ಕಮಲಾಪುರದಲ್ಲಿ ಮಡಿಕೆ ತಯಾರಿಕೆ ಕಮಾಲ್


Team Udayavani, May 10, 2019, 12:53 PM IST

chikk-4

ಗೌರಿಬಿದನೂರು: ಪುರಾಣಗಳ ಕಾಲದಿಂದಲೂ ಮಾನವನ ನಾಗರಿಕತೆ ಬೆಳೆಯುತ್ತಾ ಬಂದಿರುವುದೇ ಮಣ್ಣಿನ ಮಡಿಕೆಗಳಿಂದ ಎನ್ನಬಹುದು. ಆಧುನಿಕತೆಯ ಜೀವನ ಶೈಲಿಯಲ್ಲಿ ತಾಮ್ರದ ಪಾತ್ರೆಗಳು, ಇಂಡಾಲಿಯಂ ಪಾತ್ರೆಗಳು, ಸ್ಟೀಲ್ ಪಾತ್ರೆಗಳಿಗೆ ಒಗ್ಗಿಕೊಂಡು ನಮಗೆ ಹಲವಾರು ದಶಕಗಳೇ ಕಳೆದಿದ್ದರೂ ತಣ್ಣನೆಯ ನೀರನ್ನು ಕುಡಿಯಲು ಫ್ರಿಡ್ಜ್ಗಿಂತಲೂ ಇಂದಿಗೂ ಮಣ್ಣಿನ ಮಡಿಕೆಯನ್ನೇ ಅವಲಂಬಿಸಿದ್ದೇವೆ.

ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಉಚಿತವಾಗಿ ಕುಡಿಯಲು ನೀರಿನ ಅರವಟಿಗೆಗಳನ್ನು ಸ್ಥಾಪಿಸಿ ಅದರಲ್ಲಿ ಮಣ್ಣಿನ ಮಡಿಕೆಗಳನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಈಗಾಗಲೇ ಮೂಲೆ ಗುಂಪಾಗಿರುವ ಕುಂಬಾರಿಕೆ ಗೌರಿಬಿದನೂರು ತಾಲೂಕಿನಲ್ಲಿ ಅಳಿದುಳಿದಿದೆ ಎನ್ನಬಹುದಾಗಿದೆ.

ರಾಜ್ಯ ಹೆದ್ದಾರಿ ಬೆಂಗಳೂರು ರಸ್ತೆಯಲ್ಲಿ ಬರುವ ತೊಂಡೇಬಾವಿ ಹೋಬಳಿಯಲ್ಲಿ ಕಮಲಾಪುರ ಎಂಬ ಪುಟ್ಟಗ್ರಾಮವಿದ್ದು, ಈ ಗ್ರಾಮದಲ್ಲಿ ಹಿಂದೆ ಸುಮಾರು 30 ಕುಟುಂಬಗಳು ಇದ್ದವು. ಪ್ರಸ್ತುತ ಇರುವ ಕೆಲವೇ ಕುಟುಂಬಗಳು ಮಡಿಕೆಗಳನ್ನು ತಯಾರಿಕೆ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ತಯಾರಿಸುವ ವಿಧಾನ: ಪ್ರತಿ ವರ್ಷ ಜನವರಿಯಲ್ಲಿ ಸ್ಥಳೀಯ ಪೋತೇನಹಳ್ಳಿ ಕೆರೆಯಿಂದ ಜೇಡಿಮಣ್ಣನ್ನು ತಂದು ಸಂಗ್ರಹಿಸಿ ಮಡಿಕೆ ತಯಾರಿಸುತ್ತಾರೆ. ಜನವರಿಯಿಂದ ಜೂನ್‌ವರೆಗೆ ಮಡಿಕೆಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.

ನೈಪುಣ್ಯತೆ ಬೇಕು: ಮಡಿಕೆಗಳನ್ನು ವಿವಿಧ ಶೈಲಿಗಳಲ್ಲಿ ತಯಾರಿಸಲು ಸಾಕಷ್ಟು ನೈಪುಣ್ಯತೆ ಹಾಗೂ ಕೌಶಲ್ಯತೆ ಬೇಕಾಗಿದ್ದು, ಹಳಬರು ಇಂದಿಗೂ ಇಂತಹ ಕೌಶಲ್ಯದಿಂದ ಮಡಿಕೆ ತಯಾರು ಮಾಡುತ್ತಿದ್ದಾರೆ. ಹಿಂದೆ ಧಾನ್ಯಗಳನ್ನು ಸಂಗ್ರಹಿಸಲು ಮಣ್ಣಿನಿಂದ ತಯಾರಾದ ವಾಡೆಗಳನ್ನು ಬಳಸುತ್ತಿದ್ದರು.

ಅದು ಕಾಲಕ್ರಮೇಣ ನೇಪಥ್ಯಕ್ಕೆ ಸರಿದ ಮೇಲೆ ಇದೇ ವಾಡೆಗಳನ್ನು ಈಗ ನಗರ ಪ್ರದೇಶದಲಿ ್ಲತಂಧೂರಿ ರೋಟಿ ಮತ್ತು ಕುಲ್ಚಾಗಳನ್ನು ತಯಾರಿಸಲು ಬಳಸುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚು ವಾಡೆಗಳು ಡಾಬಾಗಳಿಗೆ ಮಾರಾಟವಾಗುತ್ತಿದೆ ಎಂದು ಕುಂಬಾರಿಕೆ ಮಾಡುತ್ತಿರುವ ಚಿಕ್ಕಸಿದ್ದಪ್ಪ ಹೇಳುತ್ತಾರೆ.

ಮಳೆ ಬಾರದೆ ವ್ಯವಸಾಯವು ಸಾಕಷ್ಟು ನಷ್ಟವಾಗುತ್ತಿರುವ ಇಂದಿನ ದಿನಗಳಲ್ಲಿ ಕುಂಬಾರಿಕೆಯ ಮೇಲೂ ಹೆಚ್ಚು ಪರಿಣಾಮ ಬೀರುತ್ತದೆ ಎನ್ನುತ್ತಾರಾದರೂ ಮಡಿಕೆಗಳನ್ನು ತಯಾರು ಮಾಡಲು ಸುಡಬೇಕಾದ ನೀಲಗಿರಿ ಸೊಪ್ಪು ಸಿಗುವುದು ಕಷ್ಟಕರವಾಗಿದೆ.

ಖರೀದಿಸಲು ಸಹ ದುಬಾರಿಯಾಗಿರುವುದರಿಂದ ಮಡಿಕೆ ತಯಾರಿಸುವ ವೆಚ್ಚವೂ ಹೆಚ್ಚಾಗುತ್ತಿದೆ ಎನ್ನುವ ಅವರು, ಮಡಿಕೆಯನ್ನು ಎರಡು ಬಣ್ಣದಲ್ಲಿ ತಯಾರಿಸುತ್ತಿದ್ದು ಕೆಂಪುಬಣ್ಣದ ಮಡಿಕೆಗೆ ಬಣ್ಣ ಹಾಕಲಾಗುತ್ತಿದ್ದು ಅವುಗಳು ನಗರ ಪ್ರದೇಶದಲ್ಲಿ ಹೆಚ್ಚು ಮಾರಾಟವಾಗುತ್ತಿದೆ. ಕೆಲವು ನಗರ ಪ್ರದೇಶದವರು ಬಂದು ಸಗಟಾಗಿ ಮಡಿಕೆಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಅವರು ಮಡಿಕೆಗಳನ್ನು ತಯಾರಿಸುವುದುಕ್ಕಿಂತಲೂ ಅವುಗಳನ್ನು ಒಂದು ಕಡೆಯಿಂದ ಮತ್ತೂಂದೆಡೆಗೆ ಸಾಗಾಣಿಕೆ ಮಾಡುವುದು ಕಷ್ಟಕರವಾಗಿದ್ದು, ಲಾರಿಗಳಲ್ಲಿ ಒಣಹುಲ್ಲನ್ನು ತುಂಬಿ ಸಾಗಾಣಿಕೆ ಮಾಡಲಾಗುತ್ತದೆ ಎಂದು ಹೇಳುತ್ತಾರೆ ಕಮಲಾಪುರದ ಚಿಕ್ಕಸಿದ್ದಪ್ಪ.

ಕಾಯಕಕ್ಕೆ ತನ್ನ ಇಬ್ಬರು ಮಕ್ಕಳು ಹಾಗೂ ಮನೆಯ ಮಹಿಳೆಯರ ಬೆಂಬಲವೂ ಸೇರಿ 6 ತಿಂಗಳು ಶ್ರಮವಹಿಸಿ ಮಡಿಕೆಗಳನ್ನು ತಯಾರಿಸಿದರೆ ಜನವರಿಯಿಂದ ಜೂನ್‌ವರೆಗೆ ಮಾರಾಟ ಮಾಡಿದರೆ ಖರ್ಚುಗಳೆಲ್ಲವೂ ಹೋಗಿ 1.5 ಲಕ್ಷದಿಂದ 2 ಲಕ್ಷ ಆದಾಯ ಬರುತ್ತದೆ ಎಂದು ಹೇಳಿದರು.

ಪ್ರತಿ ವ್ಯಕ್ತಿಯಿಂದ ದಿನಕ್ಕೆ 20 ಮಡಿಕೆ ತಯಾರಿ

ಪ್ರತಿ ವ್ಯಕ್ತಿ ಒಂದು ದಿನಕ್ಕೆ 20 ಮಡಿಕೆಗಳನ್ನು ತಯಾರಿಸಬಹುದು. ಈ ಗುಡಿ ಕೈಗಾರಿಕೆಯಲ್ಲಿ ಮಹಿಳೆಯರೂ ಸಹಾಯ ಮಾಡುವುದರಿಂದ ಮಾರಾಟ ಮಾಡಲು, ತಯಾರಿಸಲು ಹಾಗೂ ಮಣ್ಣನ್ನು ಹದಮಾಡಲು ಪುರುಷರಿಗೆ ಸಹಾಯ ಮಡುವುದು ಹೆಚ್ಚು ಉಪಕಾರಿಯಾಗಿದೆ. ಆಧುನಿಕ ವಿನ್ಯಾಸದ ಹೂವಿನ ಕುಂಡ, ಪಾಟುಗಳು ಮುಂತಾದವುಗಳಿಂದ ಹೆಚ್ಚು ವ್ಯಾಪಾರ ಮತ್ತು ಮಾರಾಟವಾಗುತ್ತಿದೆ ಎನ್ನಲಾಗಿದ್ದು, ಆಧುನಿಕತೆಯ ಅತಿರೇಕದಿಂದ ಹೊಸದು ಹೋಗಿ ಹಳೆಯ ಪರಿಕಲ್ಪನೆಗಳು ಮರು ಕಳಿಸುತ್ತದೆ ಎನ್ನುವುದಕ್ಕೆ ಮೂಲೆಗುಂಪಾಗಿದ್ದ ಕುಂಬಾರಿಕೆ ಹೊಸ ಶೈಲಿಯಲ್ಲಿ ಹೆಚ್ಚು ಬೆಳಕಿಗೆ ಬರಲಿ ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.