ನೀರಿನ ಕೊರತೆ ನಿವಾರಣೆಗೆ ಹನಿ ನೀರಾವರಿ ಬಳಸಿ

ಶೇ.50ರಿಂದ 80ರಷ್ಟು ನೀರು ಉಳಿತಾಯ: ಜೋಷಿ • ಹನಿ ನೀರಾವರಿಯಲ್ಲಿ ಕ್ಯಾರೆಟ್, ಮೂಲಂಗಿ ಬೆಳೆಯ ಪ್ರಾತ್ಯಕ್ಷಿಕೆ

Team Udayavani, May 12, 2019, 12:24 PM IST

mandya-tdy-4..

ಮಳವಳ್ಳಿ: ಕಾಲುವೆಗಳ ಮೂಲಕ ಬರುವ ನೀರನ್ನು ಭೂಮಿಗೆ ಹಾಯಿಸಿ ಕೃಷಿ ಮಾಡುವ ವಿಧಾನದ ಬದಲು ಹನಿ ನೀರಾವರಿಯನ್ನು ಆಳವಡಿಸಿ ಕೊಂಡರೇ ಹೆಚ್ಚು ಇಳುವರಿಯ ಜೊತೆಗೆ ನೀರಿನ ಕೊರತೆಯೂ ಕಡಿಮೆ ಮಾಡಿ ಮತ್ತಷ್ಟು ರೈತರಿಗೆ ಅನುಕೂಲವಾಗಲಿದೆ ಎಂದು ಬೇಸಾಯ ತಜ್ಞ ಪಿ.ವಿ.ಜೋಷಿ ತಿಳಿಸಿದರು.

ತಾಲೂಕಿನ ಉಢಪೆಬೂವಳ್ಳಿ(ಕಣಿಕಹಳ್ಳಿ)ಯಲ್ಲಿ ಪೂರಿಗಾಲಿ ಸಂಪೂರ್ಣ ಸ್ವಯಂ ಚಾಲಿತ ಹನಿ ಹಾಗೂ ತುಂತುರು ನೀರಾವರಿ ಯೋಜನೆಯಲ್ಲಿ ಬೆಳೆದಿರುವ ಕ್ಯಾರೆಟ್ ಹಾಗೂ ಮೂಲಂಗಿ ವಿಶೇಷ ಹೈಬ್ರಿಡ್‌ ತಳಿಯ ಮಾದರಿ ಪ್ರಾತ್ಯಕ್ಷತೆಯಲ್ಲಿ ರೈತರಿಗೆ ಮಾಹಿತಿ ನೀಡುತ್ತಾ ಮಾತನಾಡಿ, ಈ ಬೆಳೆಗಳಿಗೆ ಸೂಕ್ತ ಕೃಷಿ ಪದ್ದತಿ ಅನುಸಾರವಾಗಿ ಮಣಿನ ಪರೀಕ್ಷೆ ನೀರಿನ ಪರೀಕ್ಷೆ, ಸೂಕ್ತ ರಸಾವರಿ ಗೊಬ್ಬರಗಳ ಬಳಕೆ. ಎತ್ತರದ ಮಡಿ ಕಟ್ಟುವಿಕೆ, ಹಾಗೂ ತುಂತುರು ನೀರಾವರಿ ಬಳಕೆಯಿಂದ ಉತ್ತಮವಾದ ಬೆಳೆಯನ್ನು ಬೆಳೆಯಬಹುದಾಗಿದೆ ಎಂದರು.

ಪ್ರಾತ್ಯಕ್ಷತೆಗೆ ಪೂರಿಗಾಲಿ ಹನಿ ನೀರಾವರಿ ಯೋಜನೆಯಡಿಯಲ್ಲಿರವ ಎಲ್ಲಾ 50 ಗ್ರಾಮಗಳ ರೈತ ಪಲಾನುಭವಿಗಳಿಗೆ ಭೇಟಿಯಾಗುವಂತೆ ವ್ಯವಸ್ಥೆ ಮಾಡಿ ಪ್ರಾತ್ಯಕ್ಷತೆ ಬಗ್ಗೆ ವಿವರಣೆ ನೀಡಲಾಗಿದೆ. ಹತ್ತು ದಿನಗಳ ಕಾಲ ರೈತರಿಗೆ ಸಮಗ್ರ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿಯವರೆಗೂ ಸುಮಾರು 500ಕ್ಕೂ ಹೆಚ್ಚು ರೈತರನ್ನು ಕರೆತಂದು ಹನಿ ನೀರಾವರಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹನಿ ನೀರಾವರಿ ಯೋಜನೆಯಿಂದ ನೀರಿನ ಸದ್ಬಳಕೆ ಹಾಗೂ ಬೆಳೆ ಉತ್ಪಾದನೆಯಲ್ಲಿ ಹೆಚ್ಚಳ ಕಾಣಬಹುದು. ಈ ಪದ್ಧತಿಯಿಂದ ಬೆಳೆಗಳಿಗೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ನೀಡಬಹುದು. ಶೇ.50ರಿಂದ 80ರಷ್ಟು ನೀರಿನ ಉಳಿತಾಯವಾಗಲಿದೆ ಎಂದರು.

ಸಾಂಪ್ರದಾಯಿಕ ವಿಧಾನದಲ್ಲಿ ನೀರನ್ನು ಸಮಾನ್ಯವಾಗಿ ಮಣ್ಣಿನ ಕಾಲುವೆಯಲ್ಲಿ ಹಾಯಿಸುವುದರಿಂದ ಶೇ.30ರಿಂದ 40 ರಷ್ಟು ನೀರು ಪೋಲಾಗುತ್ತದೆ, ಜೊತೆಗೆ ಜಮೀನಿನ ಗುಣಮಟ್ಟವೂ ಕಡಿಮೆಯಾಗುತ್ತದೆ. ಆದರೆ, ಸೂಕ್ಷ್ಮ ನೀರಾವರಿ ಪದ್ದತಿಯಿಂದ ನೀರನ್ನು ಕೊಳವೆ ಮೂಲಕ ನೇರವಾಗಿ ಗಿಡಗಳ ಬುಡಕ್ಕೆ ಸಾಗಿಸಿ ಬೇರಿನ ವಲಯದ ಭಾಗ ನೆನೆಯುವಂತೆ ಮಾಡಿ ಗಿಡದ ಬೆಳವಣಿಗೆಗೆ ಅಗತ್ಯ ಇರುವಷ್ಟು ನೀರನ್ನು ಕೊಡುವುದರಿಂದ ಕಳೆಯೂ ಕಡಿಮೆಯಾಗಿ ಬೆಳೆ ಚನ್ನಾಗಿ ಬೆಳೆಯುತ್ತದೆ ಎಂದರು.

ಹನಿ ನೀರಾವರಿಯಿಂದ ಕೂಲಿಯ ಖರ್ಚು ಮಾಡಿಮೆಯಾಗುತ್ತದೆ, ಹೆಚ್ಚು ಲಾಭದ ಬೆಳೆಯನ್ನು ಬೆಳೆಯಬಹುದಾಗಿದೆ, ಪೂರಿಗಾಲಿ ಹನಿ ನೀರಾವರಿ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಂಡರೇ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರ ನಡೆದು ರೈತರು ಹೆಚ್ಚು ಅನುಕೂಲವನ್ನು ಪಡೆದುಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಜೈನ್‌ ಇರಿಗೇಷನ್‌ ಸಿಬ್ಬಂದಿ ಹಾಗೂ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.