ಸೋಲು-ಗೆಲುವು ಸಮನಾಗಿ ಸ್ವೀಕರಿಸಿ


Team Udayavani, May 13, 2019, 2:16 PM IST

bel-2

ಚಿಕ್ಕೋಡಿ: ಸೋಲು-ಗೆಲುವು ಒಂದೆ ನಾಣ್ಯದ ಎರಡು ಮುಖಗಳಿದ್ದಂತೆ, ಎರಡನ್ನೂ ಸಮಾನಾಗಿ ಸ್ವೀಕರಿಸಬೇಕು ಎಂದು ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಪಿ.ವಿ. ಕಡಗಡಕಾಯಿ ಹೇಳಿದರು.

ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ ರೆಸ್ಟ್‌ ಆಫ್‌ ಬೆಂಗಳೂರು ವಿ.ಟಿ.ಯು. ಮಹಿಳೆಯರ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿ, ಮಹಿಳಾ ಸಬಲೀಕರಣದಲ್ಲಿ ಮಹಿಳಾ ಕಬಡ್ಡಿ ಆಟವೂ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಪ್ರಾಚಾರ್ಯ ಡಾ| ಪ್ರಕಾಶ ಹುಬ್ಬಳ್ಳಿ ಮಾತನಾಡಿ, ಆರೋಗ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿದಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದುತ್ತಾರೆ ಎಂದರು.

ಸಂಸ್ಥೆಯ ಉಪಕಾರ್ಯಾಧ್ಯಕ್ಷ ಪಪ್ಪುಅಣ್ಣಾ ಪಾಟೀಲ ಮಾತನಾಡಿ, ಹಳ್ಳಿಯ ಸೊಗಡನ್ನು ಸೂಚಿಸುವ ಕಬಡ್ಡಿ ಆಟ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಪಠ್ಯೇತರದೊಂದಿಗೆ ಕ್ರೀಡೆಗಳಲ್ಲೂ ಹಿತಾಸಕಿ ತೋರಿಸಬೇಕು ಎಂದರು.

ಸಂಚಾಲಕ ಸಂಜಯ ಮೊಳವಾಡೆ, ಎಸ್‌.ಜಿ. ಕಲ್ಯಾಣಶೆಟ್ಟಿ, ವಿನಾಯಕ ಢೋಲೆ, ದೈಹಿಕ ಶಿಕ್ಷಣ ನಿರ್ದೇಶಕ ಶಶಿರಾಜ ತೇಲಿ ವೇದಿಕೆಯಲ್ಲಿದ್ದರು. ದೈಹಿಕ ನಿರ್ದೇಶಕಿ ಸಂಗೀತಾ ಕರಾಳೆ, ಪ್ರೊ| ಸಂಪತ್‌ ಬಿಜಲೆ, ಪ್ರೊ| ಸಂದೇಶ ಮನೋಚಾರ್ಯ, ಪ್ರೊ| ಅನುಪ ಪಾಟೀಲ, ಪ್ರೊ| ಮಲ್ಲಿಕಾರ್ಜುನ ಸರ್ಸಾಂಬಾ, ಪ್ರೊ| ಸಚಿನ ಮೆಹತಾ ಇತರರು ಇದ್ದರು. ಚಿನ್ನಮ್ಮ ಹಪ್ಪಳ್ಳಿ ಸ್ವಾಗತಿಸಿದರು. ಕಾವೇರಿ ಜಾಲಿಸತ್ತಿಗೆ ಮತ್ತು ಸ್ನೇಹಲ್ ಭೋಲೆ ನಿರೂಪಿಸಿದರು.

ಆಳ್ವಾಸ್‌ ಐ.ಟಿ. ತಂಡಕ್ಕೆ ಜಯ

ಸ್ಪರ್ಧೆಯಲ್ಲಿ ಸ್ಥಳೀಯ ವಿ.ಎಸ್‌.ಎಂ.ಎಸ್‌.ಆರ್‌.ಕೆ.ಐ.ಟಿ., ಮೈಸೂರಿನ ಜಿ.ಎಸ್‌.ಎಸ್‌.ಎಸ್‌.ಐ.ಇ.ಟಿ.ಡಬ್ಲ್ತ್ರ್ಯೂ., ಸುಳ್ಳೆಯ ಕೆ.ವಿ.ಜಿ.ಸಿ.ಇ., ಉಜಿರೆಯ ಎಸ್‌.ಡಿ.ಎಂ.ಸಿ., ಮೂಡಬಿದಿರೆಯ ವೈ.ಐ.ಟಿ. ಮತ್ತು ಆಳ್ವಾಸ್‌ ಐ.ಟಿ. ಕಾಲೇಜುಗಳು ಭಾಗವಹಿಸಿದ್ದವು. ಅಂತಿಮ ಪಂದ್ಯದಲ್ಲಿ ಆಳ್ವಾಸ್‌ ಐ.ಟಿ. ತಂಡವು ವೈ.ಐ.ಟಿ. ತಂಡಕ್ಕೆ 38-25 ಅಂಕಗಳಿಂದ ಸೋಲಿಸಿ ರೆಸ್ಟ್‌ ಆಫ್‌ ಬೆಂಗಳೂರು ವಿ.ಟಿ.ಯು. ಮಹಿಳೆಯರ ಕಬಡ್ಡಿ ಟೂರ್ನಿ ಪ್ರಶಸ್ತಿಯನ್ನು ಬಾಚಿಕೊಂಡಿತು. ಬಿ.ಸಿ. ಹರ್ಲಾಪುರ, ಬಿ.ಜಿ. ಬಾಣೆ, ಎಸ್‌.ಎಲ್. ಪ್ರಭಾತ, ಶರಣು ಹತ್ತಿ, ಅಭಿಷೇಕ ಚುನಮುರೆ, ಶಿವಾನಂದ ತೇಲಿ ನಿರ್ಣಾಯಕತಾಗಿ ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.