗಿರುವ ಬಿಜೆಪಿ ಅಭ್ಯರ್ಥಿಗೆ ಇಲ್ಲಿನ ಮತದಾರರು, ತಮ್ಮ ಹಕ್ಕಿನ ಮುದ್ರೆಯೊತ್ತಿದ್ದಾರೆ ಎಂಬ ವಿಶ್ವಾಸ ಬಿಜೆಪಿಗರಲ್ಲಿದೆ.

ಈ ಕ್ಷೇತ್ರದಲ್ಲಿ ದಲಿತ, ಮುಸ್ಲಿಂ, ರಡ್ಡಿ, ವಾಲ್ಮೀಕಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಬಹುತೇಕ ಹಳ್ಳಿಗಳು, ರಡ್ಡಿ ಸಮಾಜದ ಪ್ರಮುಖರು ಹೇಳಿದಂತೆ ಕೇಳುವ ಬಹುಪಾಲು ಜನರಿದ್ದಾರೆ. ಅವರು ಹೇಳುವ ಪಕ್ಷಕ್ಕೆ, ಅಭ್ಯರ್ಥಿಗೆ ಬೆಂಬಲ ಕೊಡುವ ಪರಂಪರೆ ಹಲವು ಚುನಾವಣೆಗಳಿಂದ ನಡೆದುಕೊಂಡು ಬಂದಿದ್ದು, ಅದು ಈ ಬಾರಿಯೂ ಮುಂದುವರೆದಿದೆ ಎಂಬ ಲೆಕ್ಕಾಚಾರ ಕ್ಷೇತ್ರದಲ್ಲಿದೆ.

•ಮಹಾಂತೇಶ ಕರೆಹೊನ್ನ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.