ಕೋಚಿಮುಲ್: ಮತದಾರರಿಗೆ ಬಂಪರ್‌ ಕೊಡುಗೆ

ಸೀರೆ, ಮೊಬೈಲ್, ವಾಚ್, ಚಿನ್ನಾಭರಣ ಕೊಟ್ಟು ಓಲೈಕೆ | ಕೆಲ ಅಭ್ಯರ್ಥಿಗಳಿಂದ ಪ್ರವಾಸ ಭಾಗ್ಯ

Team Udayavani, May 12, 2019, 10:44 AM IST

KOLAR-TDY-2..

ಕೋಚಿಮುಲ್ ಚುನಾವಣೆಯಲ್ಲಿ ಮತ ದಾರರಿಗೆ ನೀಡಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಭಾವಚಿತ್ರವಿರುವ ಸೀರೆಗಳು ಕಾರೊಂದರಲ್ಲಿ ಕಂಡು ಬಂತು.

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಯ ನಿರ್ದೇಶಕ ಚುನಾವಣೆ ಮೇ 13 ನಡೆಯುತ್ತಿದ್ದು, ಅಭ್ಯರ್ಥಿಗಳು ಮತದಾರರನ್ನು ಓಲೈಕೆ ಮಾಡಲು ವಿವಿಧ ರೀತಿಯ ಕಸರತ್ತು ನಡೆಸುತ್ತಿದ್ದಾರೆ.

ಪ್ರತಿ ದಿನ ಕೋಟಿಗಟ್ಟಲೆ ವಹಿವಾಟು ನಡೆಯುವ ಒಕ್ಕೂಟದಲ್ಲಿ ನಿರ್ದೇಶಕರಾಗಲು ಜಿಪಂ, ತಾಪಂ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಿಂದ ವಂಚನೆಗೆ ಒಳಗಾದವರು ಕೋಚಿಮುಲ್ಗೆ ಪ್ರವೇಶ ಮಾಡಲು ಮುಂದಾಗುತ್ತಾರೆ. ಒಕ್ಕೂಟದ 13 ಸ್ಥಾನಗಳಲ್ಲಿ 4 ಸ್ಥಾನ ಅವಿರೋಧ ಆಯ್ಕೆಯಾಗಿದ್ದು, ಉಳಿದ 9 ಮಂದಿ ನಿರ್ದೇಶಕರ ಚುನಾವಣೆಗೆ ಮೇ 13ಕ್ಕೆ ಚುನಾವಣೆ ನಿಗಯಾಗಿದೆ. ಸೀರೆ, ಮೊಬೈಲ್, ವಾಚ್, ಚಿನ್ನಾಭರಣ ಉಡುಗೋರೆ ಹಾಗೂ ಪ್ರವಾಸ ಕಳುಹಿಸುವ ಮೂಲಕ ಮತದಾರರನ್ನು ಓಲೈಕೆ ಮಾಡುವ ಕಸರತ್ತು ನಡೆಯುತ್ತಿದೆ.

ಈ ಚುನಾವಣೆಯಲ್ಲಿ ಮತ ಹಾಕುವ ಹಕ್ಕು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಿಗೆ ಮಾತ್ರ ಇರುತ್ತದೆ. ಒಕ್ಕೂಟವು ಎರಡೂ ಜಿಲ್ಲೆಯ 11 ತಾಲೂಕುಗಳಲ್ಲಿ 2063 ಸಾವಿರ ಹಾಲು ಉತ್ಪಾಧಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, 2,78,886 ಲಕ್ಷ ರೈತರು ಹೈನೋದ್ಯಮದಲ್ಲಿ ತೊಡಗಿಸಿಕೊಂಡು 10 ಲಕ್ಷ ಹಾಲು ಉತ್ಪಾದಿಸುತ್ತಿದ್ದಾರೆ. ಒಕ್ಕೂಟದ 13 ನಿರ್ದೇಶಕರ ಸ್ಥಾನದ ಪೈಕಿ 4 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, 9 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 4 ಹಾಗೂ ಕೋಲಾರ ಜಿಲ್ಲೆಯಲ್ಲಿ 5 ಮಂದಿ ಕಣದಲ್ಲಿದ್ದಾರೆ.

ಅವಿರೋಧ ಆಯ್ಕೆ: ಬಂಗಾರಪೇಟೆಯ ಜಯಸಿಂಹ, ಗೌರಿಬಿದನೂರಿನ ಕಾಂತರಾಜ್‌, ಗುಡಿಬಂಡೆ ಅಶ್ವತ್ಥ್ರೆಡ್ಡಿ ಹಾಗೂ ಚಿಕ್ಕಬಳ್ಳಾಪುರದ ಮಹಿಳಾ ಕ್ಷೇತ್ರದ ಅಭ್ಯರ್ಥಿ ಸುನಂದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 21 ಮಂದಿ ಕಣದಲ್ಲಿದ್ದು, ಆ ಪೈಕಿ ಶ್ರೀನಿವಾಸಪುರದಲ್ಲಿ ಹಾಲಿ ನಿರ್ದೇಶಕ ಬೈರಾರೆಡ್ಡಿ, ಕೋಚಿಮುಲ್ ನಿವೃತ್ತ ಅಧಿಕಾರಿ ಹನುಮೇಶ್‌, ಮಾಲೂರು ಕೋಚಿಮುಲ್ ಹಾಲಿ ಅಧ್ಯಕ್ಷ ಹಾಗೂ ಶಾಸಕ ಕೆ.ವ್ಯ.ನಂಜೇಗೌಡ, ಮಾಜಿ ಅಧ್ಯಕ್ಷ ಪ್ರಸನ್ನ, ಕೋಲಾರದಿಂದ ಹಾಲಿ ನಿರ್ದೇಶಕ ಆರ್‌.ರಾಮಕೃಷ್ಣೇಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಡಿ.ವಿ.ಹರೀಶ್‌, ಮುಳಬಾಗಿಲಿನಿಂದ ಹಾಲಿ ನಿರ್ದೇಶಕ ರಾಜೇಂದ್ರಗೌಡ, ಮಾಜಿ ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್‌, ಶಿಡ್ಲಘಟ್ಟದಿಂದ ಹಾಲಿ ನಿರ್ದೇಶಕ ಮುನಿಯಪ್ಪ, ಶ್ರೀನಿವಾಸ್‌ ಕಣದಲ್ಲಿ ಇದ್ದಾರೆ.ಚಿಕ್ಕಬಳ್ಳಾಪುರದಿಂದ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್‌, ವೆಂಕಟೇಶ್‌, ಚಿಂತಾಮಣಿಯಿಂದ ಹಾಲಿ ನಿರ್ದೇಶಕ ಅಶ್ವತ್ಥ್ನಾರಾಯಣ, ಮಾಜಿ ಅಧ್ಯಕ್ಷ ತಳಗವಾರ ರಾಜಗೋಪಾಲ್, ಬಾಗೇಪಲ್ಲಿಯಿಂದ ಚೌಡರೆಡ್ಡಿ, ಮಂಜುನಾಥರೆಡ್ಡಿ, ಮಹಿಳಾ ಕ್ಷೇತ್ರದಿಂದ ಕೋಲಾರದಲ್ಲಿ ಕಾಂತಮ್ಮ, ರತ್ನಮ್ಮ, ಪ್ರಭಾವತಿ, ಶಾಂತಮ್ಮ ಸ್ಪರ್ಧಿಸಿದ್ದಾರೆ. ಮತ ಓಲೈಕೆಗೆ ಬಂಪರ್‌ ಅಫರ್‌ ನೀಡುತ್ತಿದ್ದಾರೆ.

ಕೋಟಗಟ್ಟಲೆ ಹಣ ಖರ್ಚು: ಬಹುತೇಕ ಹಾಲಿ ಸದಸ್ಯರು ಪುನರಾಯ್ಕೆಯಾಗಲು ನಾನಾ ವಿಧದ ಕಸರತ್ತು ನಡೆಸುತ್ತಿದ್ದಾರೆ. ಇವರಿಗೆ ಪೈಪೋಟಿಯಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮೊದಲ ಬಾರಿಗೆ ಕೋಚಿಮುಲ್ ನಿರ್ದೇಶಕರಾಗಲು ಇನ್ನಿಲ್ಲದಂತೆ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಪ್ರತಿ ಅಭ್ಯರ್ಥಿಯು ಕನಿಷ್ಠ ಎರಡರಿಂದ ಮೂರು ಕೋಟಿ ರೂ. ಮತದಾರ ಪ್ರತಿನಿಧಿಗಳಿಗಾಗಿ ವೆಚ್ಚ ಮಾಡಬೇಕಾದ ಪರಿಸ್ಥಿತಿ ಚುನಾವಣೆಯಲ್ಲಿ ನಿರ್ಮಾಣವಾಗಿದೆ.

ಮುಳಬಾಗಿಲಿನ ಪ್ರಭಾವತಿ ಶುಕ್ರವಾರ ಕೋಲಾರದಲ್ಲಿ ವಿಧಾನಸಭೆ ಅಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರನ್ನು ಭೇಟಿ ಮಾಡಲು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎಲ್.ಅನಿಲ್ ಹಾಗೂ ನೀಲಕಂಠೇಗೌಡರ ಜತೆ ಕಾರಿನಲ್ಲಿ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಭಾವ ಚಿತ್ರವಿರುವ ರೇಷ್ಮೆ ಸೀರೆಗಳನ್ನು ತುಂಬಿಸಿಕೊಂಡಿದ್ದು ಕಂಡು ಬಂದಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.