ಚರಂಡಿಗಳ ಹೂಳೆತ್ತುವ ಕಾಮಗಾರಿ ಆರಂಭ


Team Udayavani, May 11, 2019, 8:52 AM IST

26

ನಗರ: ಪ್ರತಿ ವರ್ಷ ಮಳೆಗಾಲದ ಸಿದ್ಧತೆಗೆ ಸಂಬಂಧಿಸಿದಂತೆ ನಿಧಾನವಾಗಿ ಎಚ್ಚೆತ್ತುಕೊಳ್ಳುವ ನಗರಸಭೆ ಈ ಬಾರಿ ನೀತಿ ಸಂಹಿತೆ ಹಾಗೂ ಅಧಿಕಾರಿಗಳ ಆಡಳಿತದ ಮಧ್ಯೆಯೂ ಒಂದಷ್ಟು ದಿನಗಳ ಮುಂಚಿತವಾಗಿಯೇ ಕಾಮಗಾರಿ ಆರಂಭಿಸಿದೆ.

ಮಳೆಗಾಲದಲ್ಲಿ ಹೆಚ್ಚಿನ ತೊಂದರೆಗಳಿಗೆ ಕಾರಣವಾಗುವ ರಾಜ ಕಾಳುವೆ, ಚರಂಡಿ, ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿರುವ ನಗರಸಭೆ ಈ ನಿಟ್ಟಿನಲ್ಲಿ 30 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುತ್ತಿಗೆ ನೀಡಿದ್ದು, ಗುತ್ತಿಗೆದಾರರ ಮೂಲಕ ಕಾಮಗಾರಿ ಆರಂಭವಾಗಿದೆ.

ಅನುದಾನ ಹಂಚಿಕೆ
ನಗರಸಭೆ ವ್ಯಾಪ್ತಿಯ ಎಲ್ಲ 31 ವಾರ್ಡ್‌ಗಳಲ್ಲಿ ಸಣ್ಣ ಚರಂಡಿಗಳ ಹೂಳೆತ್ತಿ ಸರಾಗವಾಗಿ ನೀರು ಹರಿಯುವಂತೆ ಮಾಡಲು 20 ಲಕ್ಷ ರೂ. ನಿಗದಿಪಡಿಸಲಾಗಿದೆ. 31 ವಾರ್ಡ್‌ಗಳನ್ನು 4 ಪ್ಯಾಕೇಜ್‌ಗಳಂತೆ ವಿಂಗಡಿಸಿ ತಲಾ 5 ಲಕ್ಷ ರೂ.ನಂತೆ ಹಂಚಿಕೆ ಮಾಡಲಾಗಿದೆ. ಶ್ರೀ ಮಹಾಲಿಂಗೇಶ್ವರ ದೇವಾಲಯದ ಸುತ್ತಲೂ ಹರಿಯುವ ಬಿದಿರಹಳ್ಳ, ಕೆನರಾ ಬ್ಯಾಂಕ್‌ ಹಿಂಬದಿಯಲ್ಲಿ ಹರಿಯುವ ತೋಡು ನಗರದಲ್ಲಿ ಹರಿಯುವ ಪ್ರಮುಖ ರಾಜಕಾಲುವೆಯಾಗಿದ್ದು ಇದರ ಹೂಳೆತ್ತುವ ಕಾರ್ಯಕ್ಕೆ ಪ್ರತ್ಯೇಕ 10 ಲಕ್ಷ ರೂ. ನಿಗದಿಪಡಿಸಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿದೆ.

ಶಾಶ್ವತ ಪರಿಹಾರ
ದರ್ಬೆ ಸಮೀಪದ ಅಂಕಲ್ ಸ್ವೀಟ್ಸ್‌ ಅಂಗಡಿಯ ಬಳಿ ಚರಂಡಿಯಲ್ಲಿ ಪ್ರತಿ ವರ್ಷವೂ ಕಲುಷಿತ ನೀರು ಬ್ಲಾಕ್‌ ಆಗುವ, ಈ ಭಾಗದ ನಿವಾಸಿಗಳು ದೂರು ನೀಡುವ ಪ್ರಕ್ರಿಯೆ ನಡೆಯುತ್ತಿತ್ತು. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮರ್ಪಕ ಮೋರಿ ಅಳವಡಿಸಿ ಕಾಂಕ್ರೀಟ್‌ಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನಗರೋತ್ಥಾನ ಯೋಜನೆಯ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದ್ದು, ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ವಾಹನಗಳನ್ನು ರಸ್ತೆ ಬದಿ ನಿಲ್ಲಿಸದಂತೆ ನಿಗಾ ವಹಿಸಲಾಗಿದೆ.

ಡಿಸಿಗೆ ಪ್ರಸ್ತಾವನೆ
ಮಳೆಗಾಲದ ಆರಂಭದಲ್ಲಿ ಸೊಳ್ಳೆ ಉತ್ಪತ್ತಿಯ ಮೂಲಕ ರೋಗಗಳು ಬಾಧಿಸದಂತೆ ಫಾಗಿಂಗ್‌ ನಡೆಸಲು ಸಿಬಂದಿಯನ್ನು ಸಿದ್ಧಗೊಳಿಸಲಾಗಿದೆ. ನಗರಸಭೆ ಆಡಳಿತದಲ್ಲಿ ಈಗಾಗಲೇ ಒಂದು ಫಾಗಿಂಗ್‌ ಮೆಶಿನ್‌ ಇದ್ದು, ಇನ್ನೊಂದು ಮೆಶಿನ್‌ಗೆ ನಗರಸಭಾ ಆಡಳಿತಾಧಿಕಾರಿ ಯಾಗಿರುವ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜತೆಗೆ ಮರ ಕಟ್ಟಿಂಗ್‌ ಮೆಶಿನ್‌ಗೂ ಪ್ರಸ್ತಾವನೆ ನೀಡಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆ ವಿಸ್ತರಣೆಗೆ ಮನವಿ
ನಗರಸಭಾ ವ್ಯಾಪ್ತಿಯ ಎಪಿಎಂಸಿ ರಸ್ತೆ ಭಾಗದಲ್ಲಿ ತೋಡಿನಲ್ಲಿ ನೀರು ನಿಂತು ಮನೆಗಳಿಗೆ ನುಗ್ಗುವ ವಿಚಾರ ಪ್ರತಿ ವರ್ಷವೂ ಮುಂದುವರೆಯುತ್ತಿದ್ದು, ಈ ನಿಟ್ಟಿನಲ್ಲಿ ಬ್ರಿಡ್ಜ್ ಮತ್ತು ಮೋರಿಯನ್ನು ದೊಡ್ಡದು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಮಂಜೂರಾತಿ ಆಗಿಲ್ಲ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಶೀಘ್ರ ಕಂಟ್ರೋಲ್ ರೂಂ
ಮಳೆಗಾಲದಲ್ಲಿ ಚರಂಡಿಗಳಲ್ಲಿ ನೀರಿನ ಹರಿವಿಗೆ ಸಮಸ್ಯೆಯಾಗದಂತೆ ಎಲ್ಲಾ ವಾರ್ಡ್‌ಗಳ ಸಣ್ಣ ಚರಂಡಿಗಳು, ನಗರದಲ್ಲಿ ಹರಿಯುವ ಕಾಲುವೆಯ ಹೂಳೆತ್ತುವ ಕಾಮಗಾರಿ ಈಗಾಗಲೇ ನಡೆಯುತ್ತಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾದರೂ ಮಾಹಿತಿ ನೀಡುವ ನಿಟ್ಟಿನಲ್ಲಿ ನಗರಸಭೆಯಲ್ಲಿ ಪ್ರತ್ಯೇಕವಾಗಿ ವಾರದೊಳಗೆ ಕಂಟ್ರೋಲ್ ರೂಂ ತೆರೆಯಲಾಗುತ್ತದೆ.
– ಅರುಣ್‌ ಕುಮಾರ್‌ ಪ್ರಭಾರ ಪೌರಾಯುಕ್ತರು, ನಗರಸಭೆ, ಪುತ್ತೂರು

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.