ಬೇಸಿಗೆ ಬಿಸಿಯೂಟಕ್ಕೆ ಶಿಕ್ಷಕರ ಅಸಹಕಾರ


Team Udayavani, May 9, 2019, 3:21 PM IST

kop-2

ದೋಟಿಹಾಳ: ಕಿಲ್ಲಾರಹಟ್ಟಿ, ಜೂಮಲಾಪುರ ಸಿಆರ್‌ಪಿ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಮಕ್ಕಳು ಮಧ್ಯಾಹ್ನನದ ಬಿಸಿಯೂಟಕ್ಕೆ ಶಾಲೆಗೆ ಬರುತ್ತಿದ್ದರೂ ಶಿಕ್ಷಕರು ಬರುತ್ತಿಲ್ಲ. ರಾಜ್ಯ ಸರಕಾರ ಬರಪೀಡಿತ ಪ್ರದೇಶದ ಮಕ್ಕಳ ಮಧ್ಯಾಹ್ನನದ ಬಿಸಿಯೂಟ ಯೋಜನೆ ಹಾದಿ ತಪುತ್ತಿದೆ.

ರಾಜ್ಯ ಸರಕಾರ ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳಿಗೆ ಮಧ್ಯಾಹ್ನನದ ಬಿಸಿಯೂಟ ನೀಡಬೇಕು ಎಂದು ಆದೇಶ ನೀಡಿದೆ. ಏ. 11ರಿಂದ ಮೇ 28ವರಗೆ ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳಿಗೆ ಮಧ್ಯಾಹ್ನನದ ಬಿಸಿಯೂಟ ನೀಡಬೇಕು. ಇದಕ್ಕೆ ಆ ಶಾಲೆಯ ಮುಖ್ಯಗುರು ಅಥವಾ ಶಾಲೆ ಶಿಕ್ಷಕರಲ್ಲಿ ಯಾರಾದರೂ ಒಬ್ಬರು ಪ್ರತಿ ದಿನ ಶಾಲೆಗೆ ಬಂದು ತಪ್ಪದೇ ಮಕ್ಕಳಿಗೆ ಮಧ್ಯಾಹ್ನನದ ಊಟ ನೀಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದರೆ ಕೆಲವು ಶಾಲೆಗಳಲ್ಲಿ ಶಿಕ್ಷಕರು ವಾರಕೊಮ್ಮೆ ಬಂದು ಅಡುಗೆಗೆ ಬೇಕಾಗುವ ಸಾಮಗ್ರಿ ನೀಡಿ ಹೋಗುತ್ತಾರೆ ಎಂದು ಶಾಲಾ ಮಕ್ಕಳು ಹಾಗೂ ಮುಖ್ಯ ಅಡುಗೆ ಸಿಬ್ಬಂದಿ ತಿಳಿಸುತ್ತಾರೆ. ಮ್ಯಾದರಡಕ್ಕಿ ತಾಂಡಾದ ಶಾಲೆಯ ಶಿಕ್ಷಕರು ಶಾಲೆ ರಜೆ ನೀಡಿದ ನಂತರ ಊರಿಗೆ ಹೋದವರು ಮರಳಿ ಬಂದೇ ಇಲ್ಲ. ಶಾಲೆಯ ಒಬ್ಬ ವಿದ್ಯಾರ್ಥಿ ಕೈಯಲ್ಲಿ ಅಡುಗೆ ಕೊಠಡಿಯ ಕೀಲಿಕೈ ಕೊಟ್ಟು ಹೋಗಿದ್ದಾರೆ. ಆ ವಿದ್ಯಾರ್ಥಿ ಬಂದ ಮೇಲೆ ಮಕ್ಕಳಿಗೆ ಅಡುಗೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳಿಗೆ ಬಿಸಿಯೂಟ ಇಲ್ಲ ಎಂದು ಮುಖ್ಯ ಅಡುಗೆ ಸಿಬ್ಬಂದಿ ತಿಳಿಸಿದರು.

ಕಳಮಳ್ಳಿ ತಾಂಡಾ ಮತ್ತು ಮ್ಯಾದರಡಕ್ಕಿ ಶಾಲೆಗಳಿಗೆ ವಾರಕೊಮ್ಮೆ ಅತಿಥಿ ಶಿಕ್ಷಕರು ಬಂದು ಅಡುಗೆಗೆ ಬೇಕಾಗುವ ದಿನಸಿ ಸಾಮಗ್ರಿ ನೀಡಿ ಹೋಗುತ್ತಾರೆ ಎಂಬ ಆರೋಪವಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅತಿಥಿ ಶಿಕ್ಷಕರು, ಶಿಕ್ಷಕರು ಊರಿಗೆ ಹೋದ ಕಾರಣ ನಾನು ಶಾಲೆಗೆ ಬಂದಿದ್ದೇನೆ ಎಂದು ಹೇಳಿದರು. ಕಳಮಳ್ಳಿ ತಾಂಡದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಇಲ್ಲಿ ಎಲ್ಲ ಜವವಾಬ್ದಾರಿಯನ್ನೂ ಅಡುಗೆ ಸಿಬ್ಬಂದಿಯೇ ವಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಳಮಳ್ಳಿ ತಾಂಡ ಶಿಕ್ಷಕ ರವಿ ಕುಮಾರ, ಪುತ್ರಿಯ ಶಾಲಾ ದಾಖಲಾತಿ ಇರುವುದರಿಂದ ಊರಿಗೆ ಹೋಗಿದ್ದೇನೆ ಎಂದು ಸಮಜಾಯಿಷಿ ನೀಡಿದರು. ತಾಲೂಕು ಅಕ್ಷರ ದಾಸೋಹ ಅಧಿಕಾರಿ ಕೆ. ಶರಣಪ ಪ್ರತಿಕ್ರಿಯಿಸಿ, ಶಾಲೆಗಳಿಗೆ ಸಂಬಂಧಪಟ್ಟ ಸಿಆರ್‌ಪಿಗಳಿಂದ ಮಾಹಿತಿ ಪಡೆದು ಲೋಪವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

2-3 ದಿನಗಳ ಹಿಂದೆ ತಾಲೂಕಿನ ಎಲ್ಲ ಶಾಲೆಗಳ ಶಿಕ್ಷಕರಿಗೆ ಬೇಸಿಗೆ ಬಿಸಿಯೂಟದ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕೆಂದು ವಿಶೇಷ ಸಭೆ ಕರೆದು ಸೂಚಿಸಲಾಗಿದೆ. ಶಿಕ್ಷಕರು ಶಾಲೆಗೆ ಸರಿಯಾಗಿ ಹೋಗುತ್ತಿಲ್ಲ ಎಂದರೆ ಹೇಗೆ. ಕೂಡಲೇ ಶಾಲೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ.
ಬಸವರಾಜ, ಸಿಆರ್‌ಪಿ

ಬೇಸಿಗೆ ದಿನಗಳಲ್ಲಿ ಮಕ್ಕಳಿಗೆ ತಪ್ಪದೇ ಮಧ್ಯಾಹ್ನದ ಬಿಸಿಯೂಟ ನೀಡಬೇಕು. ಆದರೆ ಶಾಲೆಗೆ ಸರಿಯಾಗಿ ಹೋಗದೇ ಇರುವ ಶಿಕ್ಷಕರ ಬಗ್ಗೆ ಮಾಹಿತಿ ಪಡೆದು ಕ್ರಮಕೈಗೊಳ್ಳಲಾಗುವುದು.
ಎಂ. ಚನ್ನಬಸಪ್ಪ,ಬಿಇಒ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.