ಪಂಪ್‌ಸೆಟ್ ಸ್ಥಗಿತಕ್ಕೆ ಆದೇಶ

•ನದಿ ನೀರಿನ ಹರಿವು ಕ್ಷೀಣ•ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ

Team Udayavani, May 11, 2019, 3:35 PM IST

Udayavani Kannada Newspaper

ಕಾರವಾರ: ಗಂಗಾವಳಿ ನದಿ ಪಾತ್ರದಲ್ಲಿ ನೀರಿನ ಹರಿವು ಪ್ರಮಾಣ ಕಡಿಮೆಯಾಗಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಗಂಗಾವಳಿ ನದಿ ದಂಡೆಯ ಕೆಲ ಗ್ರಾಮಗಳ ತೋಟಪಟ್ಟಿಗಳಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಕಾರವಾರ ಮತ್ತು ಅಂಕೋಲ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಆದೇಶಿಸಿದ್ದಾರೆ.

ಕಾರವಾರ ಮತ್ತು ಅಂಕೋಲಾ ಪಟ್ಟಣಗಳ ಜನ ವಸತಿಗೆ ಕುಡಿಯುವ ನೀರಿನ ಸರಬರಾಜಿಗೆ ಪ್ರಮುಖ ನೀರಿನ ಮೂಲವಾಗಿರುವ ಗಂಗಾವಳಿ ನದಿ ಪಾತ್ರದಲ್ಲಿ ಮಳೆಯಾಗಿಲ್ಲದಿರುವುದರಿಂದ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಪರಿಣಾಮ ಕುಡಿಯುವ ನೀರಿನ ಸರಬರಾಜು ಬಹುತೇಕ ಸ್ಥಗಿತವಾಗಿದೆ. ನದಿಯಲ್ಲಿ ದಿನವೂ 5 ಲಕ್ಷ ಲೀಟರ್‌ ನೀರು ಪೂರೈಸಲು ಇರುವ ಜಲಮೂಲ ತೋಟಪಟ್ಟಿಗಳಿಗೆ ಬಳಸುತ್ತಿರುವ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕಿದ್ದು, ಅದನ್ನು ತಕ್ಷಣ ಕಡಿತಗೊಳಿಸಲು ಅಧಿಕಾರಿ ವರ್ಗಕ್ಕೆ ಜಿಲ್ಲಾಡಳಿತ ಸೂಚಿಸಿದೆ. ಈ ವಿಷಯದಲ್ಲಿ ಖಡಕ್‌ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಗಂಗಾವಳಿ ನದಿ ನೀರನ್ನು ಕೆಲವರು ಮಾತ್ರ ಬಳಸಿಕೊಳ್ಳುತ್ತಿರುವ ರಹಸ್ಯ ಮಾಹಿತಿ ಸಹ ಜಿಲ್ಲಾಡಳಿತಕ್ಕೆ ದೊರೆತಿದೆ. ಅಲ್ಲದೇ ಗಂಗಾವಳಿ ಹಿನ್ನೀರಿನ ಭಾಗದಲ್ಲಿ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಗ್ಳನ್ನು ಸ್ಥಗಿತಗೊಳಿಸಬೇಕಾಗಿದೆ. ಹೆಸ್ಕಾಂ ಅಧಿಕಾರಿಗಳು, ಕಾರವಾರ ನಗರಸಭೆ ಹಾಗೂ ಅಂಕೋಲ ಪುರಸಭೆ ಅಧಿಕಾರಿಗಳು ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಮೇ ತಿಂಗಳಲ್ಲಿ ಘಟ್ಟದ ಮೇಲ್ಭಾಗದಲ್ಲಿ ಮಳೆಯಾಗಿದ್ದರೆ ಗಂಗಾವಳಿ ನದಿಗೆ ನೀರಿನ ಹರಿವು ಸಮರ್ಪಕವಾಗುತ್ತಿತ್ತು. ಆದರೆ ಮಳೆಯಾಗದ ಕಾರಣ ಹಾಗೂ ತೀವ್ರ ಬೇಸಿಗೆ ಕಾರಣ ನೀರಿನ ಹರಿವು ಕಡಿಮೆಯಾಗಿದೆ. ಅಲ್ಲದೆ ಅಂತರ್ಜಲ ಕುಸಿದಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಪ್ರಸ್ತುತ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸುವುದು ಅಗತ್ಯವಿದೆ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ. ಕಾರವಾರ ಉಪವಿಭಾಗದ ಸಹಾಯಕ ಆಯುಕ್ತರು ನದಿ ನೀರನ್ನು ತೋಟಗಳಿಗೆ ಬಳಸುವ ಕುರಿತು ಮೇಲ್ವಿಚಾರಣೆ ವಹಿಸಿ, ಪಂಪ್‌ ಸೆಟ್ ಕನೆಕ್ಷನ್‌ಗಳನ್ನು ನದಿ ನೀರಿನ ಹರಿವಿನಿಂದ ಸ್ಥಗಿತಗೊಳಿಸಿದ ಕ್ರಮದ ಬಗ್ಗೆ ವರದಿ ನೀಡುವಂತೆ ಅವರು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.