ಮೂಢನಂಬಿಕೆ ಮಟ್ಟ ಹಾಕಲು ಪವಾಡ ರಹಸ್ಯ ಬಯಲು


Team Udayavani, May 13, 2019, 3:56 PM IST

hav-3

ಹಾವೇರಿ: ಮೂಢನಂಬಿಕೆ ಮಟ್ಟಹಾಕಲು, ಮುಗ್ಧ ಜನರು ಮೋಸ ಹೋಗದಂತೆ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಲು ಪವಾಡ ರಹಸ್ಯ ಬಯಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಶಿಕ್ಷಕ ಆರ್‌.ಸಿ. ನಂದಿಹಳ್ಳಿ ಹೇಳಿದರು.

ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಬ್ಯಾಡಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಆಶಾಕಿರಣ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಬ್ಯಾಡಗಿ ರಂಗಮಂದಿರದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರದಲ್ಲಿ ನಡೆದ ಪವಾಡ ಬಯಲು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿರಂತರವಾಗಿ ಜಾಗೃತಿ ಮೂಡಿಸಲು ಪವಾಡ ಬಯಲು ಕಾರ್ಯಕ್ರಮ ಸಹಕಾರಿಯಾಗಿದೆ. ಅಲ್ಲದೇ ಮಕ್ಕಳಲ್ಲಿ ವೈಜ್ಞಾನಿಕವಾಗಿ ಚಿಂತನ-ಮಂಥನ ಮಾಡಲು ಹಾಗೂ ವಿಜ್ಞಾನ ವಿಷಯದಲ್ಲಿ ಆಸಕ್ತಿದಾಯಕ ಕಲಿಕೆಗೆ ಪೂರಕವಾಗಿದೆ ಎಂದರು.

ಆಶಾಕಿರಣ ಸಂಸ್ಥೆಯ ಅಧ್ಯಕ್ಷ ಮುತ್ತುರಾಜ ಮಾದರ ಮಾತನಾಡಿ, ಮೂಢನಂಬಿಕೆ ಎಂದ ತಕ್ಷಣ ನಮಗೆ ನೆನೆಪಾಗುವುದು ಮಾಟ, ಮಂತ್ರ, ದೆವ್ವ, ಭೂತಾರಾಧನೆ, ಬೆಕ್ಕು ಅಡ್ಡ ಹೊಯಿತು, ಸೀನು, ಕುರಿ-ಕೋಣ ಬಲಿಕೊಡುವುದು, ನೋಡಿದ ತಕ್ಷಣ ಬೆಂಕಿ ಹತ್ತುವುದು, ಮಂತ್ರದ ನಿಂಬೆಹಣ್ಣು ಮುಂತಾದ ಹತ್ತು ಹಲವಾರು ಕಂದಾಚಾರಗಳಿಗೆ ಮುಗ್ಧ ಜನ ಬಲಿಯಾಗುತ್ತಿದ್ದಾರೆ. ಡೋಂಘಿ ಬಾಬಾಗಳಿಂದ ಹಾಗೂ ಸ್ವಯಂಘೋಷಿತ ದೇವಮಾನವರಿಂದ ಮುಗ್ಧ ಮಹಿಳೆಯರು, ಅಮಾಯಕರು ಮೋಸಕ್ಕೆ ಒಳಗಾಗುತ್ತಿದ್ದಾರೆ, ಇವೆಲ್ಲವುಗಳ ಜಾಗೃತಿಗಾಗಿ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಉಪಯುಕ್ತ ಎಂದರು.

ಪವಾಡ ರಹಸ್ಯ ಬಯಲು: ತೆಂಗಿನ ಕಾಯಿಯಲ್ಲಿ ಹೂವು ಬರುವುದು, ನಿಂಬೆ ಹಣ್ಣಿನಲ್ಲಿ ರಕ್ತ ಬರುವುದು, ಬೆಂಕಿ-ಕರ್ಪೂರ ಬಾಯಲ್ಲಿ ಬೆಳಗುವುದು, ಗಾಳಿಯಲ್ಲಿ ವಿಭೂತಿ, ಚೈನು, ಉಂಗುರ ಸೃಷ್ಟಿಸುವುದು, ಮುಟ್ಟಿದ್ದೆಲ್ಲ ಸಿಹಿ ಮಾಡುವುದು, ಕೊಳ್ಳಿ ದೆವ್ವ, ಮೈಯಲ್ಲಿ ಶಸ್ತ್ರ ಹಾಕಿಕೊಳ್ಳುವುದು ಹೀಗೆ ಮುಂತಾದವುಗಳನ್ನು ಕಡಿವಾಣ ಹಾಕುವ ಸಲುವಾಗಿ ವೈಜ್ಞಾನಿಕ ಕ್ರಿಯೆಯಿಂದ ಜರುಗುವ ಅದರಲ್ಲಿ ಅಡಗಿರುವ ನಿಜವಾದ ರೂಪ ತೋರಿಸಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಎಂ.ಡಿ. ಚಿಕ್ಕಣ್ಣನವರ, ಸಂಪನ್ಮೂಲ ವ್ಯಕ್ತಿಗಳಾದ ಶ್ಯಾಮ್‌, ರಾಧಾ, ರಮೇಶ ನಾಯ್ಕ, ಮಂಗಳಾ ಮತ್ತು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ

ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ

ಗಣೇಶೋತ್ಸವ ಹಿಂದೂ ಧರ್ಮದ ಜಾಗೃತಿಯ ಸಂಕೇತ-ಸ್ವಾಮಿ ಪ್ರಕಾಶಾನಂದಜಿ

ಗಣೇಶೋತ್ಸವ ಹಿಂದೂ ಧರ್ಮದ ಜಾಗೃತಿಯ ಸಂಕೇತ-ಸ್ವಾಮಿ ಪ್ರಕಾಶಾನಂದಜಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.