ಬನ್ನೇರುಘಟ್ಟಕ್ಕೆ ಹರಿಯಲಿದೆ ಕಾವೇರಿ


Team Udayavani, May 12, 2019, 3:09 AM IST

uru-bittu

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಸಮರ್ಪಕ ನೀರು ಪೂರೈಕೆಗೆ ಹೆಣಗಾಡುತ್ತಿರುವ ಜಲಮಂಡಳಿ, ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ನೀರು ಹರಿಸಲು ತಾತ್ವಿಕ ಒಪ್ಪಿಗೆ ನೀಡಿದೆ. ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ ಹಾಗೂ ಉದ್ಯಾನದ ಸುತ್ತಮುತ್ತ ಅಂತರ್ಜಲ ಕುಸಿತದಿಂದಾಗಿ ಈಗಾಗಲೇ ನೀರಿನ ಹಾಹಾಕಾರ ಉಂಟಾಗಿದೆ.

ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯಾನದ ಅಧಿಕಾರಿಗಳು, ಉದ್ಯಾನಕ್ಕೆ ನಿತ್ಯ ಎರಡು ಲಕ್ಷ ಲೀ. ನೀರಿನ ಬೇಡಿಕೆ ಇಟ್ಟು ಕಳೆದ ತಿಂಗಳು ಜಲಮಂಡಳಿಗೆ ಪತ್ರ ಬರೆದಿದ್ದರು. ಉದ್ಯಾನಕ್ಕೆ ನೀರು ಹರಿಸುವ ಕುರಿತು ಜಲಮಂಡಳಿ ಅಧಿಕಾರಿಗಳು ಆಂತರಿಕ ಸಮೀಕ್ಷೆ, ಸಭೆ ನಡೆಸಿದ್ದು, ನೀರು ಹರಿಸಲು ಸಾಧ್ಯವಿದೆ ಎಂಬ ನಿರ್ಣಯಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ, 2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿದ 110 ಹಳ್ಳಿಗಳಿಗೆ ಈವರೆಗೂ ಸಂಪೂರ್ಣವಾಗಿ ನೀರು ಹರಿಸಲು ಸಾಧ್ಯವಾಗಿಲ್ಲ. ಬಹುತೇಕ ಹಳ್ಳಿಗಳಲ್ಲಿ ನೀರಿನ ಕೊಳವೆ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಈ ನಡುವೆ ಕಾವೇರಿ 5ನೇ ಹಂತದ ಕಾಮಗಾರಿ ಮುಗಿಯುವವರೆಗೂ 110 ಹಳ್ಳಿಗೆಗಳಿಗೆ ಸಂಪೂರ್ಣವಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಜಲಮಂಡಳಿ ಅಧಿಕಾರಿಗಳೇ ಹೇಳುತ್ತಾರೆ.

ಸದ್ಯ ಬೇಸಿಗೆ ಹಿನ್ನೆಲೆಯಲ್ಲಿ ನಗರದ ಅಪಾರ್ಟ್‌ಮೆಂಟ್‌ಗಳು, 110 ಹಳ್ಳಿಗಳು ಹಾಗೂ ನಗರದ ಹೊರಭಾಗದ ಪ್ರದೇಶಗಳಲ್ಲಿ ಕೊಳವೆ ಬಾವಿ ಕೈಕೊಟ್ಟು ಜಲಮಂಡಳಿಯೇ ಟ್ಯಾಂಕರ್‌ ನೀರು ಪೂರೈಕೆ ಮಾಡುತ್ತಿದೆ. ಹೀಗಿರುವಾಗ ಬಿಬಿಎಂಪಿ ವ್ಯಾಪ್ತಿಗೆ ಬಾರದ, ನಗರದಿಂದ ದೂರದಲ್ಲಿರುವ ಬನ್ನೇರುಘಟ್ಟ ಉದ್ಯಾನಕ್ಕೆ ನೀರು ಹರಿಸಲು ಒಪ್ಪಿಗೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.

ತಾಂತ್ರಿಕವಾಗಿ ಪೂರೈಕೆ ಸಾಧ್ಯ: ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರಕ್ಕೆ 1,350 ದಶಲಕ್ಷ ಲೀ. ನೀರಿನ ಅವಶ್ಯಕತೆ ಇರುತ್ತದೆ. ಸದ್ಯ ಕಾವೇರಿಯಿಂದ 1,450 ದಶಲಕ್ಷ ಲೀ.ವರೆಗೂ ನೀರು ಪಂಪ್‌ ಮಾಡಬಹುದು. ಇದರಲ್ಲಿ ಉದ್ಯಾನಕ್ಕೆ 2 ಲಕ್ಷ ಲೀ. ನೀರು ನೀಡಲು ಸಮಸ್ಯೆಯಾಗದು. ಅದರಲ್ಲೂ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ನೀರು ಹರಿಸುವುದು ಹೆಮ್ಮೆಯ ವಿಚಾರ.

ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕೂ ಮೊದಲು ಜಲಮಂಡಳಿ ಆಂತರಿಕ ಸಭೆ ನಡೆಸಿದೆ. ಈ ಸಭೆಯಲ್ಲಿ ನೀರಿನ ಲಭ್ಯತೆ, ಯೋಜನೆಯ ಸಮಸ್ಯೆ, ಪ್ರಯೋಜನಗಳು ಸೇರಿದಂತೆ ತಾಂತ್ರಿಕ ಅಂಶಗಳ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಜಲಮಂಡಳಿಯ ನಿರ್ವಹಣೆ ವಿಭಾಗದ ಮುಖ್ಯ ಎಂಜಿನಿಯರ್‌ ಬಿ.ಸಿ.ಗಂಗಾಧರ್‌ “ಉದಯವಾಣಿ’ಗೆ ಮಾಹಿತಿ ನೀಡಿದರು.

ಸದ್ಯ ಆನೇಕಲ್‌ ಹಾಗೂ ಸೂರ್ಯನಗರಕ್ಕೆ ನೀರು ಪೂರೈಸಲು ಜಲಮಂಡಳಿು ಕೊಳವೆ ಅಳವಡಿಸಿದೆ. ಇಲ್ಲಿಂದ ಕೇವಲ ಒಂದೂವರೆ ಕಿ.ಮೀ ದೂರದಲ್ಲಿ ಬನ್ನೇರುಘಟ್ಟ ಉದ್ಯಾನವಿದ್ದು, ಆ ಕೊಳವೆಗಳಿಂದ ಸಂಪರ್ಕ ಪಡೆದು ಹೊಸ ಕೊಳವೆಗಳನ್ನು ಜೋಡಿಸಿದರೆ ಉದ್ಯಾನಕ್ಕೆ ಸುಲಭವಾಗಿ ನೀರು ಹರಿಸಬಹುದು. ಆದರೆ, ಉದ್ಯಾನ ಬಿಬಿಎಂಪಿ ವ್ಯಾಪ್ತಿಗೆ ಬಾರದಿರುವ ಕಾರಣ, ನೀರು ಹರಿಸಲು ಸರ್ಕಾರದ ಒಪ್ಪಿಗೆ ಬೇಕಿದ್ದು, ಮುಂದಿನ ವಾರ ಪ್ರಸ್ತಾವನೆ ಸಲ್ಲಿಸಲಾಗುವುದು. ಬೇಡಿಕೆ ಹೆಚ್ಚಿರುವುದರಿಂದ ಸರ್ಕಾರ ಶೀಘ್ರ ಒಪ್ಪಿಗೆ ನೀಡಿದರೆ ಎರಡು ತಿಂಗಳಲ್ಲಿ ಕಾಮಗಾರಿ ಪೂರೈಸಿ ಕಾವೇರಿ ನೀರು ನೀಡಬಹುದು ಎಂದು ತಿಳಿಸಿದರು.

ಬನ್ನೇರುಘಟ್ಟ ಉದ್ಯಾನನಕ್ಕೆ ಬರುವ ಪ್ರವಾಸಿಗರಿಗೆ ಕುಡಿಯುವ ನೀರಿಗಾಗಿ ಮಾತ್ರ ನಿತ್ಯ 1.5 ಲಕ್ಷ ಲೀ. ನೀರು ಪೂರೈಸಲು ಸಮ್ಮತಿಸಲಾಗಿದೆ. ಜತೆಗೆ, ಯೋಜನೆಯ ಕಾಮಗಾರಿ ವೆಚ್ಚವನ್ನು ಉದ್ಯಾನ ನಿರ್ವಹಣಾ ವಿಭಾಗವೇ ಭರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
-ತುಷಾರ ಗಿರಿನಾಥ್‌, ಜಲಮಂಡಳಿ ಅಧ್ಯಕ್ಷ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.