ಬರ ನಿರ್ವಹಣೆಗೆ ರಾಜ್ಯ ಸರ್ಕಾರ ವಿಫ‌ಲ


Team Udayavani, May 11, 2019, 12:39 PM IST

t6

ತುಮಕೂರು: ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಜನ ಜಾನುವಾರು ಗಳು ಪ್ರಾಣಿ, ಪಕ್ಷಿಗಳು ನೀರಿಗಾಗಿ ತೊಂದರೆ ಪಡುತ್ತಿವೆ. ಬರನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಸೊಗಡು ಎಸ್‌. ಶಿವಣ್ಣ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಮಳೆ ಸಮರ್ಪಕವಾಗಿ ಬರದೇ ಇಡೀ ಜಿಲ್ಲೆಯ 10 ತಾಲೂಕುಗಳು ಬರದಿಂದ ಸಂಕಷ್ಟ ಅನುಭವಿಸುತ್ತಿವೆ. ಕೆರೆ, ಕಟ್ಟೆಗಳಲ್ಲಿ ನೀರಿಲ್ಲ. ಜನ- ಜಾನುವಾರುಗಳು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ನುಡಿದರು.

ಜನರ ಸಮಸ್ಯೆ ಅರಿವಿರಲಿ: ಹಳ್ಳಿಗಳಿಗೆ ಅಧಿಕಾರಿ ಗಳು ಹೋಗಿ, ಜನರ ಸಮಸ್ಯೆ ಅರಿಯಬೇಕು. ಇಂದು ಇರುವೆ, ಕೋತಿಗಳು ಇತರೆ ಪ್ರಾಣಿ- ಪಕ್ಷಿಗಳು ನೀರಿಗಾಗಿ ಹುಡುಕಾಟ ನಡೆಸುತ್ತಿವೆ. ಅಂತಹ ಪರಿಸ್ಥಿತಿ ಎದುರಾಗಿದೆ. ಸದಾ ತನುವಿನಿಂದ ಕೂಡಿರುತ್ತಿದ್ದ ಭೂಮಿ ಒಣಗಿ ಬೆಂಡಾಗಿದೆ. ಗೆದ್ದಲುಗಳು ಹುತ್ತಗಳನ್ನು ಕಟ್ಟುತ್ತಿದ್ದವು. ಆದರೆ, ಇಂದು ಗೆದ್ದಲ ಹುಳುಗಳೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಪರಿಸರದಲ್ಲಿ ಅಸಮತೋಲನ ಉಂಟಾಗಿ ಜನ ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ. ಅಧಿಕಾರಿ ಗಳು, ಜನಪ್ರತಿನಿಧಿಗಳು ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ನೀರು ಬರದೇ ಕೆರೆಗಳು ತುಂಬಿಲ್ಲ: ಜಿಲ್ಲೆಗೆ ಹರಿಯ ಬೇಕಾಗಿರುವ ಹೇಮಾವತಿ ನಾಲೆಯಲ್ಲಿ ನೀರು ಸರಾಗವಾಗಿ ಹರಿಯದ ಕಾರಣ, ಕಳೆದ ಮಳೆಗಾಲ ದಲ್ಲಿ ಜಲಾಶಯದಿಂದ ಬಿಟ್ಟ ನೀರು ಸರಿಯಾಗಿ ಬರದೇ ಕುಡಿಯುವ ನೀರಿನ ಕೆರೆಗಳು ಯಾವು ತುಂಬಲಿಲ್ಲ. ಇದಕ್ಕೆ ಕಾರಣ ಜಲಾಶಯದಲ್ಲಿರುವ ಹೂಳು, ಜೊತೆಗೆ ಗಿಡಗೆಂಟೆಗಳು ಬೆಳೆದಿರುವುದು ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ನಾಲೆಯಲ್ಲಿನ ಕಸ ತೆಗೆದು, ಗಿಡಿ ಮರಗಳನ್ನು ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಮಾಡಬೇಕು. ಜೂ.10ರೊಳಗೆ ನಾಲೆಗಳಲ್ಲಿನ ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಆರಂಭಿಸದಿದ್ದರೆ ನಾಲೆಯೊಳಗೆಯೇ ಕುಳಿತು ಹೋರಾಟ ಆರಂಭಿಸು ವುದು ಅನಿವಾರ್ಯ ಎಂದು ಎಚ್ಚರಿಸಿದರು.

ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ: ಜಿಲ್ಲೆಯಲ್ಲಿ ಪಾಲಿನ ಹೇಮಾವತಿ ನದಿ ನೀರು ಹರಿಸುವಲ್ಲಿ ರಾಜ್ಯ ಸ‌ರ್ಕಾರ ವಿಫ‌ಲವಾಗಿದೆ. ಜನರು, ಜಾನುವಾರುಗಳು ನೀರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಆರಂಭವಾಗಿ ಜಲಾಶಯಕ್ಕೆ ನೀರು ಬರುವಾಗ ನಮ್ಮ ಭಾಗಕ್ಕೆ ನೀರು ಹರಿಸಿದರೆ ಅನುಕೂಲವಾಗುತ್ತದೆ. 10,000 ಕ್ಯೂಸೆಕ್ಸ್‌ ನೀರು ಜಲಾಶಯಕ್ಕೆ ಬಂದರೆ, ಅದರಲ್ಲಿ 2000 ಕ್ಯೂಸೆಕ್ಸ್‌ ನೀರನ್ನು ನಮ್ಮಗೆ ಹರಿಸಿದರೆ ಏನು ತೊಂದರೆಯಾಗುವುದಿಲ್ಲ. ಆದರೆ, ಸರ್ಕಾರ ಜಲಾಶಯ ತುಂಬುವವರಿಗೂ ಕಾದು ಜಲಾಶಯದ ನೀರು ಸಮುದ್ರಕ್ಕೆ ಅರಿಯುವಂತೆ ಮಾಡುತ್ತಾರೆ. ಇವರಿಗೆ ಜನರ ಬಗ್ಗೆ ಕಾಳಜಿಯಿಲ್ಲ ಎಂದರು.

ತಮ್ಮ ಅವಧಿಯಲ್ಲಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ಹೇಮಾವತಿ ನದಿ ನೀರು ಹರಿಸಿ, ಕೆರೆಗಳನ್ನು ತುಂಬಿಸುವ ಮೂಲಕ ನೀರಿನ ಸಮಸ್ಯೆ ಇಲ್ಲದಂತೆ ಮಾಡಲಾಗಿತ್ತು. ಆದರೆ, ಈಗ ಜಿಲ್ಲೆಯ ಪಾಲಿನ ನೀರು ಹರಿಯುತ್ತಿಲ್ಲ. ಸರ್ಕಾರ ಹಾಸನಕ್ಕೆ ಮಾತ್ರ ಹೇಮಾವತಿ ನೀರು ಎನ್ನುವಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ಬರ ನಿರ್ವಹಣೆಗೆ ನಿರ್ಲಕ್ಷ್ಯ: ಇಂದು ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ರೈತರು ನೀರಿಲ್ಲದೆ ಬೆಳೆ ಕಳೆದುಕೊಳ್ಳುವಂತಾಗಿದೆ. ಬೋರ್‌ವೆಲ್ಗಳು ಬತ್ತಿ ಹೋಗಿವೆ. ಜಾನುವಾರುಗಳು ಮೇವು ನೀರಿಲ್ಲದೆ ಪರಿತಪಿಸುತ್ತಿವೆ. ರಾಜ್ಯ ಸರ್ಕಾರ ಬರ ನಿರ್ವಹಣೆ ಮಾಡದೆ ನಿರ್ಲಕ್ಷ್ಯವಹಿಸಿದೆ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ, ವಿರೋಧ ಪಕ್ಷ ನಿದ್ರೆಗೆ ಜಾರಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಬಿ.ನಂದೀಶ್‌, ಜಯಸಿಂಹ ರಾವ್‌, ಕೆ.ಪಿ. ಮಹೇಶ್‌, ಬನಶಂಕರಿ ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.