ಗೋವು-ಧರ್ಮ ರಕ್ಷಣೆ ಮಾಡಿ: ಕುಮಾರ್‌

ಶ್ರೀ ಜಪಾನಂದಜೀ ಅವರಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ ನಿವೃತ್ತ ನ್ಯಾಯಾಧೀಶರ ಸಲಹೆ

Team Udayavani, May 12, 2019, 1:52 PM IST

tumkur-tdy-3..

ಪಾವಗಡ ಪಟ್ಟಣದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದಲ್ಲಿ ಸ್ವಾಮಿ ಜಪಾನಂದಜೀ ಅವರನ್ನು ರೈತ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಪಾವಗಡ: ಗೋವುಗಳನ್ನು ರಕ್ಷಣೆ ಮಾಡಿದರೆ ಧರ್ಮವನ್ನು ಸಂರಕ್ಷಣೆ ಮಾಡಿದಂತೆ. ಗೋವುಗಳ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುವವರಿಗೆ ಗೋವುಗಳ ಬಗ್ಗೆ ತಿಳಿವಳಿಕೆ ನೀಡಬೇಕಿದೆ ಎಂದು ನಿವೃತ್ತ ನ್ಯಾಯಾಧೀಶ ಎನ್‌.ಕುಮಾರ್‌ ತಿಳಿಸಿದರು.

ಶನಿವಾರ ಪಾವಗಡ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಅರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿದರು. ಗೋಮಾತೆಗೆ ಸನಾತನ ಕಾಲದಿಂದಲೂ ಅಗ್ರ ಪೂಜೆ ಸ್ಥಾನ ನೀಡಲಾಗಿದ್ದು ಅವುಗಳಿಗೆ ಅವಮಾನ ಮಾಡಿ ದರೆ ಧರ್ಮಕ್ಕೆ ಅವಮಾನ ಮಾಡಿದಂತೆ ಎಂದರು.

ಗಂಜಲ, ಸಗಣಿ ವೈಜ್ಞಾನಿಕವಾಗಿ ಬಳಸಿ: ಗೋಹತ್ಯೆ ಮಹಾಪಾಪ. ಗೋವುಗಳಿಂದ ಬರುವ ಗಂಜಲ, ಸಗಣಿಯನ್ನು ಶುದ್ಧೀಕರಿಸಿ ಅವುಗಳನ್ನು ಔಷಧಿ ಯಾಗಿ ಬಳಸುವ ವೈಜ್ಞಾನಿಕ ವಿಧಾನಗಳನ್ನು ಅಭಿವೃದ್ಧಿಗೊಳಿಸುವುದು ಹೆಚ್ಚು ಸೂಕ್ತ. ಹೀಗೆ ಮಾಡಿದರೆ ಗೋವುಗಳನ್ನು ರಕ್ಷಣೆ ಮಾಡಿದಂತೆ. ಇಂತಹ ಸಂಸ್ಥೆಯನ್ನು ಸ್ಥಾಪಿಸುವಂತೆ ಸ್ವಾಮಿ ಜಪಾನಂದಜೀ ಅವರಲ್ಲಿ ಮನವಿ ಮಾಡಿದರು.

ಶ್ಲಾಘನೀಯ: ಗೋವುಗಳಿಗೆ ಆಹಾರ ಸಿಗದೆ ಸಾವಿರಾರು ರಾಸುಗಳಿಗೆ ಆಹಾರ ನೀಡುವ ಕಾಯಕದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಅವರಲ್ಲಿ ನಿಜವಾದ ಮಾನವೀಯತೆ ಕಾಣ ಬಹುದು. ಒಂದು ಸರ್ಕಾರ ಮಾಡಬೇಕಾದ ಕೆಲಸ ಒಬ್ಬ ಸನ್ಯಾಸಿ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಸ್ವಾಮೀಜಿ ಮಾದರಿ: ಸ್ವಾಮೀಜಿ ತಾವು ಮಾಡುವ ಕಾಯಕದಿಂದ ರೈತರಲ್ಲಿ ಇವರ ಬಗ್ಗೆ ಮೂಡಿದ ಅಭಿನಂದನೆ ಇದಾಗಿದೆ ಅದಕ್ಕಾಗಿ ಇಂದು ರೈತರು ತಾವಾಗಿಯೇ ಬಂದು ಅವರಿಗೆ ಕೃತಜ್ಞತೆ ಸಮರ್ಪಿ ಸುತ್ತಿದ್ದಾರೆ. ಇಂತಹ ಕಾರ್ಯ ಸಮಾಜ ಸೇವೆ ಮಾಡುವವರಿಗೆ ಮಾದರಿಯಾಗಲಿದೆ ಎಂದು ಹೇಳಿದರು.

ಇರುವವರೆಗೂ ಸೇವೆ: ಸ್ವಾಮಿ ಜಪಾನಂದಜೀ ಮಾತನಾಡಿ, ತಾನು ಇರುವವರೆಗೂ ಸೇವೆ ಮಾಡುವ ಅವಕಾಶ ನೀಡಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ. ಆಹಾರ ಇಲ್ಲದ ರಾಸುಗಳಿಗೆ ಸೇವೆ ಸಲ್ಲಿಸುವ ಅವಕಾಶ ತನಗೆ ಸಿಕ್ಕಿದ್ದು ದೇವರ ಕೃಪೆ ಎಂದರು. ಹಿರಿಯ ವಕೀಲ ಎಂ.ನಾಗೇಂದ್ರಪ್ಪ ಮಾತನಾಡಿ, ಎಲ್ಲಿ ಅಗತ್ಯವಿದೆಯೋ ಅಲ್ಲೆಲ್ಲಾ ರಾಸುಗಳಿಗೆ ಮೇವು ನೀಡುವ ಕೆಲಸವನ್ನು ಸ್ವಾಮೀಜಿ ಮಾಡುತ್ತಿದ್ದಾರೆ. ಈ ಕಾರ್ಯ ನಿಜಕ್ಕೂ ಮಹತ್ವದ್ದು ಎಂದು ತಿಳಿಸಿದರು.

ಸನ್ಮಾನ: ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ಮಾತನಾಡಿ, ಪ್ರತಿನಿತ್ಯ ಸಾವಿರಾರು ಕೆ.ಜಿ.ಮೇವನ್ನು ಚಳ್ಳಕೆರೆ, ಹಿರಿಯೂರು, ಪಾವಗಡ ತಾಲೂಕಿನ ರಾಸುಗಳಿಗೆ ನೀಡುತ್ತಿರುವ ಸ್ವಾಮೀಜಿ ಅವರ ಸೇವೆಯನ್ನು ಸ್ಮರಿಸಿದರು. ತಾಲೂಕು ರೈತಸಂಘದ ವತಿಯಿಂದ ಸ್ವಾಮೀಜಿ ಅವರಿಗೆ ಶಾಲು ಹೊಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ.ಜಿ.ವೆಂಕಟರಾಮಯ್ಯ, ಪ್ರೇರಣ ತಂಡದ ಮುಖ್ಯಸ್ಥ ಮಹೇಶ್‌, ರೈತ ಸಂಘದ ಕೆಂಚಣ್ಣ, ಅಂಜಯ್ಯ, ನೂರಾರು ರೈತರು, ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.