ಬೇಸಗೆ ದಾಹವಿದ್ದರೂ ಶುದ್ಧ ನೀರು ಘಟಕಕ್ಕೆ ದುರಸ್ತಿ ಫಲಕ..!


Team Udayavani, May 11, 2019, 8:32 AM IST

23

ಸುಳ್ಯ: ಜಾಲ್ಸೂರಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕಕ್ಕೆ ನೀರಿನ ದಾಹವಿರುವ ಬೇಸಗೆ ಹೊತ್ತಿನಲ್ಲೇ ದುರಸ್ತಿ ಫಲಕ ಅಂಟಿಸಲಾಗಿದೆ! ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸನಿಹದಲ್ಲಿರುವ ಈ ಘಟಕ ಕಾರ್ಯಾರಂಭಕ್ಕೆ ಮೀನ ಮೇಷ ಎಣಿಸುತ್ತಿದೆ. ಸ್ಥಳೀಯ ಪರಿಸರದ ಹಾಗೂ ಪ್ರಯಾಣಿಕರ ನೀರಿನ ದಾಹ ನೀಗಿಸಲು ಒಂದಷ್ಟು ನೆರವಾಗಬಹುದಿತ್ತು. ಅದಾಗ್ಯೂ ಘಟಕ ಕಾರ್ಯನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ.

ಎರಡು ಗ್ರಾ.ಪಂ. ವ್ಯಾಪ್ತಿಗೆ ಅನುಕೂಲ
ಜಾಲ್ಸೂರು ಗ್ರಾ.ಪಂ.ವ್ಯಾಪ್ತಿಗೆ ಒಳಪಟ್ಟಿರುವ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇತೃತ್ವದಲ್ಲಿ ಘಟಕ ನಿರ್ಮಿಸಲಾಗಿದೆ. ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪನೆಗೊಂಡಿರುವ ಈ ಘಟಕ ನೀರು ಒದಗಿಸಲು ಇನ್ನೂ ಶಕ್ತವಾಗಿಲ್ಲ. ಜಾಲ್ಸೂರು ಮತ್ತು ಕನಕಮಜಲು ಎರಡೂ ಗ್ರಾ.ಪಂ.ಗಳ ವ್ಯಾಪ್ತಿ ಪ್ರದೇಶದ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನೀರು ಪಡೆದುಕೊಳ್ಳಲು ಅನುಕೂಲ. ಉಭಯ ಗ್ರಾ.ಪಂ. ವ್ಯಾಪ್ತಿಯ ಕೆಲ ವಾರ್ಡ್‌ಗಳಲ್ಲಿ ನೀರಿನ ಕೊರತೆ ಕಂಡಿದ್ದು, ಇಂತಹ ಸಂದರ್ಭದಲ್ಲಿ ಘಟಕ ಸಹಕಾರಿ ಆಗುತಿತ್ತು. ಆದರೆ ದುರಸ್ತಿ ಬಗ್ಗೆ ಸ್ಥಳೀಯಾಡಳಿತವು ಮನಸ್ಸು ಮಾಡಿಲ್ಲ ಎನ್ನುವುದು ಸಾರ್ವಜನಿಕರ ದೂರು.

ನೀರು ನೀಡದಂತೆ ಲಾಬಿ
ಪ್ರಸಿದ್ಧ ತೀರ್ಥ ಕ್ಷೇತ್ರ ಸುಬ್ರಹ್ಮಣ್ಯ, ಶಬರಿಮಲೆಗೆ ಜಾಲ್ಸೂರು ಜಂಕ್ಷನ್‌ ಮೂಲಕ ಅತಿ ಹೆಚ್ಚು ಭಕ್ತರು ಸಂಚರಿಸುತ್ತಾರೆ. ಇಂತಹ ಸಂದರ್ಭ ಈ ಘಟಕ ಪ್ರಯಾಣಿಕರಿಗೆ ಅನುಕೂಲ ಎಂದು ಭಾವಿಸಲಾಗಿತ್ತು. ಆದರೆ ಘಟಕ ಸ್ಥಾಪನೆಗೊಂಡು ವರ್ಷ ಸಂದರೂ ಕಾರ್ಯಾರಂಭ ಆಗಿಲ್ಲ. ಇದಕ್ಕೆ ತಾಂತ್ರಿಕ ಸಮಸ್ಯೆ ಕಾರಣವೋ ಅಥವಾ ನೀರು ನೀಡದಂತೆ ಪ್ರಭಾವಿಗಳ ಲಾಬಿ ಇದೆಯೋ ಎಂಬ ಅನುಮಾನ ಇದೆ ಅನ್ನುತ್ತಾರೆ ಸಾರ್ವಜನಿಕರು.

ಎರಡು ಕಡೆ ಬಳಕೆ
ಅರಂತೋಡು ಮತ್ತು ಬೆಳ್ಳಾರೆ ಘಟಕ ಕಾರ್ಯಾರಂಭ ಮಾಡಿದ್ದು, ನೀರಿನ ಪ್ರಯೋಜನ ಜನರಿಗೆ ಸಿಕ್ಕಿದೆ. ಹಾಗಾಗಿ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಘಟಕ ಪೂರ್ಣಗೊಳಿಸಿ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ ತೆರಿಗೆ ಹಣ ಪೋಲಾಗುತ್ತದೆ ಎನ್ನುತ್ತಾರೆ ಬೆಳ್ಳಾರೆಯ ನಾಸಿರ್‌. ದೂರದ ಊರಿನಿಂದ ಸಾವಿರಾರು ಮಂದಿ ಪ್ರಯಾಣಿಸುವ ಕಾರಣ ಜಾಲ್ಸೂರಿನಲ್ಲಿ ಘಟಕದಿಂದ ಅನುಕೂಲ ಇದೆ. ಇಲ್ಲದಿದ್ದರೆ ದುಡ್ಡು ಕೊಟ್ಟು ಬಾಟ್ಲಿ ನೀರು ಖರೀದಿಸಬೇಕು. ಈ ಹೊರೆ ತಪ್ಪಿಸಲು ಜಾಲ್ಸೂರು ಘಟಕ ತತ್‌ಕ್ಷಣ ಆರಂಭಿಸಬೇಕು ಅನ್ನುತ್ತಾರೆ ವಾಹನ ಸವಾರ ವಿನೋದ್‌.

ಎರಡು ದಿನಗಳಲ್ಲಿ ಕ್ರಮ ಕೊಳವೆ ಬಾವಿಯಿಂದ ಅಳವಡಿಸಿರುವ ಪೈಪಿನಿಂದ ನೀರು ಪೂರೈಕೆ ಆಗುತ್ತಿದ್ದರೂ ಅದು ಘಟಕಕ್ಕೆ ಡಂಪ್‌ ಆಗುತಿಲ್ಲ. ಟ್ಯಾಂಕ್‌ ಶುದ್ಧೀಕರಣ ಕೆಲಸವು ಆಗಬೇಕಿದೆ. ಎರಡು ದಿನದಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
– ಶೀನ ಎ. ಕಾರ್ಯದರ್ಶಿ, ಜಾಲ್ಸೂರು ಗ್ರಾ.ಪಂ.

ಅನುಷ್ಠಾನದಲ್ಲಿ ಲೋಪ!
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 2015-16ನೇ ಸಾಲಿನಲ್ಲಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಲ್ಲಿ ದಿನದ 24 ತಾಸು ನೀರೊದಗಿಸಲು ಜನಸಂದಣಿ ಸ್ಥಳಗಳಲ್ಲಿ ಘಟಕ ಸ್ಥಾಪಿಸಲು ಉದ್ದೇಶಿಸಿತ್ತು. ಗ್ರಾ.ಪಂ. ಸಹಭಾಗಿತ್ವದಲ್ಲಿ ಸ್ಥಳ ನಿಗದಿಪಡಿಸಿ ಘಟಕ ಸ್ಥಾಪಿಸಬೇಕಿತ್ತು. ಈ ಯಂತ್ರಕ್ಕೆ 1 ರೂ. ನಾಣ್ಯ ಹಾಕಿದರೆ, ಆರರಿಂದ ಎಂಟು ಲೀಟರ್‌ ತನಕ ಶುದ್ಧ ನೀರು ಒದಗಿಸುವ ಯೋಜನೆ ಇದಾಗಿತ್ತು. ದ.ಕ. ಜಿಲ್ಲೆಯಲ್ಲಿ ಈ ಯೋಜನೆ ಕಾರ್ಯಸಾಧುವಲ್ಲ ಎಂಬ ಅಭಿಪ್ರಾಯ ಆರಂಭದಲ್ಲೇ ವ್ಯಕ್ತವಾಗಿದ್ದರೂ ಕಾಮಗಾರಿ ಅನುಷ್ಠಾನಗೊಂಡಿತ್ತು. ಅದು ಸಮರ್ಪಕ ರೀತಿಯಲ್ಲಿ ಸಾಗದ ಕಾರಣ ಗುತ್ತಿಗೆ ಸಂಸ್ಥೆಗೆ ನೀಡಿದ ಟೆಂಡರ್‌ ಅನ್ನು ಸರಕಾರ ರದ್ದುಗೊಳಿಸಿತ್ತು. ದ.ಕ.ಜಿ.ಪಂ.ನಲ್ಲಿ ಸದನ ಸಮಿತಿ ರಚಿಸಿ ಪರಿಶೀಲನೆ ಕ್ರಮ ಕೈಗೊಳ್ಳಲಾಗಿತ್ತು. ಹೊಸ ಕಾಮಗಾರಿ ಆರಂಭಿಸದಂತೆ ತಡೆ ಹಿಡಿಯಲಾಗಿತ್ತು.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.