ತಂಬಾಕು ಉತ್ಪನ್ನ ಅನಧಿಕೃತ ಮಾರಾಟಕ್ಕೆ ಕ್ರಮ ಕೈಗೊಳ್ಳಿ


Team Udayavani, May 12, 2019, 4:38 PM IST

hav-2

ಹಾವೇರಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಅನಧಿಕೃತ ಮಾರಾಟ ಕಂಡುಬಂದಲ್ಲಿ ದಾಳಿ ನಡೆಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ನಿಷೇಧಿತ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೂಡಲೇ ದಂಡ ವಿಧಿಸಬೇಕು. 18 ವರ್ಷದೊಳಗಿನ ವ್ಯಕ್ತಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಿಕ್ಷಣ ಸಂಸ್ಥೆಗಳ 100 ಮೀಟರ್‌ ಅಂತರದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ‘ಧೂಮಪಾನ ನಿಷೇಧಿಸಲಾಗಿದೆ’ ಎಂಬ ನಾಮಫಲಕ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚನೆ ನೀಡಬೇಕು. ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟ ಹಾಗೂ ಕಾನೂನು ಉಲ್ಲಂಘನೆ ಪ್ರಕರಣ ಮಾಹಿತಿ ನೀಡಲು ಹೊಸದೊಂದು ಟ್ವಿಟ್ಟರ್‌ ಖಾತೆ ರಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೇಕರಿ ಇತರೆ ದಿನಸಿ ಅಂಗಡಿಗಳಿಗೆ ಸ್ಥಳೀಯ ನಗರಸಭೆ ಹಾಗೂ ಪುರಸಭೆಗಳಿಂದ ಪರವಾನಗಿ ಪಡೆದು, ತಂಬಾಕು ವಸ್ತುಗಳ ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಬೇಕು. ಕಾಲಕಾಲಕ್ಕೆ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧೆಡೆ ದಾಳಿ: ಕಾರ್ಯಕ್ರಮ ಜಿಲ್ಲಾ ಸಲಹೆಗಾರ ಡಾ| ಸಂತೋಷ್‌ ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ 2018-19ನೇ ಸಾಲಿನಿಂದ ಜಿಲ್ಲೆಯಲ್ಲಿ ಜಾರಿಗೆ ಬಂದಿದ್ದು, ಕಳೆದ ಜೂನ್‌ ತಿಂಗಳಿಂದ ಈ ವರೆಗೆ 9 ಕಡೆ ದಾಳಿ ನಡೆಸಿ 70 ಪ್ರಕರಣಗಳನ್ನು ದಾಖಲಿಸಿ 24.500 ರೂ. ದಂಡ ವಸೂಲಿ ಮಾಡಲಾಗಿದೆ. 65 ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 29 ಕಡೆಗಳಲ್ಲಿ ಸಮುದಾಯ ಗುಂಪು ಚರ್ಚೆ ನಡೆಸಲಾಗಿದೆ ಹಾಗೂ ವಿವಿಧ ಕಾರ್ಮಿಕರಿಗೆ ಆರು ಕಡೆಗಳಲ್ಲಿ ತರಬೇತಿ ನೀಡಲಾಗಿದೆ. 800 ಜನರಿಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಶಿಗ್ಗಾವಿ, ಹಾನಗಲ್ಲ ಹಾಗೂ ಹಾವೇರಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ಅನಧಿಕೃತವಾಗಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ| ಜಗದೀಶ ಮಾತನಾಡಿ, ನಗರದ ಕೇಂದ್ರಿಯ ವಿದ್ಯಾಲಯ ಹಾಗೂ ತರಳಬಾಳು ಶಾಲೆಯನ್ನು ತಂಬಾಕು ಮುಕ್ತ ಶಾಲೆ ಎಂದು ಗುರುತಿಸಲಾಗಿದೆ. ತಂಬಾಕು ರಹಿತ ಶಾಲೆಗಳ ಮಾಹಿತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೋರಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಸಭೆಗಳಲ್ಲಿ ಸಹ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಹಾಗೂ ಮೇ 31 ರಂದು ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅಂದು ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್.ಎಸ್‌.ರಾಘವೇಂದ್ರಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭಾಕರ ಕುಂದೂರ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ನಗರಸಭೆ, ಪುರಸಭೆ ಅಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.