ದಾಸೋಹ ಅವ್ಯವಸ್ಥೆ: ಭಕ್ತರ ನಿರಾಶೆ

ಮಾರ್ಗ ಸೂರ್ಚಿ-ಬ್ಯಾನರ್‌-ದಾಸೋಹಕ್ಕೆ ಫಲಕ ಅಳವಡಿಸದಿರುವುದು ತೊಂದರೆಗೆ ಕಾರಣ

Team Udayavani, May 9, 2019, 5:08 PM IST

9-May-31

ಬಸವಕಲ್ಯಾಣ: ಬಸವೇಶ್ವರ ದೇವಸ್ಥಾನದಲ್ಲಿ ತಡವಾಗಿ ನಂದಿಧ್ವಜ-ಪಲ್ಲಕ್ಕಿ ಪೂಜೆ ಮಾಡಿದ ಹಿನ್ನೆಲೆಯಲ್ಲಿ ದಾವಣಗೆರೆ ಭಕ್ತರೊಬ್ಬರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಬಸವಕಲ್ಯಾಣ: ಬಸವ ಜಯಂತಿ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ನಗರಕ್ಕೆ ಆಗಮಿಸಿರುವ ಬಸವ ಭಕ್ತರಿಗೆ ಬಸವೇಶ್ವರ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ಮಾಡಲಾಗಿರುವ ಅನ್ನ ದಾಸೋಹ ವ್ಯವಸ್ಥೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ.

ನಿಮಿತ್ತ ಶರಣ ನಗರಿ ಬಸವಕಲ್ಯಾಣ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಮತ್ತು ತೆಲಾಂಗಣದ ಬಸವಾಭಿಮಾನಿಗಳು ಹಾಗೂ ಸಾರ್ವಜನಿಕರು ಬಸವಣ್ಣನವರ ಜಾತ್ರೆಗೆ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ.

ಆದರೆ ನಿರ್ದಿಷ್ಟ ಸ್ಥಳದಲ್ಲಿ ಮಾರ್ಗ ಸೂರ್ಚಿ, ಬ್ಯಾನರ್‌ ಹಾಗೂ ದಾಸೋಹಕ್ಕೆ ಸಂಬಂಧಿಸಿದ ಯಾವುದೇ ಫಲಕ ಅಳವಡಿಸದೆ ಇರುವುದರಿಂದ ತೊಂದರೆ ಅನುಭವಿಸಿದರು. ಎಷ್ಟೋ ಭಕ್ತರು ಮಹಾಪ್ರಸಾದ ವ್ಯವಸ್ಥೆ ಇಲ್ಲ ಎಂದು ತಿಳಿದು ನಿರಾಶೆಯಿಂದ ತಮ್ಮ ಊರುಗಳಿಗೆ ತೆರಳಿದರು ಎಂಬ ಮಾತು ಕೇಳಿ ಬಂದಿದೆ.

ವಿಶ್ವಗುರು ಬಸವಣ್ಣನ ಜಾತ್ರೆ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ ಎಂಬ ಸಂಗತಿ ಮೊದಲೇ ಗೊತ್ತಿರುತ್ತದೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ದಾಸೋಹ ವ್ಯವಸ್ಥೆ ಮಾಡದೇ ಕಾಲೇಜುವೊಂದರ ಮೂಲೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಿರುವುದು ಬಹುತೇಕ ಭಕ್ತರಿಗೆ ಗೊತ್ತಾಗಲಿಲ್ಲ. ಹಾಗಾಗಿ ನಗರಕ್ಕೆ ಆಗಮಿಸಿದ ಭಕ್ತರು ಪ್ರಸಾದ ಸೇವಿಸಲು ಸ್ಥಳ ಹುಡುಕುವಂತಾಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ನಿರಂತರ ದಾಸೋಹ ಇರುತ್ತದೆ ಎಂದು ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ನಮೂದಿಸಲಾಗಿದೆ. ಆದರೆ ಮಂಗಳವಾರ ಸಂಜೆ 4:00 ಗಂಟೆಯಾದರೂ ಪ್ರಸಾದ ವಿತರಣೆ ಮಾಡದಿರುವುದು ಕಮಿಟಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂಬುದು ಭಕ್ತರ ಆರೋಪವಾಗಿದೆ.

ಜಾತ್ರಾ ಮಹೋತ್ಸವದ ಮುನ್ನಾ ದಿನವೇ ದೇವಸ್ಥಾನದ ಎದುರು ಇರುವ ಮುಖ್ಯರಸ್ತೆಗೆ ಡಾಂಬರೀಕರಣ ಮಾಡಲಾಗಿದೆ. ಬಿಸಿಲಿನಿಂದ ಡಾಂಬರ್‌ ಬಿಸಿಗೊಳ್ಳುತ್ತಿದೆ. ಇದರಿಂದ ಪಾದರಕ್ಷೆ ಹಾಕದ ಹರಕೆ ಹೊತ್ತ ಭಕ್ತರು ಹಾಗೂ ನಂಧ್ವಜ ಹಿಡಿದವರಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿರುವುದು ಅವ್ಯವಸ್ಥೆಗೆ ಇನ್ನೊಂದು ಉದಾಹರಣೆಯಾಗಿದೆ.

ಒಟ್ಟಿನಲ್ಲಿ ಕಳೆದ ಜಾತ್ರೆಗೆ ಹೋಲಿಸಿದರೆ ಈ ವರ್ಷದ ಜಾತ್ರೆ ಬಸವಾಭಿಮಾನಿಗಳಿಗೆ ಹಾಗೂ ನಗರದ ಬಹುತೇಕ ನಿವಾಸಿಗಳಿಗೆ ಅಷ್ಟು ಸಮಾಧಾನಕಾರವಾಗಿಲ್ಲ ಎಂಬ ಮಾತುಗಳು ಅಲಲ್ಲಿ ಕೇಳಿಬಂದವು.

ಟಾಪ್ ನ್ಯೂಸ್

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.