ಸ್ತ್ರೀಯನ್ನು ಎದುರಿಸಲಾಗದ ಜೆಡಿಎಸ್‌ನವರೇ ಶಿಖಂಡಿಗಳು

ಮೂವರು ಸುಮಲತಾರನ್ನು ಕಣಕ್ಕಿಳಿಸಿ ಕುತಂತ್ರ ಮಾಡಬೇಕಿತ್ತಾ? • ಸಿಆರ್‌ಎಸ್‌ ಬಿಟ್ಟು ನಾವೆಲ್ಲಾ ಸುಮಲತಾ ಪರ ಕಾರ್ಯಾಚರಣೆ

Team Udayavani, May 12, 2019, 12:04 PM IST

mandya-tdy-1..

ಶಾಸಕ ಕೆ.ಸುರೇಶ್‌ಗೌಡರ ವಿರುದ್ಧ ಚಲುವರಾಯಸ್ವಾಮಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದರು.

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಓರ್ವ ಸ್ತ್ರೀಯನ್ನು ಎದುರಿಸಲಾಗದ ಜೆಡಿಎಸ್‌ನವರು ಶಿಖಂಡಿಗಳು ಎಂದು ನಾಗಮಂಗಲ ಬ್ಲಾಕ್‌ ಕಾಂಗ್ರೆಸ್‌ ಉಚ್ಛಾಟಿತ ಅಧ್ಯಕ್ಷ ಪ್ರಸನ್ನ ಕಿಡಿಕಾರಿದರು.

ಜಿಲ್ಲೆಯ ಇತಿಹಾಸದಲ್ಲಿ ಅನೇಕ ಮಹಾ ನಾಯಕರು ಲೋಕಸಭೆ ಪ್ರವೇಶಿಸಿದ್ದಾರೆ. ಈ ನೆಲದ ನಾಯಕರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡುವ ಯೋಗ್ಯತೆ ಇಲ್ಲದೆ, ಮುಖ್ಯಮಂತ್ರಿ ಪುತ್ರ ನಿಖೀಲ್ ಕಣಕ್ಕಿಳಿಯುವುದನ್ನು ಪ್ರಶ್ನಿಸದ ಸ್ಥಳೀಯ ಜೆಡಿಎಸ್‌ ಶಾಸಕರು ಶಿಖಂಡಿತನದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂಷಿಸಿದರು.

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್‌ ಶಾಸಕರು, ಸಚಿವರಿದ್ದರೂ ಒಂದು ಹೆಣ್ಣನ್ನು ಎದುರಿಸುವುದಕ್ಕೆ ಸಾಧ್ಯವಾಗಲಿಲ್ಲ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಕುಮಾರಸ್ವಾಮಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಲ್ಲರೂ ಬರಬೇಕಾಯಿತು. ಇದು ನಾಚಿಕೆಗೇಡಿನ ಸಂಗತಿಯಲ್ಲವೇ ಎಂದು ಪ್ರಶ್ನಿಸಿದರು.

ನೇರವಾಗಿ ಎದುರಿಸೋ ತಾಕತ್ತಿರಲಿಲ್ಲವೇ? ಸುಮಲತಾ ಸ್ಪರ್ಧಿಸಿದ್ದಾರೆಂಬ ಕಾರಣಕ್ಕೆ ಅದೇ ಹೆಸರಿನ ಮೂವರನ್ನು ಅಖಾಡಕ್ಕಿಳಿಸಿ ಕುತಂತ್ರ ರಾಜಕಾರಣ ಮಾಡಿದಿರಲ್ಲ, ಇದು ಶಿಖಂಡಿತನದ ರಾಜಕಾರಣ ವಲ್ಲವೇ? ನೇರವಾಗಿಯೇ ಒಬ್ಬ ಸುಮಲತಾರನ್ನು ಎದುರಿಸುವ ಗಂಡಸ್ತನ ನಿಮಗಿರ ಲಿಲ್ಲವೇ. ಇದನ್ನು ನೋಡಿದಾಗ ಶಿಖಂಡಿತನದ ರಾಜಕಾರಣ ಮಾಡಿದವರು ಯಾರು ಎನ್ನುವುದು ಅರ್ಥವಾಗುತ್ತದೆ ಎಂದು ಜರಿದರು.

ನಮ್ಮ ಪಾಡಿಗೆ ನಮ್ಮನ್ನು ಬಿಡಿ: ಗಂಡಸ್ತನದ ಬಗ್ಗೆ ಮಾತನಾಡುವ ನೀವು ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್‌ನವರೆಲ್ಲರೂ ಸೋತಿರುವವರು. ಅವರ ಉಸಾಬರಿ ನಿಮಗ್ಯಾಕೆ ಸ್ವಾಮಿ. ಅವರು ಎಲ್ಲಾದರೂ ಇರಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಚುನಾವಣೆ ಮುಗಿದ ನಂತರದಲ್ಲಿ ಅವರನ್ನು ಟಾರ್ಗೆಟ್ ಮಾಡಿಕೊಂಡಿರುವುದೇಕೆ. ನಿಮ್ಮ ತಾಕತ್ತನ್ನು ನೀವು ತೋರಿಸಿ. ಗೆಲ್ಲುವ ವಿಶ್ವಾಸ, ಭರವಸೆ ನಿಮಗಿದ್ದ ಮೇಲೆ ನಮ್ಮ ಬಗ್ಗೆ ನಿಮಗ್ಯಾಕೆ ಚಿಂತೆ. ನಮ್ಮ ಪಾಡಿಗೆ ನಾವಿರಲು ಬಿಡಿ ಎಂದರು.

ನಿಮ್ಮ ನಿಲುಗಳೇನು: ಚುನಾವಣಾ ಸಮಯದಲ್ಲಿ ಚಲುವರಾಯಸ್ವಾಮಿ ತಪ್ಪಾಗಿ ನಡೆದುಕೊಂಡಿದ್ದರೆ ಅದನ್ನು ಪ್ರಶ್ನಿಸಲು ಕಾಂಗ್ರೆಸ್‌ ಪಕ್ಷದ ನಾಯಕರಿದ್ದಾರೆ. ಅವರೇ ಸರ್ಟಿಫಿಕೇಟ್ ಕೊಟ್ಟ ಮೇಲೆ ನಿಮ್ಮ ಸರ್ಟಿಫಿಕೇಟ್ ನಮಗ್ಯಾಕೆ ಬೇಕು. ನಾವೇನಾದರೂ ನಿಮ್ಮ ಬಗ್ಗೆ ಮಾತನಾಡುತ್ತಿದ್ದೇವಾ, ಟೀಕೆ ಮಾಡುತ್ತಿದ್ದೇವಾ, ಅಂದ ಮೇಲೆ ನಮ್ಮನ್ನು ಏಕೆ ಟೀಕೆ ಮಾಡುತ್ತೀರಿ. ಜಿಲ್ಲಾ ಉಸ್ತುವಾರಿ ಸಚಿವರು ಒಮ್ಮೆ ಚಲುವರಾಯಸ್ವಾಮಿ ಅವರನ್ನ ಡೆಡ್‌ಹಾರ್ಸ್‌ ಅಂತಾರೆ. ಇನ್ನೊಮ್ಮೆ ಅದಕ್ಕೆ ಕ್ಷಮೆ ಕೇಳ್ತಾರೆ. ಜೆಡಿಎಸ್‌ನವರ ನಿಲುವುಗಳೇ ನಮಗೆ ಅರ್ಥವಾಗುತ್ತಿಲ್ಲ ಎಂದು ಛೇಡಿಸಿದರು.

ಜೆಡಿಎಸ್‌ನವರು ಚಾಕೋಲೇಟ್ ಪಡೆದಿದ್ದರಾ? ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳ್ತೀರಿ. ಫಾರೂಕ್‌, ಶರವಣ ಇವರೆಲ್ಲಾ ವಿಧಾನಪರಿಷತ್‌ಗೆ ಸ್ಪರ್ಧಿಸಿದ್ದಾಗ ಶಾಸಕರೆಲ್ಲಾ ಚಾಕೋಲೇಟ್ ಈಸ್ಕೊಂಡು ಓಟ್ ಹಾಕಿದ್ದರಾ. ಅಪ್ಪಾಜಿಗೌಡ ಸ್ಪರ್ಧೆ ವೇಳೆ 50 ಲಕ್ಷ ರೂ. ಕೊಟ್ಟಿರುವುದಾಗಿ ಬಹಿರಂಗವಾಗಿಯೇ ಹೇಳಿದ್ದರು. ನಿಮ್ಮಿಂದ ರಾಜಕೀಯದ ನೀತಿ ಪಾಠ ಕಲಿಯಬೇಕಿಲ್ಲ ಎಂದು ಟೀಕಿಸಿದರು.

ಸಾಮಾನ್ಯ ಜ್ಞಾನವೇ ಇಲ್ಲವೇ? ಲೋಕಸಭಾ ಉಪ ಚುನಾವಣೆಯಲ್ಲಿ ಸೋಲುವುದಕ್ಕೆ ಚಲುವರಾಯ ಸ್ವಾಮಿ ಕಾರಣರಲ್ಲ. ಅಭ್ಯರ್ಥಿಯಾಗಿದ್ದ ಪುಟ್ಟರಾಜು ಗುಂಪುಗಾರಿಕೆ ಮಾಡಿಕೊಂಡಿದ್ದರ ಫ‌ಲವಾಗಿ ಸೋಲನುಭವಿಸಬೇಕಾಯಿತು.

ಅಂದು ನಾವೆಲ್ಲರೂ ಪುಟ್ಟರಾಜು ಪರವಾಗಿಯೇ ಪ್ರಚಾರ ನಡೆಸಿದ್ದೆವು. ನಾಲ್ಕೂವರೆ ತಿಂಗಳ ಅವಧಿಗೆ ಯಾರಾದ್ರೂ ದುಡ್ಡು ಕೊಟ್ಟು ಚುನಾವಣೆ ಮಾಡ್ತಾರಾ. ಸ್ವಲ್ಪವಾದರೂ ಸಾಮಾನ್ಯ ಜ್ಞಾನವಿಲ್ಲದೆ ಮಾತನಾಡಿದರೆ ಏನು ಹೇಳಲು ಸಾಧ್ಯ ಎಂದು ಶಾಸಕ ಸುರೇಶ್‌ಗೌಡರಿಗೆ ಕುಟುಕಿದರು. ಎರಡನೇ ಬಾರಿ ಪುಟ್ಟರಾಜು ಅಭ್ಯರ್ಥಿಯಾದಾಗ ಗುಂಪುಗಾರಿಕೆ ಬಿಟ್ಟು ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆದರು. ಇದಕ್ಕೆ ಚಲುವರಾಯಸ್ವಾಮಿ ಅವರೂ ಕೈಜೋಡಿಸಿ ಅಖಾಡಕ್ಕಿಳಿದಿದ್ದರಿಂದ ಪುಟ್ಟರಾಜು ಅವರಿಗೆ ಗೆಲುವು ಸಾಧ್ಯವಾಯಿತು ಎಂದರು.

ಗೋಷ್ಠಿಯಲ್ಲಿ ಕೃಷ್ಣೇಗೌಡ, ನರಸಿಂಹಮೂರ್ತಿ, ರಾಜೇಶ್‌, ವಸಂತ್‌, ರವಿಕಾಂತ್‌, ರಾಜೇಶ್‌, ಸುಭಾಷ್‌ಚಂದ್ರ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.