ಕೌಶಲ್ಯಗಳಿಸಿ ತಾಂತ್ರಿಕತೆಯ ಸವಾಲು ಎದುರಿಸಿ


Team Udayavani, May 12, 2019, 11:36 AM IST

kolar-tdy-8..

ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವಕ್ಕೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಚಾಲನೆ ನೀಡಿದರು. ಚಿತ್ರನಟ ಕಿಶೋರ್‌ ಇದ್ದರು.

ಕೋಲಾರ: ಗುಣಮಟ್ಟದ ಶಿಕ್ಷಣದ ಜತೆ ಮೌಲ್ಯಗಳನ್ನು ರೂಢಿಸಿಕೊಂಡು ಕೌಶಲ್ಯ ಅಭಿವೃದ್ಧಿಯ ಮೂಲಕ ಆಧುನಿಕತೆ ಮತ್ತು ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಂದು ವಿದ್ಯಾರ್ಥಿನಿಯರಿಗೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಸಲಹೆ ನೀಡಿದರು.

ನಗರದ ಮಹಿಳಾ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಸಾಧಕರನ್ನು ಪುರಸ್ಕರಿಸಿ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕತೆ, ತಾಂತ್ರಿಕತೆ ಅಳವಡಿಕೆಯಾಗುತ್ತಿದ್ದು, ಬದಲಾದ ಕಾಲಕ್ಕೆ ತಕ್ಕಂತೆ ಮನೆಯಲ್ಲೇ ಕುಳಿತು ಪರೀಕ್ಷೆ ಬರೆಯುವ ಕಾಲವೂ ಬರಬಹುದು. ಅದಕ್ಕೂ ನೀವು ಸಿದ್ಧರಾಗಬೇಕು ಎಂದರು.

ವಿಶ್ವ ಭಾರತದ ಕಡೆ ನೋಡುತ್ತಿದೆ. 2025ರ ವೇಳೆಗೆ 18ರಿಂದ 28 ವರ್ಷ ವಯೋಮಿತಿಯುಳ್ಳ ಯುವ ಜನತೆ ಶೇ.56 ಆಗಲಿದೆ. ವಿಶ್ವದ ಯಾವ ರಾಷ್ಟ್ರದಲ್ಲೂ ಯುವ ಸಂಪತ್ತು ಈ ಪ್ರಮಾಣದಲ್ಲಿ ಇಲ್ಲ. ದೇಶದ ಯುವಸಂಪತ್ತಿಗೆ ಬಲನೀಡಲು ಗುಣಮಟ್ಟದ ಶಿಕ್ಷಣ, ಕೌಶಲ ಒದಗಿಸುವುದು ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳ ಜವಾಬ್ದಾರಿ ಎಂದು ಹೇಳಿದರು.

ಒಳ್ಳೆಯ ತಾಯಿಯಾಗಿ: ಚಲನ ಚಿತ್ರ ನಟ ಜಿ.ಕಿಶೋರ್‌ ಕುಮಾರ್‌ ಮಾತನಾಡಿ, ಹೆಣ್ಣು ಮಕ್ಕಳು ಈ ಸಮಾಜಕ್ಕೆ ಮಾದರಿಯಾಗಿದ್ದಾರೆ. ಯಾವುದೇ ರಂಗದಲ್ಲೂ ತಾವೇ ಮುಂದು ಎಂದು ಸಾಬೀತು ಮಾಡುತ್ತಿದ್ದಾರೆ. ನಿಮ್ಮಲ್ಲಿನ ಛಲ, ಕೌಶಲ್ಯ, ಕಲಿಕಾಸಕ್ತಿಗೆ ಸಾಟಿಯಿಲ್ಲ ಎಂದ ಅವರು, ನೀವು ಜೀವನದಲ್ಲಿ ಒಳ್ಳೆಯ ತಾಯಿಯಾಗಿ ಸಮಾಜಕ್ಕೆ ಕೊಡುಗೆ ನೀಡಿ ಎಂದರು.

ಕೊಡುಗೆ ನೀಡಿ: ರಾಷ್ಟ್ರೀಯ ಬಾಸ್ಕೆಟ್ಬಾಲ್ ಪಟು ಸಿ.ಮಹಾನಂದ್‌, ಒಂದು ಮಗುವನ್ನು ಅಮ್ಮ ಮಾತ್ರ ದಾರಿಗೆ ತರಬಲ್ಲಳು, ಆ ಮಗುವಿನ ಭವಿಷ್ಯ ರೂಪಿಸಬಲ್ಲಳು, ಆಕೆ ಮಾತ್ರವೇ ದೈವವಾಗಿ ಸಮಾಜ, ದೇಶಕ್ಕೆ ಕೊಡುಗೆ ನೀಡಲು ಸಾಧ್ಯ ಎಂದರು.

ಪ್ರೊ.ರಾಜೇಂದ್ರ ಮಾತನಾಡಿ, ಸರ್ಕಾರಿ ಕಾಲೇಜು ಎಂಬ ಕೀಳರಿಮೆ ಇಲ್ಲ. ಹೋಂಡಾ ಕಂಪನಿ ನೀಡಿರುವ ಆಡಿಟೋರಿಯಂ, ಮಹೀಂದ್ರ ಕಂಪನಿ ನೀಡಿರುವ ಶೌಚಾಲಯ, ಮತ್ತಿತರ ಸೌಲಭ್ಯಗಳಿಗೆ ಧನ್ಯವಾದ ಸಲ್ಲಿಸಿದರು.

ಉತ್ತಮ ಸಹಕಾರ: ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪಂಡಿತ್‌ ಮುನಿವೆಂಕಟಪ್ಪ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕರು, ಸಚಿವರಿಗೂ ಮನವಿ ಮಾಡಿದ್ದೇವೆ ಎಂದರು.

ಪ್ರೊ.ಅಶ್ವತ್ಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜು ನಾಲ್ಕೈದು ವರ್ಷಗಳಿಂದ ಸತತ ಪದವಿಯಲ್ಲಿ ರ್‍ಯಾಂಕ್‌ ಪಡೆಯುತ್ತಿದೆ. ಹಲವು ವಿದ್ಯಾರ್ಥಿಗಳು ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ ಎಂದರು. ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಿಸಲಾಯಿತು. ಹೇಮಮಾಲಿನಿ ನಿರೂಪಿಸಿ, ಶ್ರೀವಿದ್ಯಾ, ಜೀವಿತಾ ಪ್ರಾರ್ಥಿಸಿ, ಬೃಂದಾ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಅಶೋಕ್‌, ವಿಜಯಕುಮಾರ್‌, ಸೀನಾನಾಯಕ್‌, ರವೀಂದ್ರ, ಶಿವಪ್ಪ, ಅಮರನಾರಾಯಣ, ಸುನೀಲ್, ಸೀನಪ್ಪ, ಮಂಜುನಾಥ್‌ ಉಪಸ್ಥಿತರಿದ್ದು, ಎನ್‌.ಎಲ್.ವಿಜಯ ವಂದಿಸಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.