ಆಸ್ಟ್ರೇಲಿಯ ಕ್ರಿಕೆಟ್: ನಿಯಮ ಪಾಲಿಸಿದ ಅಪರೂಪದ ನಿದರ್ಶನ

ಕಳೆದ 7 ವರ್ಷಗಳಲ್ಲಿ ಉತ್ತಮ ನಡವಳಿಕೆಯಿಂದ ಕ್ರಿಕೆಟ್ ಋತು ಮುಗಿಸಿದ ಮೊದಲ ಉದಾಹರಣೆ!

Team Udayavani, May 10, 2019, 6:00 AM IST

AUS-a

ಸಿಡ್ನಿ: ಆಸ್ಟ್ರೇಲಿಯ ಕ್ರಿಕೆಟ್ ತಂಡ ಕಳೆದ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೈದಾನದಲ್ಲಿ ನಿಯ ಮ ಉಲ್ಲಂಘಿಸದೆ ಕ್ರಿಕೆಟ್ ಋತು ವನ್ನು ಮುಗಿಸಿದೆ ಎಂದು ‘ಕ್ರಿಕೆಟ್ ಆಸ್ಟ್ರೇಲಿಯ’ ಹೇಳಿದೆ. ಇದಕ್ಕೆಲ್ಲ ಕಾರಣ, ಕಳೆದ ವರ್ಷ ಆಸ್ಟ್ರೇಲಿಯ ತಂಡ ನಡೆಸಿದ ಚೆಂಡುವಿರೂಪ ಹಗರಣ. ಅಲ್ಲಿಂದ ತಂಡದೊಳಗಿನ ವಾತಾವರಣ ಬದಲು ಮಾಡಲು ಆಸ್ಟ್ರೇಲಿಯ ಪಣ ತೊಟ್ಟು, ಇದರಲ್ಲಿ ಧಾರಾಳ ಯಶಸ್ಸು ಕಂಡಿದೆ.

2018ರ ಮಾರ್ಚ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್‌ ಪಂದ್ಯದಲ್ಲಿ ಕ್ಯಾಮರೂನ್‌ ಬಾನ್‌ಕ್ರಾಫ್ಟ್, ಡೇವಿಡ್‌ ವಾರ್ನರ್‌, ಸ್ಟೀವ್‌ ಸ್ಮಿತ್‌ ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದಿದ್ದರು. ಅದಾದ ಮೇಲೆ ಬ್ಯಾನ್‌ಕ್ರಾಫ್ಟ್ಗೆ 9 ತಿಂಗಳು, ಉಳಿದಿಬ್ಬರಿಗೆ ತಲಾ ಒಂದು ವರ್ಷ ನಿಷೇಧ ಹೇರ ಲಾಗಿತ್ತು. ಈ ಘಟನೆಯ ಬಳಿಕ ಆಸ್ಟ್ರೇಲಿಯ ತಂಡದೊಳಗಿನ ಆಂತರಿಕ ಸಂಸ್ಕೃತಿ ಸುಧಾರಿಸಲು ‘ಕ್ರಿಕೆಟ್ ಆಸ್ಟ್ರೇಲಿಯ’ ನಿರ್ಧರಿಸಿತ್ತು. ಇದಕ್ಕಾಗಿ ಸಮಿತಿ ರಚನೆ ಮಾಡಿ ತನಿಖೆ ಮಾಡಿಸಲಾಗಿತ್ತು. ಆಗ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿದ್ದವು.

ಗೆಲ್ಲಲೇಬೇಕೆಂಬ ಏಕೈಕ ಒತ್ತಡ
ಕ್ರಿಕೆಟ್ ಆಸ್ಟ್ರೇಲಿಯದ ಆಟಗಾರರು ವಿಪರೀತ ಅಹಂಕಾರಿಗಳಾಗಿದ್ದರು. ಗೆಲ್ಲಲೇಬೇಕೆಂಬ ಏಕೈಕ ಒತ್ತಡ ಅವರ ಮೇಲಿದ್ದರಿಂದ, ಇದಕ್ಕಾಗಿ ಏನೆಲ್ಲ ಸಾಧ್ಯವೋ ಅದನ್ನೆಲ್ಲ ಮಾಡುವ ಸ್ಥಿತಿಗೆ ತಲುಪಿದ್ದರು. ಸ್ವತಃ ಕ್ರಿಕೆಟ್ ಆಸ್ಟ್ರೇಲಿಯದ ಮಾಜಿ ಮುಖ್ಯಸ್ಥರೇ ಅಂತಹ ಒತ್ತಡವನ್ನು ಹೇರಿದ್ದರು. ಆದ್ದರಿಂದ ಆಸೀಸ್‌ ಆಟಗಾರರು ಅಸಹಾಯಕ ಸ್ಥಿತಿಗೆ ತಲುಪಿದ್ದರು.

ಇದೆಲ್ಲದರ ಪರಿಣಾಮ ಮೈದಾನದಲ್ಲಿ ಅವರ ವರ್ತನೆ ಹದಗೆಟ್ಟಿತು. ಪ್ರತೀ ಬಾರಿಯೂ ನಿಯಮ ಉಲ್ಲಂಘನೆಯಾದ ಆರೋಪ ಕೇಳಿಬರುತ್ತಿತ್ತು. ಈ ಬಾರಿ ಆಟಗಾರ ವರ್ತನೆಯಲ್ಲಿ ಸುಧಾರಣೆಯಲ್ಲಿ ಬದಲಾವಣೆ ತರಲು ಮಂಡಳಿ ಪ್ರಯತ್ನಿಸಿದೆ. ಬರೀ ಗೆಲುವೊಂದೇ ಮಾನದಂಡವಲ್ಲ, ನಮ್ಮ ವರ್ತನೆಯಿಂದಲೂ ಎದುರಾಳಿಗಳನ್ನು ಗೆಲ್ಲಬೇಕೆಂಬ ಸಂದೇಶವನ್ನು ನೀಡಲು ಕ್ರಿಕೆಟ್ ಆಸ್ಟ್ರೇಲಿಯ ಯಶಸ್ವಿಯಾಗಿದೆ. ಇದನ್ನು ಆಟಗಾರರು ಒಪ್ಪಿಕೊಂಡಿದ್ದರಿಂದ ವಾತಾವರಣದಲ್ಲಿ ಸಂಪೂರ್ಣ ಬದಲಾವಣೆಯಾಗಿದೆ.

ಸಂದಿಗ್ಧ ಘಟ್ಟದಲ್ಲಿ ಕಾಂಗರೂ ಕ್ರಿಕೆಟ್

ತನ್ನ ಕ್ರಿಕೆಟ್ ಇತಿಹಾಸದಲ್ಲೇ ಆಸ್ಟ್ರೇಲಿಯ ಕ್ರಿಕೆಟ್ ತಂಡ ಅತ್ಯಂತ ಸಂದಿಗ್ಧ ಘಟ್ಟದಲ್ಲಿದೆ. 5 ಬಾರಿ ಏಕದಿನ ವಿಶ್ವಕಪ್‌ ಗೆದ್ದಿರುವ ಅದು ಈ ಬಾರಿ ನೆಚ್ಚಿನ ತಂಡ ಎನ್ನುವ ಹಣೆಪಟ್ಟಿ ಪಡೆಯಲೂ ಪರದಾಡುತ್ತಿದೆ. ಚೆಂಡು ವಿರೂಪ ಪ್ರಕರಣದ ಬಳಿಕ ದುರ್ಬಲ ತಂಡಗಳ ವಿರುದ್ಧವೂ ಮುಗ್ಗರಿಸಿದೆ. ಹೀನಾಯ ಸರಣಿ ಸೋಲುಗಳನ್ನು ಅನುಭವಿಸಿದೆ. ಕಳೆದೆರಡು ತಿಂಗಳ ಹಿಂದೆ ಭಾರತಕ್ಕೆ ಬಂದ ಅನಂತರ ಆಸೀಸ್‌ ಕ್ರಿಕೆಟ್ ಸ್ಥಿತಿ ಸುಧಾರಿಸಿಕೊಂಡಿದೆ. ಗೆಲುವು ಕಾಣಲಾರಂಭಿಸಿದೆ. ಇದೇ ಸಂದರ್ಭದಲ್ಲಿ ನಿಷೇಧ ಮುಗಿಸಿ ಭರ್ಜರಿ ಲಯದೊಂದಿಗೆ ಸ್ಟೀವ್‌ ಸ್ಮಿತ್‌, ಡೇವಿಡ್‌ ವಾರ್ನರ್‌ ವಾಪಸಾಗಿದ್ದು ಆಸೀಸ್‌ ಆತ್ಮವಿಶ್ವಾಸ ಹೆಚ್ಚಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.