ಪ್ರಮಾಣ ಪತ್ರ ಪಡೆಯಲು ಬರುವ ಅಂಗವಿಕಲರಿಗೆ ಅನ್ನದಾನ ಸೇವೆ
Team Udayavani, May 10, 2019, 4:04 PM IST
ಕೋಲಾರ: ಮಹಾನ್ ಪೋಷಣಾ ಎಜುಕೇಶನ್ ಟ್ರಸ್ಟ್ ವತಿಯಿಂದ ಅಂಗವಿಕಲರಿಗೆ ಸರ್ಕಾರಿ ಎಸ್ಎನ್ಆರ್ ಆಸ್ಪತ್ರೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಅಂಗವಿಕಲರ ಪ್ರಮಾಣಪತ್ರಕ್ಕೆ ಬರುವವರಿಗೆ ಅನ್ನದಾನ ಮಾಡಲಾಗುತ್ತಿದೆ.
ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಎಂ.ವೆಂಕಟರಾಮಪ್ಪ ಮಾತನಾಡಿ, ಆಹಾರ ಪ್ರತಿ ಜೀವಿಗೂ ಮುಖ್ಯವಾಗಿದೆ. ಅಂಗವಿಕಲರಿಗೆ ಆಹಾರ ನೀಡುವುದು ಮಹಾದಾನವೆಂದು ತಿಳಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಸಂತೋಷ್ಪ್ರಭು ಮಾತನಾಡಿ, ಇಂತಹ ಜನರಿಗೆ ಉಪಯೋಗವಾಗುವಂತ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವುದು ಸೂಕ್ತವೆಂದರು.
ಮಹಾನ್ ಪೋಷಣಾ ಎಜುಕೇಷನ್ ಕಾರ್ಯದರ್ಶಿ ಎಚ್.ಶ್ರೀನಿವಾಸಪ್ಪ ಮಾತನಾಡಿ, ಭಗವಂತನ ಕೃಪೆಯಿಂದ ನಮಗೆ ಸಿಕ್ಕ ಅವಕಾಶದಲ್ಲಿ ಮನುಷ್ಯರಿಗೆ ಸಹಾಯ ಮಾಡುವುದು ಮಾನವ ಧರ್ಮವೆಂದರು.
ಆಸ್ಪತ್ರೆಯ ವ್ಯವಸ್ಥಾಪಕ ಸಂದಪ್ಪ ಅಂಗವಿಕಲರಿಗೆ ಅನ್ನ ವಿತರಿಸಿದರು. ಶಿಳ್ಳಂಗೆರೆ ಮಹೇಶ್, ಎಸ್ಎನ್ಆರ್ ಗೋವಿಂದು, ಜನ್ನಘಟ್ಟ ನಾರಾಯಣಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.