![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 10, 2019, 12:12 PM IST
ಕುಂದಗೋಳ: ತೀರ್ಥ ಹಾಗೂ ಬೆಳ್ಳಿಗಟ್ಟಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಮತ ಯಾಚನೆ ಮಾಡಿದರು.
ಕುಂದಗೋಳ: ನಮ್ಮ ಯಜಮಾನರು ಈ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿಗಳೇ ನನಗೆ ಶ್ರೀರಕ್ಷೆಯಾಗಲಿದ್ದು, ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹೇಳಿದರು.
ತೀರ್ಥ ಹಾಗೂ ಬೆಳ್ಳಿಗಟ್ಟಿ ಗ್ರಾಮದಲ್ಲಿ ಗುರುವಾರ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿ, ಬಡಜನತೆಗಾಗಿ ಹಾಗೂ ನಮ್ಮ ಕ್ಷೇತ್ರಾಭಿವೃದ್ಧಿಗೆ ನಮ್ಮ ಮನೆಯವರು ಸಾಕಷ್ಟು ಕೆಲಸ-ಕಾರ್ಯ ಮಾಡಿದ್ದಾರೆ. ಅವರ ಹಾದಿಯೇ ನನಗೆ ರಾಜಕೀಯ ಕನ್ನಡಿಯಾಗಿದೆ. ನಮ್ಮ ಮತಕ್ಷೇತ್ರಕ್ಕೆ ಬೇಕಾದ ಹಲವಾರು ಯೋಜನೆಗಳ ಬಗ್ಗೆ ನಾನು ತಿಳಿದುಕೊಂಡಿದ್ದು, ಆ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಕೈಗೂಡುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕವಿತಾ ಸೊಟ್ಟಮ್ಮನವರ, ಶಾಂತಾ ಶಿವಳ್ಳಿ, ನಿಂಗಮ್ಮ ಸಂಶಿ, ಬೀಬಿಜಾನ ನದಾಫ್, ಈರಮ್ಮ ಬಾರಕೇರ, ದಾಕ್ಷಾಯಿಣಿ ಕೊಪ್ಪದ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.