ನಗರದ ಕಸ ನಗರದಲ್ಲೇ ವಿಲೇವಾರಿ!


Team Udayavani, May 12, 2019, 4:19 PM IST

hav-1

ಹಾವೇರಿ: ಕಸ ವಿಲೇವಾರಿಗೆ ನಿಗದಿತ ಪ್ರತ್ಯೇಕ ಸ್ಥಳವಿದ್ದರೂ ನಗರದ ವಿವಿಧೆ ಇರುವ ಖಾಲಿ ಜಾಗ, ರಸ್ತೆ ಪಕ್ಕದಲ್ಲಿಯೇ ಕಸ ಚೆಲ್ಲಿ, ನಗರದಲ್ಲಿನ ಕಸ ನಗರದಲ್ಲಿಯೇ ವಿಲೇವಾರಿಯಾಗುತ್ತಿದೆ. ಈ ಮೂಲಕ ಕೆರೆ ನೀರು ಕೆರೆಗೆ ಚೆಲ್ಲಿ ಎಂಬ ಗಾದೆಯನ್ನು ನಗರ ಸಭೆಯವರು ವಿಭಿನ್ನವಾಗಿ ಪಾಲಿಸುತ್ತಿರುವಂತಿದೆ.

ನಗರದ ಪಿ.ಬಿ. ರಸ್ತೆ ಅಕ್ಕಪಕ್ಕ, ಬಸ್‌ ನಿಲ್ದಾಣ, ಹಾನಗಲ್ಲ ರಸ್ತೆ, ಜಿಲ್ಲಾಸ್ಪತ್ರೆ ಸುತ್ತಮುತ್ತ, ಎಂ.ಜಿ. ರಸ್ತೆ, ಇಜಾರಿಲಕಮಾಪುರ, ಕಾಗಿನೆಲೆ ರಸ್ತೆ, ಹುಕ್ಕೇರಿಮಠದ ರಸ್ತೆ, ದಾನೇಶ್ವರ ನಗರ ರಸ್ತೆ ಸೇರಿದಂತೆ ನಗರದ ವಿವಿಧೆಡೆ ರಾಶಿ ರಾಶಿಯಾಗಿ ಬಿದ್ದಿರುವ ಕಸದ ಗುಡ್ಡೆಗಳು ಕಣ್ಣಿಗೆ ರಾಚುತ್ತಿದ್ದು ಸುತ್ತಲಿನ ವಾತಾವರಣದಲ್ಲಿ ದುರ್ನಾತ ಬೀರುತ್ತಿವೆ.

ನಗರದ ಪಿ.ಬಿ. ರಸ್ತೆ ಅಕ್ಕಪಕ್ಕ, ಬಸ್‌ ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಪ್ರದೇಶದಲ್ಲಿ ಕಸವೆಲ್ಲ ಚರಂಡಿ ಶೇಖರಣೆಯಾಗಿದೆ. ಧಾರಾಕಾರ ಮಳೆ ಸುರಿದಾಗ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೇ ರಸ್ತೆಯ ಮೇಲೆ ಹರಿದು ಸಂಚಾರಕ್ಕೆ ವ್ಯತ್ಯಯ ಉಂಟಾಗುತ್ತಿದೆ. ಖಾಲಿ ನಿವೇಶನ, ಪುರಾತನ ಕೆರೆ, ಉದ್ಯಾನವನಗಳಿಗೂ ಕಸ ವ್ಯಾಪಿಸಿದೆ. ನಾಗೇಂದ್ರನಮಟ್ಟಿ ಎಂಬುದು ನಗರಸಭೆಯ ಅಘೋಷಿತ ತ್ಯಾಜ್ಯ ವಿಲೇವಾರಿ ಸ್ಥಳವಾಗಿ ಮಾರ್ಪಟ್ಟಿದೆ. ಚರಂಡಿಗಳು ಕಸದಿಂದ ತುಂಬಿಕೊಳ್ಳುತ್ತಿವೆ.

ಪೌರ ಕಾರ್ಮಿಕರು ಎಷ್ಟೇ ಶ್ರಮವಹಿಸಿದರೂ ನಗರದ ಕಸದಿಂದ ಮುಕ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ. ಸುಮಾರು 70ಸಾವಿರ ಜನಸಂಖ್ಯೆ ಹೊಂದಿರು ನಗರದ ಸ್ಥಿತಿ ಈಗಲೇ ಹೀಗಾದರೆ ಮುಂದೇನು ಎಂಬ ಆತಂಕ ನಾಗರಿಕರನ್ನು ಕಾಡುತ್ತಿದೆ. ನಗರದ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಸಮೀಪದ ಗೌರಾಪುರ ಗುಡ್ಡದಲ್ಲಿ ವಿಲೇವಾರಿ ಘಟಕ ಸ್ಥಾಪನೆಗೆ ಜಮೀನು ಖರೀದಿಸಿದೆ. ನಗರದ ಎಲ್ಲ ಕಸವನ್ನು ಅಲ್ಲಿಗೆ ಕೊಂಡೊಯ್ಯಲು ಟ್ರ್ಯಾಕ್ಟರ್‌, ಲಾರಿಗಳನ್ನು ಮೀಸಲಿಡಲಾಗಿದೆ. ಆದರೆ, ನಿತ್ಯ ಒಂದರಿಂದ ಎರಡು ಲೋಡ್‌ ಕಸ ಮಾತ್ರ ಗೌರಾಪುರ ಗುಡ್ಡವನ್ನು ತಲುಪುತ್ತಿದೆ. ಅಲ್ಲಿಯೂ ಎಲ್ಲೆಂದರಲ್ಲಿ ಕಸವನ್ನು ಎಸೆಯಲಾಗುತ್ತಿದ್ದು, ಮಾಲಿನ್ಯ ಉಂಟಾಗುವಂತೆ ಬೆಂಕಿ ಹಾಕಿ ಸುಡಲಾಗುತ್ತಿದೆ.

ಪ್ರತಿ ತಿಂಗಳು ತ್ಯಾಜ್ಯ ವಿಲೇವಾರಿಗೆಂದು ಲಕ್ಷಾಂತರ ರೂ., ಖರ್ಚು ಮಾಡುತ್ತಿದ್ದರೂ ಕಸ ಮಾತ್ರ ನಗರದಿಂದ ಹೊರ ಹೋಗುತ್ತಿಲ್ಲ. ನಗರಸಭೆಯ ಈ ರೀತಿಯ ನಿರ್ಲಕ್ಷ್ಯ ಧೋರಣೆಯಿಂದ ಜನ ದುರ್ನಾತದ ಮಧ್ಯೆಯೇ ಬದುಕುವಂತಾಗಿದೆ. ಕಸದ ಹೆಚ್ಚಳದಿಂದ ಹಂದಿಗಳ ಉಪಟಳ ವಿಪರೀತವಾಗಿದೆ. ಕಾರಣ ಕಸದ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂಬುದು ಜನತೆಯ ಆಗ್ರಹವಾಗಿದೆ.

ನಗರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಕಸ ತುಂಬಿಕೊಂಡು ಹೋಗಿ ಗೌರಾಪುರದ ವಿಲೇವಾರಿ ಘಟಕಕ್ಕೆ ಹಾಕುವ ಬದಲಿಗೆ ನಗರದ ಯಾವುದೋ ಖಾಲಿ ಪ್ರದೇಶದಲ್ಲಿ, ಜನಸಂಚಾರ ಕಡಿಮೆ ಇರುವ ರಸ್ತೆಗಳ ಪಕ್ಕದಲ್ಲಿಯೇ ಸುರಿಯಲಾಗುತ್ತಿದೆ. ಕಸ ವಿಲೇವಾರಿ ನಗರದಲ್ಲಿ ಸಮರ್ಪಕವಾಗಿ ಆಗದೆ ಇರುವುದರಿಂದ ನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ.

•ಶಿವಯೋಗಿ, ನಗರ ನಿವಾಸಿ

ನಗರದ ಕಸವನ್ನು ಸಮೀಪದ ಗೌರಾಪುರದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಒಯ್ದು ಹಾಕಬೇಕು. ಒಂದು ವೇಳೆ ನಗರದಲ್ಲಿಯೇ ಕಸ ಹಾಕುತ್ತಿದ್ದರೆ ಘನತ್ಯಾಜ್ಯ ವಿಲೇವಾರಿ ಘಟಕಕ್ಕೇ ಕಸ ಒಯ್ಯುವಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು.

•ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.