“ಅದ್ಧೂರಿ-2’ಗೆ ತೆರೆಮರೆಯಲ್ಲಿ ಸಿದ್ಧತೆ!

ಸೀಕ್ವೆಲ್‌ ಚಿತ್ರದ ಬಗ್ಗೆ ನಟ ನಿರಂಜನ್‌ ಹೇಳ್ಳೋದೇನು?

Team Udayavani, May 13, 2019, 3:00 AM IST

niranjan

2012ರಲ್ಲಿ ತೆರೆಗೆ ಬಂದಿದ್ದ “ಅದ್ಧೂರಿ’ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಧ್ರುವ ಸರ್ಜಾ ಎನ್ನುವ ಸರ್ಜಾ ಕುಟುಂಬದ ಹುಡುಗನನ್ನ ಆ್ಯಕ್ಷನ್‌ ಪ್ರಿನ್ಸ್‌ ಆಗಿ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ ಅದು. ಈಗ ಅದೇ “ಅದ್ಧೂರಿ’ ಚಿತ್ರದ ಸೀಕ್ವೆಲ್‌ “ಅದ್ಧೂರಿ-2′ ತೆರೆಗೆ ಬರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಜೋರಾಗಿ ಹರಿದಾಡುತ್ತಿದೆ.

ಅಂದಹಾಗೆ, ಈ ಹಿಂದೆ “ಅದ್ಧೂರಿ’ ಚಿತ್ರವನ್ನು ನಿರ್ಮಿಸಿದ್ದ “ಸಿಎಂಆರ್‌ ಪ್ರೊಡಕ್ಷನ್ಸ್‌” ಬ್ಯಾನರ್‌ನಲ್ಲೇ ಶಂಕರ್‌ ರೆಡ್ಡಿ, ಮೋಹನ್‌ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಈ ಬಾರಿಯ “ಅದ್ಧೂರಿ’ ಚಿತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರವನ್ನು ರಮೇಶ್‌ ವೆಂಕಟೇಶ್‌ ಎಂಬ ನವ ಪ್ರತಿಭೆ ನಿರ್ದೇಶಿಸಲಿದ್ದಾರೆ ಅನ್ನೋದು ಸದ್ಯ ಹರಿದಾಡುತ್ತಿರುವ ಸುದ್ದಿ. ಹಾಗಾದರೆ, ನಿಜಕ್ಕೂ “ಅದ್ಧೂರಿ-2′ ಚಿತ್ರ ತೆರೆಗೆ ಬರಲಿದೆಯಾ? ಚಿತ್ರದಲ್ಲಿ ಯಾರ್ಯಾರು ಇರಲಿದ್ದಾರೆ? ಚಿತ್ರದ ಕಥೆ ಏನು? ಹೀಗೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಹತ್ತಾರು ಪ್ರಶ್ನೆಗಳಿಗೆ ನಟ ನಿರಂಜನ್‌ ಸುಧೀಂದ್ರ ಅವರೇ ಉತ್ತರಿಸಿದ್ದಾರೆ.

ಈ ಬಗ್ಗೆ ಮಾತನಾಡುವ ನಿರಂಜನ್‌, “ಅದ್ಧೂರಿ-2′ ಟೈಟಲ್‌ನಲ್ಲಿ ಅದೇ ಸೀಕ್ವೆಲ್‌ನಲ್ಲಿ ಸಿನಿಮಾ ಮಾಡಲು ತಯಾರಿ ನಡೆಯುತ್ತಿರುವುದೇನೋ ನಿಜ. ಈಗಾಗಲೇ ಅದರ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಒಂದೆರಡು ಸುತ್ತಿನ ಮಾತುಕತೆಯೂ ನಡೆದಿದೆ. ಕಥೆಯ ಎಳೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ. ಕಥೆಯನ್ನು ಕೇಳಿದಾಗ ನನಗೂ ಇಷ್ಟವಾಗಿದೆ.

ಆದರೆ ಸ್ಕ್ರಿಪ್ಟ್ ಮೇಲೆ ಇನ್ನೂ ಒಂದಷ್ಟು ಕೆಲಸ ನಡೆಯುತ್ತಿರುವುದರಿಂದ, ಚಿತ್ರದ ಕಲಾವಿದರು, ತಂತ್ರಜ್ಞರು, ಶೂಟಿಂಗ್‌ ಮತ್ತಿತರ ಯಾವುದೇ ಸಂಗತಿಗಳು ಅಂತಿಮವಾಗಿಲ್ಲ. ಸ್ಕ್ರಿಪ್ಟ್ ಅಂತಿಮವಾದ ಬಳಿಕವಷ್ಟೇ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡಬಹುದು. ಇತರೆ ವಿಷಯಗಳನ್ನು ಹಂಚಿಕೊಳ್ಳಬಹುದು’ ಎನ್ನುತ್ತಾರೆ.

“ಸದ್ಯ “ಅದ್ಧೂರಿ-2′ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ತಿಂಗಳ ಅಂತ್ಯದೊಳಗೆ ಈ ಚಿತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಆಮೇಲೆ ಆ ಚಿತ್ರದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಬಹುದು’ ಎನ್ನುವುದು ನಿರಂಜನ್‌ ಮಾತು.

ಇನ್ನು ಪ್ರಿಯಾಂಕ ಉಪೇಂದ್ರ ಅಭಿನಯದ “ಸೆಕೆಂಡ್‌ ಹಾಫ್’ ಚಿತ್ರದ ಮೂಲಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾದ ನಿರಂಜನ್‌ ಈಗ “ನಮ್‌ ಹುಡುಗ್ರು ಕಥೆ’ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಇದೇ ಸೆಪ್ಟೆಂಬರ್‌ ವೇಳೆಗೆ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ. ಒಟ್ಟಾರೆ “ಅದ್ಧೂರಿ-2′ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಅಂತೆ-ಕಂತೆಗಳಿಗೆ ಸ್ಪಷ್ಟತೆ ಸಿಗಬೇಕಾದರೆ ಇನ್ನೂ ಕೆಲವು ದಿನಗಳು ಕಾಯಬೇಕಾಗುತ್ತದೆ ಅನ್ನೋದು ಚಿತ್ರತಂಡದ ಮೂಲಗಳ ಮಾಹಿತಿ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.