ಕುಡಿವ ನೀರಿನ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

Creating drastic water shortage is a tough step

Team Udayavani, May 12, 2019, 2:29 PM IST

TUMKUR-TDY-7..

ಕೊರಟಗೆರೆ ಪಪಂ ಕಚೇರಿಯಲ್ಲಿ ನಡೆದ ತುರ್ತು ಕುಡಿಯುವ ನೀರಿನ ಸಭೆಯಲ್ಲಿ ತುಮಕೂರು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಮಾತನಾಡಿದರು.

ಕೊರಟಗೆರೆ: ಕುಡಿಯುವ ನೀರಿನ ಸರಬರಾಜು ಮತ್ತು ಸ್ವಚ್ಛತೆ ನಿರ್ವಹಣೆಯಲ್ಲಿ ವಿಳಂಬ ಮಾಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿ ಮಾಡುವ ವಾಟರ್‌ ಮ್ಯಾನ್‌ ಮತ್ತು ನೌಕರರ ವಿರುದ್ಧ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಅಮಾನತಿಗೆ ಆದೇಶ ಮಾಡುತ್ತೇನೆ ಎಂದು ತುಮಕೂರು ನಗರಾಭಿ ವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅನುಪಮಾ ಖಡಕ್‌ ಎಚ್ಚರಿಕೆ ನೀಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರ ಆದೇಶದ ಮೇರೆಗೆ ಕೊರಟಗೆರೆ ಪಪಂಗೆ ಶುಕ್ರವಾರ ಸಂಜೆ ದಿಢೀರ್‌ ಭೇಟಿ ನೀಡಿದ ಅವರು, ಪಪಂ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಡಿಯುವ ನೀರಿನ ತುರ್ತು ಸಭೆ ನಡೆಸಿದರು.

ಅನಿವಾರ್ಯ: ಈ ವೇಳೆ ವಾಟರ್‌ ಮ್ಯಾನ್‌ಗಳಿಂದ ಮಾಹಿತಿ ಪಡೆದು ಅಧಿಕಾರಿಗಳ ವಿರುದ್ಧ ಕಿಡಿಕಾರಿ ದರು. ಪಟ್ಟಣದಲ್ಲಿ 15 ಸಾವಿರ ಜನರಿಗೆ ಇನ್ನೆರಡು ವರ್ಷ ಆಗುವಷ್ಟು ಕುಡಿಯುವ ನೀರಿನ ಶೇಖರಣೆ ಆಗಿದೆ. 15 ವಾರ್ಡುಗಳಿಗೆ ಪ್ರತಿದಿನ ಒಂದು ಗಂಟೆ ಕಡ್ಡಾಯವಾಗಿ ಕುಡಿಯುವ ನೀರಿನ ಪೂರೈಕೆ ಮಾಡಿ. ಪ್ರತಿದಿನ ಸಂಜೆ ತನಗೆ ದಾಖಲೆ ಸಮೇತ ವರದಿ ಸಲ್ಲಿಸಬೇಕು. ಇಲ್ಲವಾದರೇ ವಾಟರ್‌ ಮ್ಯಾನ್‌ಗಳಿಗೆ ಪಾವಗಡ ಮತ್ತು ಮಧುಗಿರಿ ಪಟ್ಟಣಕ್ಕೆ ನೀರಿನ ಪೂರೈಕೆ ಗಾಗಿ ವರ್ಗಾವಣೆ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಪತ್ರ ಬರೆಯುವೆ: ಉತ್ತರ ಕರ್ನಾಟಕ ಭಾಗದಲ್ಲಿ ಒಂದು ಕೊಡ ನೀರಿಗಾಗಿ 5-6 ಕಿ.ಮೀ ದೂರ ಹೋಗುತ್ತಿದ್ದಾರೆ. ಕಾಡಿನಲ್ಲಿ ವಾಸಿಸುವ ಪ್ರಾಣಿ ಪಕ್ಷಿಗಳಿಗೆ ನೀರಿಲ್ಲದೇ ನಾಡಿಗೆ ಬರುತ್ತಿವೆ. ಪಾವಗಡ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ತೋಟಗಳು ಒಣಗಿ ಹೋಗಿವೆ. ಕೊರಟಗೆರೆ ಪಟ್ಟಣದ 15 ವಾರ್ಡ್‌ನಲ್ಲಿ ಒಂದು ಹನಿ ಕುಡಿಯುವ ನೀರು ವ್ಯರ್ಥ ಆಗುತ್ತಿರುವ ಮಾಹಿತಿ ಬಂದರೆ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯುತ್ತೇನೆಂದರು. ಪಟ್ಟಣದ 15 ವಾರ್ಡುಗಳಿಗೆ ಪ್ರತಿದಿನ 1 ಗಂಟೆ ನೀರು ಬಿಡುವಂತಹ ಸಮಯವನ್ನು ನಿಗದಿ ಮಾಡಿ ಪಪಂ ಕಚೇರಿ ಸೂಚನಾ ಫ‌ಲಕ ಮತ್ತು ಆಯಾ ವಾರ್ಡುಗಳಿಗೆ ಬಿತ್ತಿಪತ್ರದ ಮೂಲಕ ಪ್ರಚಾರಪಡಿಸಬೇಕು.

ನೀರಿನ ಸರಬರಾಜು ಆಗದಿರುವ ವಾರ್ಡುಗಳಿಗೆ ಪ್ರತಿದಿನ ನೀರಿನ ಟ್ಯಾಂಕರ್‌ಗಳ ಮೂಲಕ ಸರಬ ರಾಜು ಮಾಡಬೇಕು. ದಿನಪತ್ರಿಕೆಗಳಿಗೆ ಮಾಹಿತಿ ನೀಡಿ ಕುಡಿಯುವ ನೀರಿನ ಅರಿವು ಮೂಡಿಸಿ ಪ್ರಯತ್ನ ಮಾಡಿ ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.

ಮುಲಾಜಿಲ್ಲದೇ ಕ್ರಮ: ಪಪಂ ಮುಖ್ಯಾಧಿಕಾರಿ ರುಕ್ಮಿಣಿ ಪ್ರತಿಕ್ರಿಯಿಸಿ, ಪಟ್ಟಣಕ್ಕೆ ಆಗುವಷ್ಟು ಹೇಮಾವತಿ ನೀರು ಜೆಟ್ಟಿಅಗ್ರಹಾರ ಕೆರೆಯಲ್ಲಿ ಶೇಖರಣೆ ಆಗಿದೆ. ನಿರ್ವಹಣೆ ಕೊರತೆಯಿಂದ ನೀರಿನ ಅಭಾವ ಸೃಷ್ಟಿಯಾಗಿದೆ. ಸ್ವಚ್ಛತೆ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆ ಬಗ್ಗೆ ತಾನೇ ಖುದ್ದಾಗಿ ಪಟ್ಟಣದ ವಾರ್ಡುಗಳಿಗೆ ಭೇಟಿ ನೀಡಿ ಸಾರ್ವ ಜನಿಕರಿಂದ ಮಾಹಿತಿ ಕಲೆ ಹಾಕುತ್ತೇನೆ. ನಿರ್ಲಕ್ಷ್ಯ ವಹಿಸುವ ಸಿಬ್ಬಂದಿ ವಿರುದ್ಧ ಮುಲಾಜಿಲ್ಲದೇ ಕ್ರಮಕ್ಕೆ ಸೂಚಿಸುತ್ತೇನೆಂದರು.

ಪಪಂ ಎಂಜಿನಿಯರ್‌ ತ್ಯಾಗರಾಜು ಮಾತನಾಡಿ, ಕೊರಟಗೆರೆ ಪಟ್ಟಣಕ್ಕೆ ಪ್ರತಿದಿನ 28 ಲಕ್ಷ ಲೀಟರ್‌ ಕುಡಿಯುವ ನೀರಿನ ಸರಬರಾಜು ಆಗುತ್ತಿದೆ. 15 ವಾರ್ಡುಗಳ 144 ಲೈನ್‌ಗಳಿಗೆ ನೀರು ಸರಬರಾಜು ಮಾಡಲು ಗಿರಿನಗರ, ತಾಪಂ ಕಚೇರಿ, ಕೋಟೆ ಬೀದಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ನೀರಿನ ಶೇಖರಣೆ ಘಟಕವಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ರುಕ್ಮಿಣಿ, ಆರೋಗ್ಯ ಅಧಿಕಾರಿ ರೈಸ್‌ಅಹಮ್ಮದ್‌, ಸಿಬ್ಬಂದಿಗಳಾದ ವೆಂಕಟಾಪತಿ, ನಾಗರತ್ನಮ್ಮ, ಸಾವಿತ್ರಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.