ವರ್ಷಾಂತ್ಯದೊಳಗೆ ಯರಗೋಳು ಯೋಜನೆ ಪೂರ್ಣ

ಜಲಾಶಯ ನಿರ್ಮಾಣ ಶೀಘ್ರ ಪೂರ್ಣಗೊಳಿಸಲು ಸ್ಪೀಕರ್‌ ರಮೇಶ್‌ಕುಮಾರ್‌ ಒತ್ತಡ

Team Udayavani, May 13, 2019, 1:30 PM IST

kolar-tdy-1..

ಕೋಲಾರ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಕುಡಿಯುವ ನೀರು ಒದಗಿಸುವ ಯರಗೋಳು ಯೋಜನೆಯ ಡ್ಯಾಂ ಕಾಮಗಾರಿ ಭರದಿಂದ ನಡೆದಿದೆ.

ಕೋಲಾರ: ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮತ್ತು ಶುದ್ಧ ನೀರು ಒದಗಿಸುವ ಧ್ಯೇಯದೊಂದಿಗೆ ಬಂಗಾರಪೇಟೆ ತಾಲೂಕಿನ ಯರ್ರಗೋಳ್‌ನಲ್ಲಿ ನಿರ್ಮಿಸಲಾಗುತ್ತಿರುವ ಯರಗೋಳ್‌ ಡ್ಯಾಂ ಕಾಮಗಾರಿ ಭರದಿಂದ ಸಾಗಿದ್ದು, ವರ್ಷದ ಅಂತ್ಯದೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

ಬಂಗಾರಪೇಟೆ, ಮಾಲೂರು ಮತ್ತು ಕೋಲಾರ ನಗರ ಮತ್ತು ಪಟ್ಟಣ ಹಾಗೂ ಮಾರ್ಗಮದ್ಯದ 45 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಲು 258 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿತ್ತು. 168 ಕೋಟಿ ರೂ. ಡ್ಯಾಂ ಕಾಮಗಾರಿಗೆ ಮೀಸಲಿಡಲಾಗಿದೆ. 2006ರಲ್ಲಿ ಡ್ಯಾಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. 2013ರಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. 1 ವರ್ಷದ ಒಳಗೆ ಯೋಜನೆ ಪೂರ್ಣಗೊಳ್ಳಬೇಕಾಗಿತ್ತಾದರೂ ತಾಂತ್ರಿಕ ಕಾರಣದಿಂದ ನನೆಗುದಿಗೆ ಬಿದ್ದಿತ್ತು.

2004ರಲ್ಲಿ ಶಂಕುಸ್ಥಾಪನೆಯಾಗಿದ್ದ ಕಾಮಗಾರಿ ಆಮೆಗತಿಯಲ್ಲಿ ನಡೆದಿದ್ದು, ಈ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಆರ್‌.ರಮೇಶ್‌ಕುಮಾರ್‌ ಯೋಜನೆ ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಮುತುವರ್ಜಿ ತೋರಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಸೇರಿದಂತೆ ಯೋಜನೆ ವ್ಯಾಪ್ತಿಗೆ ಬರುವ ಶಾಸಕರೊಂದಿಗೆ ಸಭೆ ನಡೆಸಿ ಗುತ್ತಿಗೆದಾರರಿಗೆ ಕಾಮಗಾರಿ ಕೈಗೆತ್ತಿಕೊಳ್ಳಲು ಬೇಕಾದ ಎಲ್ಲ ರೀತಿಯ ಸಹಕಾರ ನೀಡಿದ್ದರು.

ತೆಲಂಗಾಣ ರಾಜ್ಯದ ಶಾಸಕ ವೇಣುಗೋಪಾಲರೆಡ್ಡಿ ಈ ಯೋಜನೆಯ ಗುತ್ತಿಗೆದಾರರಾಗಿದ್ದು, ಸ್ಪೀಕರ್‌ ರಮೇಶ್‌ಕುಮಾರ್‌ ಅವರ ಸೂಚನೆ ಮೇರೆಗೆ ಕಾಮಗಾರಿಯ ವೇಗ ಹೆಚ್ಚಿಸಿದ್ದಾರಲ್ಲದೆ ಈ ವರ್ಷದ ಅಂತ್ಯದೊಳಗೆ ಡ್ಯಾಂ ಕಾಮಗಾರಿ ಮುಗಿಸುವುದಾಗಿ ಭರವಸೆ ನೀಡಿದ್ದಾರೆ.

ಕಳೆದ ಜನವರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸ್ಪೀಕರ್‌ ರಮೇಶ್‌ಕುಮಾರ್‌, ಯುಗಾದಿಯೊಳಗೆ ಡ್ಯಾಂ ಕಾಮಗಾರಿ ಪುರ್ಣಗೊಳಿಸಬೇಕೆಂಬ ಆಶಯ ವ್ಯಕ್ತಪಡಿಸಿದ್ದರು. ಈ ಸಂಬಂಧ ಮಾರ್ಚ್‌ ತಿಂಗಳಲ್ಲಿ ಮತ್ತೂಂದು ಪ್ರಗತಿ ಪರಿಶೀಲನಾ ಸಭೆ ನಡೆಸಲು ತೀರ್ಮಾನಿಸಿದ್ದರಾದರೂ ಲೋಕಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ಪ್ರಸ್ತುತ ಶೇ.50ರಷ್ಟು ಕಾಮಗಾರಿ ಮುಕ್ತಾಯಗೊಂಡಿದ್ದು, ದಿನಕ್ಕೆ 500 ಕ್ಯೂಬಿಕ್‌ ಮೀಟರ್‌ನಷ್ಟು ಕಾಂಕ್ರಿಟ್ ಕಾಮಗಾರಿ ಮುಗಿಸಿದಲ್ಲಿ ಇನ್ನು ಮೂರು ತಿಂಗಳಲ್ಲಿ ಡ್ಯಾಂ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಗಳಿದೆ.

ಜೂನ್‌ ಮೊದಲ ವಾರದಲ್ಲಿ ಸ್ಪೀಕರ್‌ ರಮೇಶ್‌ಕುಮಾರ್‌ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವ ಸಾಧ್ಯತೆ ಇರುವುದರಿಂದ ಕೆಲಸ ಚುರುಕುಗೊಳಿಸಲಾಗಿದೆ.

ಡ್ಯಾಂ ಕಾಮಗಾರಿ ಈ ವರ್ಷದ ಅಂತ್ಯದೊಳಗಡೆ ಪೂರ್ಣಗೊಳ್ಳುವುದರ ಒಳಗೆ ಬಂಗಾರಪೇಟೆಯಲ್ಲಿ ಪಂಪ್‌ಹೌಸ್‌ ನಿರ್ಮಾಣ ಕಾರ್ಯ ಮುಗಿಯದಿದ್ದರೆ ಮಳೆಗಾಲದಲ್ಲಿ ಸಂಗ್ರಹವಾಗಲಿರುವ ನೀರು ವ್ಯರ್ಥವಾಗುವ ಸಾಧ್ಯತೆಗಳಿವೆ.

ಬಂಗಾರಪೇಟೆ-ಬೂದಿಕೋಟೆ ಮಾರ್ಗದಲ್ಲಿನ ರೈಲ್ವೆ ಗೇಟ್ ಮೂಲಕ ಪೈಪ್‌ಲೈನ್‌ ಹಾದುಹೋಗಬೇಕಾಗಿದ್ದು, ರೈಲ್ವೆ ಇಲಾಖೆಯಿಂದ ಇನ್ನೂ ಅನುಮತಿ ಸಿಗದಿರುವುದರಿಂದ ನೀರು ಸರಬರಾಜು ಕಾರ್ಯ ವಿಳಂಭವಾಗುವ ಆತಂಕ ಎದುರಾಗಿರುವುದರಿಂದ ಕೇಂದ್ರದ ಮೇಲೆ ಒತ್ತಡ ತರುವ ಜವಾಬ್ದಾರಿ ನೂತನ ಸಂಸದರ ಮೇಲಿದೆ.

ಈ ವರ್ಷದ ಅಂತ್ಯದೊಳಗೆ ಯರ್ರಗೋಳ್‌ ಯೋಜನೆಯ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಮೂಡಿದೆ. ಡ್ಯಾಂ ಕಾಮಗಾರಿ ಪೂರ್ಣ0ಗೊಂಡರೆ ಸಾಲದು, ಉಳಿದ ಕಾಮಗಾರಿಗೆ ತ್ವರಿತಗತಿಯಲ್ಲಿ ಚಾಲನೆ ನೀಡಬೇಕಾಗಿದೆ. ಪಂಪ್‌ಹೌಸ್‌ ನಿರ್ಮಾಣದ ಜತೆಗೆ ಪವರ್‌ಲೈನ್‌ ಅಳವಡಿಕೆ ಕೆಲಸ ಜೊತೆಜೊತೆಯಾಗಿ ಕೈಗೆತ್ತಿಕೊಳ್ಳಬೇಕು ಎಂಬುದು ಜನರ ಆಗ್ರಹವಾಗಿದೆ.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.