ನಿರ್ದೇಶನದತ್ತ ವಿಜಯ್
ಸಲಗ ಚಿತ್ರಕ್ಕೆ ಆ್ಯಕ್ಷನ್-ಕಟ್
Team Udayavani, May 14, 2019, 3:00 AM IST
ದುನಿಯಾ ವಿಜಯ್ ಮತ್ತೆ ಟ್ರ್ಯಾಕ್ಗೆ ಮರಳಿದ್ದಾರೆ. ಇತ್ತೀಚೆಗೆ ನಾನಾ ಕಾರಣಗಳಿಗಾಗಿ ಸುದ್ದಿಯಾಗಿದ್ದ ವಿಜಯ ಈ ಬಾರಿ ಸಿನಿಮಾದಿಂದಲೇ ಸುದ್ದಿಯಲ್ಲಿದ್ದಾರೆ. ಅದು ಸಿನಿಮಾದಲ್ಲೇ ಹೊಸ ಆಯಾಮಕ್ಕೆ ತೆರೆದುಕೊಳ್ಳುವ ಮೂಲಕ. ಹೌದು, ವಿಜಯ್ ಈಗ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಹಾಗಂತ ಬೇರೆಯವರಿಗೆ ಅವರು ನಿರ್ದೇಶನ ಮಾಡುತ್ತಿಲ್ಲ.
ತಾವೇ ನಾಯಕರಾಗಿ ನಟಿಸುತ್ತಿರುವ “ಸಲಗ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಲು ಮುಂದಾಗಿದ್ದಾರೆ. ಈ ಮೂಲಕ ಚಿತ್ರರಂಗದ ಮತ್ತೂಂದು ಮಗ್ಗುಲಿಗೆ ವಿಜಯ್ ತೆರೆದುಕೊಂಡಿದ್ದಾರೆ. ಈಗಾಗಲೇ ಕಥೆ, ಚಿತ್ರಕಥೆ ಎಲ್ಲವನ್ನು ಪಕ್ಕಾ ಮಾಡಿಕೊಂಡಿರುವ ವಿಜಯ್, ನಿರ್ದೇಶನದ ತಯಾರಿಯಲ್ಲಿ ತೊಡಗಿದ್ದಾರೆ. ಆರಂಭದಲ್ಲಿ ವಿಜಯ್ “ಕುಸ್ತಿ’ ಚಿತ್ರದಲ್ಲಿ ನಟಿಸಲು ಮುಂದಾಗಿದ್ದು, ಈ ಚಿತ್ರವನ್ನು ರಾಘು ಶಿವಮೊಗ್ಗ ನಿರ್ದೇಶಿಸುತ್ತಾರೆನ್ನಲಾಗಿತ್ತು.
ಆ ನಂತರ “ಸಲಗ’ ಅನೌನ್ಸ್ ಆದಾಗಲೂ ರಾಘು ಅವರ ಹೆಸರೇ ಕೇಳಿಬಂದಿತ್ತು. ನಂತರ ಆ ಚಿತ್ರದಿಂದ ರಾಘು ಹೊರಬಂದಾಗ ಎದ್ದ ಪ್ರಶ್ನೆ ಎಂದರೆ “ಸಲಗ’ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂಬುದು. ಸಾಕಷ್ಟು ಚರ್ಚೆಗಳ ಬಳಿಕ ಸ್ವತಃ ವಿಜಯ್ ಈ ಸಿನಿಮಾವನ್ನು ನಿರ್ದೇಶಿಸುವ ಮನಸ್ಸು ಮಾಡಿದ್ದಾರೆ.
ಆರಂಭದಲ್ಲಿ ಈ ಚಿತ್ರದ ನಿರ್ಮಾಣದ ಹೊಣೆಯನ್ನು ವಿಜಯ್ ಹೊತ್ತುಕೊಂಡಿದ್ದರು. ಆದರೆ, ಈಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್ “ಸಲಗ’ ನಿರ್ಮಿಸಲು ಮುಂದಾಗಿರುವುದರಿಂದ ವಿಜಯ್, ನಿರ್ದೇಶನದತ್ತ ವಾಲಿದ್ದಾರೆ. “ಸಲಗ’ ಒಂದು ಔಟ್ ಅಂಡ್ ಔಟ್ ಮಾಸ್ ಸಬ್ಜೆಕ್ಟ್ ಆಗಿದ್ದು, ಈ ಮೂಲಕ ವಿಜಯ್ ಮತ್ತೂಮ್ಮೆ ಮಾಸ್ ಹೀರೋ ಆಗಿ ಮಿಂಚಲಿದ್ದಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.
ಈ ಚಿತ್ರದಲ್ಲಿ ವಿಜಯ್ ಗೆಟಪ್ ಕೂಡಾ ಭಿನ್ನವಾಗಿರಲಿದೆಯಂತೆ. ವಿಭಿನ್ನ ಶೇಡ್ನಲ್ಲಿ ಕಾಣಿಸಿಕೊಳ್ಳಲಿರುವ ವಿಜಯ್, ನಿರ್ದೇಶನದ ಜೊತೆಗೆ ಪಾತ್ರ ಪೋಷಣೆಗೂಹೆಚ್ಚಿನ ತಯಾರಿ ನಡೆಸುತ್ತಿದ್ದಾರಂತೆ. ಚಿತ್ರಕ್ಕೆ ನಾಯಕಿ ಇನ್ನಷ್ಟೇ ಆಯ್ಕೆಯಾಗಬೇಕಿದೆ. ಉಳಿದಂತೆ ಚಿತ್ರದಲ್ಲಿ ಧನಂಜಯ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಟಗರು’ ಚಿತ್ರಕ್ಕೆ ಸಂಗೀತ ನೀಡಿದ ಚರಣ್ರಾಜ್ ಅವರ ಸಂಗೀತ ಚಿತ್ರಕ್ಕಿದೆ. ಜೂನ್ನಿಂದ “ಸಲಗ’ ಚಿತ್ರೀಕರಣಕ್ಕೆ ಹೊರಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ
Seetha Payana: ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್ ಹೀರೋ
Chethan Kumar: ನಟ ಚೇತನ್ ವಿರುದ್ಧದ ವಾರಂಟ್ ಹಿಂಪಡೆದ ಕೋರ್ಟ್
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.