![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 10, 2019, 12:31 PM IST
ಹೊಸದಿಲ್ಲಿ : ಲೋಕಸಭಾ ಚುನಾವಣೆಗಳ ಬಳಿಕ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದರೆ ಅಮಿತ್ ಶಾ ಗೃಹ ಸಚಿವರಾಗುತ್ತಾರೆ ಎಂದು ದಿಲ್ಲಿ ಸಿಎಂ, ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.
‘ಅಮಿತ್ ಶಾ ಗೃಹ ಸಚಿವರಾದರೆ ಈ ದೇಶದ ಗತಿ ಏನಾದೀತು ಎಂಬುದನ್ನು ಮತದಾರರು ಚಿಂತಿಸಬೇಕು; ಆದುದರಿಂದ ಅವರು ಮತ ಹಾಕುವ ಮುನ್ನ ಯೋಚಿಸಬೇಕು’ ಎಂದು ಕೇಜ್ರಿವಾಲ್ ತಮ್ಮ ಟ್ವೀಟ್ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿದರೆ ಮಾಜಿ ಆರ್ಥಿಕ ಸಲಹೆಗಾರ ಅರವಿಂದ ವೀರಮಣಿ ಮತ್ತು ಮಾಜಿ ಆರ್ಬಿಐ ಗವರ್ನರ್ ಬಿಮಲ್ ಜಲಾನ್ ಅವರು ಅರ್ಥ ಸಚಿವರಾಗಲು ಯೋಗ್ಯರಿದ್ದಾರೆ ಎಂದೂ ಕೇಜ್ರಿವಾಲ್ ಹೇಳಿದ್ದಾರೆ.
ಇದೇ ಭಾನುವಾರ ಮೇ 12ರಂದು ನಡೆಯುವ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ದಿಲ್ಲಿಯಲ್ಲಿ ಮತದಾನ ನಡೆಯಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.