
ಕಮಲಾಪುರದಲ್ಲಿ ಮಡಿಕೆ ತಯಾರಿಕೆ ಕಮಾಲ್
Team Udayavani, May 10, 2019, 12:53 PM IST

ಗೌರಿಬಿದನೂರು: ಪುರಾಣಗಳ ಕಾಲದಿಂದಲೂ ಮಾನವನ ನಾಗರಿಕತೆ ಬೆಳೆಯುತ್ತಾ ಬಂದಿರುವುದೇ ಮಣ್ಣಿನ ಮಡಿಕೆಗಳಿಂದ ಎನ್ನಬಹುದು. ಆಧುನಿಕತೆಯ ಜೀವನ ಶೈಲಿಯಲ್ಲಿ ತಾಮ್ರದ ಪಾತ್ರೆಗಳು, ಇಂಡಾಲಿಯಂ ಪಾತ್ರೆಗಳು, ಸ್ಟೀಲ್ ಪಾತ್ರೆಗಳಿಗೆ ಒಗ್ಗಿಕೊಂಡು ನಮಗೆ ಹಲವಾರು ದಶಕಗಳೇ ಕಳೆದಿದ್ದರೂ ತಣ್ಣನೆಯ ನೀರನ್ನು ಕುಡಿಯಲು ಫ್ರಿಡ್ಜ್ಗಿಂತಲೂ ಇಂದಿಗೂ ಮಣ್ಣಿನ ಮಡಿಕೆಯನ್ನೇ ಅವಲಂಬಿಸಿದ್ದೇವೆ.
ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಉಚಿತವಾಗಿ ಕುಡಿಯಲು ನೀರಿನ ಅರವಟಿಗೆಗಳನ್ನು ಸ್ಥಾಪಿಸಿ ಅದರಲ್ಲಿ ಮಣ್ಣಿನ ಮಡಿಕೆಗಳನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಈಗಾಗಲೇ ಮೂಲೆ ಗುಂಪಾಗಿರುವ ಕುಂಬಾರಿಕೆ ಗೌರಿಬಿದನೂರು ತಾಲೂಕಿನಲ್ಲಿ ಅಳಿದುಳಿದಿದೆ ಎನ್ನಬಹುದಾಗಿದೆ.
ರಾಜ್ಯ ಹೆದ್ದಾರಿ ಬೆಂಗಳೂರು ರಸ್ತೆಯಲ್ಲಿ ಬರುವ ತೊಂಡೇಬಾವಿ ಹೋಬಳಿಯಲ್ಲಿ ಕಮಲಾಪುರ ಎಂಬ ಪುಟ್ಟಗ್ರಾಮವಿದ್ದು, ಈ ಗ್ರಾಮದಲ್ಲಿ ಹಿಂದೆ ಸುಮಾರು 30 ಕುಟುಂಬಗಳು ಇದ್ದವು. ಪ್ರಸ್ತುತ ಇರುವ ಕೆಲವೇ ಕುಟುಂಬಗಳು ಮಡಿಕೆಗಳನ್ನು ತಯಾರಿಕೆ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ತಯಾರಿಸುವ ವಿಧಾನ: ಪ್ರತಿ ವರ್ಷ ಜನವರಿಯಲ್ಲಿ ಸ್ಥಳೀಯ ಪೋತೇನಹಳ್ಳಿ ಕೆರೆಯಿಂದ ಜೇಡಿಮಣ್ಣನ್ನು ತಂದು ಸಂಗ್ರಹಿಸಿ ಮಡಿಕೆ ತಯಾರಿಸುತ್ತಾರೆ. ಜನವರಿಯಿಂದ ಜೂನ್ವರೆಗೆ ಮಡಿಕೆಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.
ನೈಪುಣ್ಯತೆ ಬೇಕು: ಮಡಿಕೆಗಳನ್ನು ವಿವಿಧ ಶೈಲಿಗಳಲ್ಲಿ ತಯಾರಿಸಲು ಸಾಕಷ್ಟು ನೈಪುಣ್ಯತೆ ಹಾಗೂ ಕೌಶಲ್ಯತೆ ಬೇಕಾಗಿದ್ದು, ಹಳಬರು ಇಂದಿಗೂ ಇಂತಹ ಕೌಶಲ್ಯದಿಂದ ಮಡಿಕೆ ತಯಾರು ಮಾಡುತ್ತಿದ್ದಾರೆ. ಹಿಂದೆ ಧಾನ್ಯಗಳನ್ನು ಸಂಗ್ರಹಿಸಲು ಮಣ್ಣಿನಿಂದ ತಯಾರಾದ ವಾಡೆಗಳನ್ನು ಬಳಸುತ್ತಿದ್ದರು.
ಅದು ಕಾಲಕ್ರಮೇಣ ನೇಪಥ್ಯಕ್ಕೆ ಸರಿದ ಮೇಲೆ ಇದೇ ವಾಡೆಗಳನ್ನು ಈಗ ನಗರ ಪ್ರದೇಶದಲಿ ್ಲತಂಧೂರಿ ರೋಟಿ ಮತ್ತು ಕುಲ್ಚಾಗಳನ್ನು ತಯಾರಿಸಲು ಬಳಸುತ್ತಿದ್ದು, ನಗರ ಪ್ರದೇಶದಲ್ಲಿ ಹೆಚ್ಚು ವಾಡೆಗಳು ಡಾಬಾಗಳಿಗೆ ಮಾರಾಟವಾಗುತ್ತಿದೆ ಎಂದು ಕುಂಬಾರಿಕೆ ಮಾಡುತ್ತಿರುವ ಚಿಕ್ಕಸಿದ್ದಪ್ಪ ಹೇಳುತ್ತಾರೆ.
ಮಳೆ ಬಾರದೆ ವ್ಯವಸಾಯವು ಸಾಕಷ್ಟು ನಷ್ಟವಾಗುತ್ತಿರುವ ಇಂದಿನ ದಿನಗಳಲ್ಲಿ ಕುಂಬಾರಿಕೆಯ ಮೇಲೂ ಹೆಚ್ಚು ಪರಿಣಾಮ ಬೀರುತ್ತದೆ ಎನ್ನುತ್ತಾರಾದರೂ ಮಡಿಕೆಗಳನ್ನು ತಯಾರು ಮಾಡಲು ಸುಡಬೇಕಾದ ನೀಲಗಿರಿ ಸೊಪ್ಪು ಸಿಗುವುದು ಕಷ್ಟಕರವಾಗಿದೆ.
ಖರೀದಿಸಲು ಸಹ ದುಬಾರಿಯಾಗಿರುವುದರಿಂದ ಮಡಿಕೆ ತಯಾರಿಸುವ ವೆಚ್ಚವೂ ಹೆಚ್ಚಾಗುತ್ತಿದೆ ಎನ್ನುವ ಅವರು, ಮಡಿಕೆಯನ್ನು ಎರಡು ಬಣ್ಣದಲ್ಲಿ ತಯಾರಿಸುತ್ತಿದ್ದು ಕೆಂಪುಬಣ್ಣದ ಮಡಿಕೆಗೆ ಬಣ್ಣ ಹಾಕಲಾಗುತ್ತಿದ್ದು ಅವುಗಳು ನಗರ ಪ್ರದೇಶದಲ್ಲಿ ಹೆಚ್ಚು ಮಾರಾಟವಾಗುತ್ತಿದೆ. ಕೆಲವು ನಗರ ಪ್ರದೇಶದವರು ಬಂದು ಸಗಟಾಗಿ ಮಡಿಕೆಗಳನ್ನು ಖರೀದಿಸಿ ಬೆಂಗಳೂರಿನಲ್ಲಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಅವರು ಮಡಿಕೆಗಳನ್ನು ತಯಾರಿಸುವುದುಕ್ಕಿಂತಲೂ ಅವುಗಳನ್ನು ಒಂದು ಕಡೆಯಿಂದ ಮತ್ತೂಂದೆಡೆಗೆ ಸಾಗಾಣಿಕೆ ಮಾಡುವುದು ಕಷ್ಟಕರವಾಗಿದ್ದು, ಲಾರಿಗಳಲ್ಲಿ ಒಣಹುಲ್ಲನ್ನು ತುಂಬಿ ಸಾಗಾಣಿಕೆ ಮಾಡಲಾಗುತ್ತದೆ ಎಂದು ಹೇಳುತ್ತಾರೆ ಕಮಲಾಪುರದ ಚಿಕ್ಕಸಿದ್ದಪ್ಪ.
ಕಾಯಕಕ್ಕೆ ತನ್ನ ಇಬ್ಬರು ಮಕ್ಕಳು ಹಾಗೂ ಮನೆಯ ಮಹಿಳೆಯರ ಬೆಂಬಲವೂ ಸೇರಿ 6 ತಿಂಗಳು ಶ್ರಮವಹಿಸಿ ಮಡಿಕೆಗಳನ್ನು ತಯಾರಿಸಿದರೆ ಜನವರಿಯಿಂದ ಜೂನ್ವರೆಗೆ ಮಾರಾಟ ಮಾಡಿದರೆ ಖರ್ಚುಗಳೆಲ್ಲವೂ ಹೋಗಿ 1.5 ಲಕ್ಷದಿಂದ 2 ಲಕ್ಷ ಆದಾಯ ಬರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.