ಭಾರತ ತತ್ವಜ್ಞಾನಿಗಳ ತವರು: ಡಾ| ಮಂಜುಳಾ

ಶಂಕರಾಚಾರ್ಯರು ಅಲ್ಪಾಯುಷ್ಯದಲ್ಲಿಯೇ ಇಡೀ ದೇಶವನ್ನು ಎರಡು ಬಾರಿ ಸುತ್ತಿ ಅಪಾರ ಸಾಧನೆ ಮಾಡಿದವರು

Team Udayavani, May 10, 2019, 4:36 PM IST

10-May-32

ಚಿಕ್ಕಮಗಳೂರು: ಶಂಕರ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಎಸ್‌.ಅಶ್ವತಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು

ಚಿಕ್ಕಮಗಳೂರು: ನಮ್ಮ ದೇಶವು ತತ್ವಜ್ಞಾನಿಗಳ ತವರಾಗಿದೆ. ಶ್ರೀ ಶಂಕರಾಚಾರ್ಯರು ಭಾರತ ಕಂಡ ಸರ್ವ ಶ್ರೇಷ್ಠ ಯತಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ| ಮಂಜುಳಾ ಹುಲ್ಲಳ್ಳಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಶ್ರೀಶಂಕರ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಶ್ರೀಶಂಕರಾಚಾರ್ಯರು ಅದ್ವೈತ ಮತ ಸ್ಥಾಪನಾಚಾರ್ಯರು, ಸಮಾಜ ಸುಧಾರಕರು. ಇದಕ್ಕೆಲ್ಲ ಕಲಶವಿಟ್ಟಂತೆ ಅಪೂವ‌ರ್ ಪ್ರತಿಭಾ ಸಂಪನ್ನ ಕವಿಗಳು, ಮಹಾದಾರ್ಶನಿಕರು, ಯುಗ ಪುರುಷರು ಆಗಿದ್ದರು. ತಮ್ಮ ಅಲ್ಪಾಯುಷ್ಯದಲ್ಲಿಯೇ ಇಡೀ ದೇಶವನ್ನು ಎರಡು ಬಾರಿ ಸುತ್ತಿ ಅಪಾರ ಸಾಧನೆ ಮಾಡಿದವರು ಎಂದು ಬಣ್ಣಿಸಿದರು.

ಶ್ರೀಶಂಕರರು ಆತ್ಮ, ಪರಮಾತ್ಮ ಬೇರೆ ಅಲ್ಲ ಅನ್ನುವ ಪರಮ ಅರ್ಥದಲ್ಲಿ ಅದ್ವೈತ ಮತವನ್ನು ಎತ್ತಿ ಹಿಡಿದರು. ಈ ತತ್ವವನ್ನು ಮುಂದುವರೆಸಿದ ಶ್ರೀರಾಮಾನುಜಾಚಾರ್ಯರು ವಿಶಿಷ್ಟಾದ್ವೈತ ತತ್ವವನ್ನು, ಶ್ರೀಮಧ್ವಾಚಾರ್ಯರು ದ್ವೈತ ಸಿದ್ಧಾಂತವನ್ನು ಎತ್ತಿ ಹಿಡಿದರು ಎಂದು ತಿಳಿಸಿದರು.

ಈ ಎಲ್ಲ ತತ್ವ ಜಿಜ್ಞಾಸೆಗಳು ಆತ್ಮ, ಪರಮಾತ್ಮದ ಅನ್ವೇಷಣೆಯನ್ನೇ ಪರಮ ಗುರಿಯಾಗಿ ಇರಿಸಿಕೊಂಡಿವೆ. ಭಾರತೀಯ ತತ್ವಗಳಿಗೆ ಹೊಸ ಆಯಾಮ ನೀಡಿದ ಕಾರಣ ಈ ಎಲ್ಲ ತತ್ವಜ್ಞಾನಿಗಳನ್ನು ಸ್ಮರಿಸುತ್ತ ಇಂದು ತತ್ವಜ್ಞಾನಿಗಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಶ್ರೀಶಂಕರರು ತಮ್ಮ ಅಲ್ಪಾಯುಷ್ಯದಲ್ಲಿಯೇ ನಾಲ್ಕು ವೇದಗಳನ್ನು ಅಭ್ಯಾಸ ಮಾಡಿದ್ದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಪೀಠಗಳನ್ನು ಸ್ಥಾಪಿಸಿದರು. ದಕ್ಷಿಣ ಭಾರತದಲ್ಲಿ ನಮ್ಮ ಜಿಲ್ಲೆಯ ಶೃಂಗೇರಿಯಲ್ಲಿ ಶಾರದಾ ಪೀಠವನ್ನು ಸ್ಥಾಪಿಸಿ ಅಹಂ ಬ್ರಹ್ಮಾಸ್ಮಿ ಎಂಬ ಘೋಷವಾಖ್ಯ ನೀಡಿದರು. ಅಹಂ ಬ್ರಹ್ಮಾಸ್ಮಿ ಎಂದರೆ ನಾನು ಬ್ರಹ್ಮನೇ ಆಗಿದ್ದೇನೆ ಎಂಬ ಅರ್ಥ ಬರುತ್ತದೆ. ಅದೇ ರೀತಿ ಪಶ್ಚಿಮ ಭಾರತದ ಗುಜರಾತ್‌ ದ್ವಾರಕೆಯಲ್ಲಿ ದ್ವಾರಕಾಪೀಠ ಸ್ಥಾಪಿಸಿ ನೀನೂ ಅದೇ ಆಗಿರುವೆ ಎಂಬ ಅರ್ಥದ ತತ್‌ತ್ವಂ ಅಪಿ ಎಂಬ ಘೋಷ ವಾಖ್ಯ ನೀಡಿದರು ಎಂದು ಮಾಹಿತಿ ನೀಡಿದರು.

ಪೂರ್ವ ಭಾರತದ ಒರಿಸ್ಸಾದ ಪುರಿಯಲ್ಲಿ ಶ್ರೀಶಂಕರ ಪೀಠ ಸ್ಥಾಪಿಸಿ ಪ್ರಜ್ಞಾನಂ ಬ್ರಹ್ಮ, ಸಾಕ್ಷಿಯೇ ಬ್ರಹ್ಮ ಎಂಬ ಘೋಷ ವಾಖ್ಯ ನೀಡಿದರೆ, ಉತ್ತರದ ಉತ್ತರಾಖಂಡದ ಬದರಿಯಲ್ಲಿ ಜ್ಯೋತಿಕ ಮಠ ಸ್ಥಾಪಿಸಿ ಅಯಮಾತ್ಮಾ ಬ್ರಹ್ಮ, ಈ ಆತ್ಮವೆ ಬ್ರಹ್ಮವಾಗಿದೆ ಎಂದರು. ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸುವ ಮೂಲಕ ದೇಶದ ಧರ್ಮಕ್ಕೆ ಒಂದು ಹೊಸ ಆಯಾಮ ದೊರೆಯಿತು ಎಂದು ತಿಳಿಸಿದರು. ಶ್ರೀಶಂಕರರು ಅತ್ಯಂತ ಉತ್ತಮ ಕವಿಯಾಗಿದ್ದರು. ಅವರ ಹೆಸರಿನಲ್ಲಿ 240 ಶ್ಲೋಕಗಳು ದೊರೆತಿವೆ. ಅವರು ರಚಿಸಿದ ಸೌಂದರ್ಯ ಲಹರಿ, ಶಿವಾನಂದ ಲಹರಿ ಇಂದಿಗೂ ಹೆಚ್ಚು ಪ್ರಸ್ತುತವಾಗಿವೆ ಎಂದು ಹೇಳಿದರು.

ಈ ವೇಳೆ ಡಿಸಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಎಸ್‌.ಅಶ್ವತಿ, ಎಡಿಸಿ ಡಾ| ಕುಮಾರ್‌, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಜೋಷಿ ಶ್ರೀಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಶ್ರೀಶಂಕರರು ಅತ್ಯಂತ ಉತ್ತಮ ಕವಿಯಾಗಿದ್ದರು. ಅವರ ಹೆಸರಿನಲ್ಲಿ 240 ಶ್ಲೋಕಗಳು ದೊರೆತಿವೆ. ಅವರು ರಚಿಸಿದ ಸೌಂದರ್ಯ ಲಹರಿ, ಶಿವಾನಂದ ಲಹರಿ ಇಂದಿಗೂ ಹೆಚ್ಚು ಪ್ರಸ್ತುತವಾಗಿವೆ.
•ಡಾ| ಮಂಜುಳಾ,
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.