ವಿದ್ಯಾರ್ಥಿ ಒಂದೊಂದು ಸಸಿ ನೆಡಲಿ: ಶೋಭಾ
ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಯುವರೆಡ್ ಕ್ರಾಸ್ ಮತ್ತು ಎನ್ನೆಸ್ಸೆಸ್ ಘಟಕದ ಸಹಯೋಗದಲ್ಲಿ ವಿಶ್ವ ಭೂದಿನ, ಭಾರತೀಯ ಯುವ ರೆಡ್ ಕ್ರಾಸ್ ದಿನಾಚರಿಸಲಾಯಿತು.
Team Udayavani, May 10, 2019, 3:17 PM IST
ಕೊಪ್ಪಳ: ಪ್ರಸ್ತುತ ದಿನದಲ್ಲಿ ಮಾನವನೇ ತನ್ನ ಸ್ವಾರ್ಥತೆಯಿಂದ ನಿಸರ್ಗ ಸಂಪತ್ತನ್ನು ನಾಶಪಡಿಸುತ್ತಿದ್ದಾನೆ. ಇದರಿಂದ ಮುಂದೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿದೆ. ಇದನ್ನರಿತು ವಿದ್ಯಾರ್ಥಿಗಳು ಒಂದೊಂದು ಸಸಿ ನೆಟ್ಟು ಗಿಡವನ್ನಾಗಿ ಬೆಳೆಸುವ ಜವಾಬ್ದಾರಿ ಹೊರಬೇಕಿದೆ ಎಂದು ರೆಡ್ಕ್ರಾಸ್ ಸಂಯೋಜಿಕ ಶೋಭಾ ಕೆ.ಎಸ್. ಅವರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಯುವರೆಡ್ ಕ್ರಾಸ್ ಮತ್ತು ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ಭೂದಿನ, ಭಾರತೀಯ ಯುವ ರೆಡ್ ಕ್ರಾಸ್ ದಿನ ಆಚರಣೆಯಲ್ಲಿ ಮಾತನಾಡಿದರು.
ನಿಸರ್ಗ ಸಂಪತ್ತು ಸಂಪೂರ್ಣವಾಗಿ ನಾಶವಾಗುತ್ತಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ ವಿಶ್ವವನ್ನೇ ನಾಶ ಮಾಡುತ್ತಿದ್ದಾನೆ. ಅದನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರತಿಯೊಂದು ಜೀವಿಯು ನಿಸರ್ಗವನ್ನೇ ಅವಲಂಬಿಸಿದೆ. ಅದನ್ನು ನಾವು ಉಳಿಸಬೇಕೇ ವಿನಃ ಅಳಿಸಬಾರದು. ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ನೆಟ್ಟು ಸಂಪೂರ್ಣವಾಗಿ ಮರವನ್ನಾಗಿ ಬೆಳೆಸುವ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಓಝೋನ್ ಪದರ ನಾಶವಾಗದೇ ಸಕಾಲಕ್ಕೆ ಮಳೆ, ಬೆಳೆಯಾಗುತ್ತಿಲ್ಲ ಎಂದರು.
ಮನುಷ್ಯರ ಜೀವ ಉಳಿಸುವಲ್ಲಿ ರೆಡ್ಕ್ರಾಸ್ ಸಂಸ್ಥೆ ಪ್ರಮುಖ ಪಾತ್ರ ಮುಖ್ಯವಾದದ್ದು. ಈ ದಿಸೆಯಲ್ಲಿ ಕೊಪ್ಪಳದ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದರು.
ಉಪನ್ಯಾಸಕರಾದ ರವೀಂದ್ರ ಬಗಾಡೆ ಮಾತನಾಡಿ, ಪ್ರಕೃತಿ ವಿಕೋಪಗಳನ್ನು ತಡೆಯುವುದರಿಂದ ಮಾನವ ಮತ್ತು ಜೀವ ಕುಲಕ್ಕೆ ಶಾಂತಿ ದೊರುಕುತ್ತದೆ ಎಂದರು.
ಉಪನ್ಯಾಸಕ ಸುರೇಶ ಕಿನ್ನಾಳ, ಗ್ರಂಥಪಾಲಕ ರವೀಂದ್ರ ಮುದ್ದಿ ಉಪಸ್ಥಿತರಿದ್ದರು. ಬಿಎಸ್ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಪ್ರವೀಣ ನಿರೂಪಿಸಿದರು. ವಿದ್ಯಾರ್ಥಿ ರಾಜಾಸಾಬ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.