ದಲಿತರು ಕರಗ ಮಹೋತ್ಸವ ನಡೆಸದಂತೆ ಕ್ರಮಕ್ಕೆ ಆಗ್ರಹ


Team Udayavani, May 10, 2019, 11:57 AM IST

blore-g-2

ದೇವನಹಳ್ಳಿ: ವಿಜಯಪುರ ಹೋಬಳಿಯ ಚಂದೇನಹಳ್ಳಿಯಲ್ಲಿ ಪೂಜಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದಲಿತ ಸಮುದಾಯದವರು ಕರಗ ಮಹೋತ್ಸವ ನಡೆಸದಂತೆ ನೋಡಿಕೊಳ್ಳ ಬೇಕೆಂದು ವಹ್ನಿಕುಲ ಕ್ಷತ್ರಿಯ ಸಮುದಾಯದ ಮುಖಂಡರು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.

ಅಹವಾಲು ಸ್ವೀಕರಿಸಿದ ನಂತರ ನಗರದ ಮಿನಿವಿಧಾನಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ದಲಿತ ಹಾಗೂ ತಿಗಳ ಸಮುದಾಯಗಳ ಮುಖಂಡರ ಸಭೆ ನಡೆಸಿದ ತಹಶೀಲ್ದಾರ್‌ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.

ದಲಿತರಿಂದ ಕರಗೋತ್ಸವ ಬೇಡ: ಈ ವೇಳೆ ಮತ ನಾಡಿದ ತಿಗಳ ಸಮುದಾಯದ ಮುಖಂಡರು, ಕರಗ ಮಹೋತ್ಸವವನ್ನು ವೀರಕುಮಾರರು ಹಾಗೂ ತಿಗಳ ಸಮುದಾಯದವರು ಸಾಂಪ್ರಾದಾಯಿಕವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಇದೀಗ ಕರಗ ಮಹೋತ್ಸವವನ್ನು ದಲಿತ ಸಮುದಾಯದವರು ಆಚರಿಸುವುದು ಸರಿಯಲ್ಲ ಎಂದು ತಿಳಿಸಿದರು.

ವೀರಕುಮಾರರು ಎದೆಯನ್ನು ಹೊಡೆದು ಕೊಳ್ಳುವುದು, ಗಂಟೆ, ಪೂಜಾರಿ, ಪೋತಲರಾಜ ಹೀಗೆ ಹಲವಾರು ಸಂಪ್ರದಾಯಗಳಿವೆ. ಸುಮಾರು ವರ್ಷಗಳಿಂದ ಕರಗ ಮಹೋತ್ಸವವನ್ನು ನಮ್ಮ ಸಮುದಾಯ ದವರೇ ನಡೆಸಿಕೊಂಡು ಬರುತ್ತಿ ದ್ದಾರೆ. ಹಾಗೆಯೇ, ದೇಶ ಹಾಗೂ ಎಲ್ಲಾ ಜನಾಂಗಕ್ಕೂ ದೇವರು ಅಂಬೇಡ್ಕರ್‌ ಆಗಿದ್ದಾರೆ. ಅದೇ ರೀತಿ ನಮ್ಮ ಸಮುದಾಯದ ದೇವರು ಎಂದರೆ ಅದು ತಾಯಿ ದ್ರೌಪದಮ್ಮ ಆಗಿದ್ದಾರೆ. ಆದ್ದರಿಂದ, ದಯವಿಟ್ಟು ದಲಿತರು ಕರಗ ಮಹೋತ್ಸವವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

ಬೇರೆ ನಿಮ್ಮ ಜಾತ್ರಾ ಮಹೋತ್ಸವಗಳಿಗೆ ನಮ್ಮ ಕೈಲಾದ ಸಹಾಯ ಮಾಡಲಾಗುತ್ತದೆ. ದಯವಿಟ್ಟು ದಲಿತ ಸಹೋದರರು ಸಹಕರಿಸಬೇಕು ಎಂದು ಕರ್ನಾಟಕ ವಹ್ನಿಕುಲ ಕ್ಷತ್ರಿಯ ಸಂಘದ ರಾಜ್ಯಾಧ್ಯಕ್ಷ ಹೊಸಕೋಟೆ ಜಯರಾಜ್‌ ಹೇಳಿದರು.

ಕರಗ ಮಾಡಿದರೆ ತಪ್ಪೇನು?: ಕರ್ನಾಟಕ ರಾಜ್ಯ ಮಾದಿಗ ದಂಡೋರ ರಾಜ್ಯಾಧ್ಯಕ್ಷ ಶಂಕರಪ್ಪ ಮಾತನಾಡಿ, ವಹ್ನಿಕುಲ ಜನಾಂಗದವರಿಗೆ ಜಾತಿ ಮುಖ್ಯವೋ, ಧರ್ಮ ಮುಖ್ಯವೋ ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಊರೂರು, ಕಾಲೋನಿ, ಗ್ರಾಮಗಳಲ್ಲಿ ಚರ್ಚ್‌ಗಳು, ಮಸೀದಿ ಗಳು ಆಗುತ್ತಿವೆ. ಅದರಂತೆ ಕರಗವೂ ನಮ್ಮ ಸಮುದಾಯದವರು ಕೇಳುವುದರಲ್ಲಿ ತಪ್ಪೇನು? ಮಾಡಲಿ ಬಿಡಿ ಎಂದರು.

ಒಮ್ಮತದ ನಿರ್ಧಾರ ಕೈಗೊಳ್ಳಿ: ತಹಶೀಲ್ದಾರ್‌ ಮಂಜುನಾಥ್‌ ಮಾತನಾಡಿ, ಈ ವಿಚಾರವನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ. ಎರಡೂ ಸಮುದಾಯದವರು ಒಮ್ಮತದಿಂದ ಒಂದು ನಿರ್ಧಾರವನ್ನು ತೆಗೆದುಕೊಂಡು ನಮ್ಮ ಗಮನಕ್ಕೆ ತರುವಂತೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕ್ಷತ್ರಿಯ ಮಹಾಸಭಾ ರಾಜ್ಯಾಧ್ಯಕ್ಷ ಸುಬ್ಬಣ್ಣ, ದಲಿತ ಮುಖಂಡರಾದ ಬುಳ್ಳಹಳ್ಳಿ ರಾಜಪ್ಪ, ಮಾರಪ್ಪ, ಪಿವಿಬಿಎಸ್‌ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎನ್‌.ನಾಗರಾಜ್‌, ಚಂದೇನಹಳ್ಳಿ ಮುನಿಯಪ್ಪ, ವಹ್ನಿಕುಲ ಸಮಾಜದ ಮುಖಂಡರಾದ ಗೋಪಾಲಕೃಷ್ಣ, ಎನ್‌.ಚಂದ್ರಶೇಖರ್‌, ಆರ್‌.ಮುನಿಶಾಮಪ್ಪ, ಬೈಚಾಪುರ ಆರ್‌.ವೆಂಕಟೇಶ್‌ ಸೇರಿದಂತೆ ಉಭಯ ಸಮು ದಾಯಗಳ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.