ಕೊಟ್ಟಿಗೆಗೆ ಬೆಂಕಿ: ಅಪಾರ ಹಾನಿ
Team Udayavani, May 12, 2019, 5:19 PM IST
ಜೋಯಿಡಾ: ಸಮೀಪದ ಸಂತರಿ ಗ್ರಾಮದ ಪಕ್ಕದ ಜಾಮಗಾಳಿ ಮಜರೆಯ ರತ್ನಾಕರ್ ಸಾವಂತ ಎಂಬ ರೈತನ ದನದ ಕೊಟ್ಟಿಗೆಗೆ ಶನಿವಾರ ರಾತ್ರಿ ಬೆಂಕಿ ಬಿದ್ದ ಪರಿಣಾಮ ಕೊಟ್ಟಿಗೆ ಸಂಪೂರ್ಣ ಸುಟ್ಟುಹೋಗಿದ್ದು, ಅಗ್ನಿಶಾಮಕ ದಳದ ಸಮಯೋಚಿತ ಕರ್ತವ್ಯದಿಂದ ಅಪಾರ ಹಾನಿ ತಪ್ಪಿದೆ. ಸಂಜೆ ಸಮಯದಲ್ಲಿ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಕೊಟ್ಟಿಗೆಯನ್ನು ಆವರಿಸಿತ್ತು. ನಂತರ ಅಲ್ಲಿಗೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಿಂದಿಸುವ ಮೂಲಕ ಅಪಾರ ಹಾನಿ ಸಂಭವಿಸುವುದನ್ನು ತಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಕೊಟ್ಟಿಗೆ ಒಳಗಿರುವ ಸುಮರು 30000 ರೂ.ಗೂ ಹೆಚ್ಚು ಮೌಲ್ಯದ ಒಣಮೇವು ಸುಟ್ಟಿದ್ದು, ಮೆಲ್ಛಾವಣಿ ಸುಟ್ಟು, ಕೊಟ್ಟಿಗೆಗೆ ಹಾಕಿದ ಕಟ್ಟಿಗೆ ಸಾಮಗ್ರಿ, ಇನ್ನಿತರ ವಸ್ತುಗಳು ಬೆಂಕಿಗೆ ತಗುಲಿ ಹಾನಿಗೊಳಗಾಗಿದ್ದು ವರದಿಯಾಗಿದೆ.
ಅಗ್ನಿಶಾಮಕ ಅಧಿಕಾರಿಗಳಾದ ಎಎಸ್ಒ ನವೀನ, ಪ್ರ.ಅ. ಶಾಮಕರಾದ ರವಿಕಾಂತ ನಾಯ್ಕ, ಸಂತೋಷ ರಾಮದುರ್ಗ, ಶಿವಕುಮಾರ ಗುರವ, ಚಾಲಕ ಶಿವಾನಂದ ಹುಗ್ಗಿನವರ ಅಗ್ನಿಶಮನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ
Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.