ರೆಸಾರ್ಟ್ನಲ್ಲೇ ತಂಗಿದ ಸಿಎಂ: ಸಾರ್ವಜನಿಕರ ಭೇಟಿಗೆ ನಿಷೇಧ
Team Udayavani, May 12, 2019, 3:00 AM IST
ಮಡಿಕೇರಿ: ನಗರದ ಹೊರಭಾಗದಲ್ಲಿರುವ ಇಬ್ಬನಿ ರೆಸಾರ್ಟ್ನಲ್ಲಿ ತಂಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕುಟುಂಬ ವರ್ಗ ಶನಿವಾರವೂ ಯಾರನ್ನೂ ಭೇಟಿ ಮಾಡಲಿಲ್ಲ. ಮುಂಜಾನೆ ಎದ್ದು ರೆಸಾರ್ಟ್ನ ಪರಿಸರದಲ್ಲಿ ವಾಕಿಂಗ್ ಮಾಡಿದ್ದು ಬಿಟ್ಟರೆ ಇನ್ನುಳಿದಂತೆ ಸಿಎಂ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ರೆಸಾರ್ಟ್ನ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮಾಧ್ಯಮದವರಿಗೂ ಅವರ ದರ್ಶನವಾಗಿಲ್ಲ. ಹೀಗಾಗಿ, ರೆಸಾರ್ಟ್ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದಿದ್ದ ಕೆಲವು ಮಂದಿ ನಿರಾಸೆಯಿಂದ ತೆರಳುತ್ತಿದ್ದ ದೃಶ್ಯ ಕಂಡು ಬಂತು.
ದುಬಾರಿ ರೆಸಾರ್ಟ್ನಲ್ಲಿ ಮುಖ್ಯಮಂತ್ರಿಯವರು ವಾಸ್ತವ್ಯ ಹೂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. “ಚುನಾವಣೆಗೂ ಮೊದಲು ಗ್ರಾಮ ವಾಸ್ತವ್ಯ, ಚುನಾವಣೆ ಮುಗಿದ ಮೇಲೆ ರೆಸಾರ್ಟ್ ವಾಸ್ತವ್ಯ’ ಎಂದು ಕೆಲವರು ಕುಟುಕಿದ್ದಾರೆ.
ಸಿಎಂ ಜತೆಗೆ ಆಗಮಿಸಿದ್ದ ಸಚಿವ ಸಾ.ರಾ.ಮಹೇಶ್ ಮಾತ್ರ ಸಿಎಂ ಸೂಚನೆಯಂತೆ ಚುನಾವಣಾ ಆಯೋಗದ ಅನುಮತಿ ಪಡೆದು ಕೊಡಗು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಇದಕ್ಕೂ ಮೊದಲು ರೆಸಾರ್ಟ್ ಬಳಿ ಮಾತನಾಡಿದ ಅವರು, ಸಿಎಂ ರೆಸಾರ್ಟ್ ವಾಸ್ತವ್ಯವನ್ನು ಸಮರ್ಥಿಸಿಕೊಂಡರು.
ಎಲ್ಲರಿಗೂ ಖಾಸಗಿ ಬದುಕು ಮತ್ತು ವಿಶ್ರಾಂತಿಯ ಅಗತ್ಯವಿರುತ್ತದೆ. ಅದನ್ನು ಸಿಎಂ ಮಾಡುತ್ತಿದ್ದಾರೆ ಅಷ್ಟೆ. ಅಲ್ಲದೆ, ಕೊಡಗಿನಲ್ಲಿ ಹಿಂದೆ ಸಿದ್ದರಾಮಯ್ಯ ಉಳಿದುಕೊಂಡಿದ್ದ ರೆಸಾರ್ಟ್ಗೆ ಈಗ ಕುಮಾರಸ್ವಾಮಿ ಕೂಡ ಬಂದಿರುವುದು ಕೊಡಗು ಸುರಕ್ಷಿತವಾಗಿದೆ ಎಂಬ ಸಂದೇಶ ಸಾರಲು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.