ಸಾವಿಗೆ ಆಹ್ವಾನ ನೀಡುವಂತಿರುವ ವಿದ್ಯುತ್‌ ಕಂಬಗಳು


Team Udayavani, May 14, 2019, 3:00 AM IST

savige

ಕೊಳ್ಳೇಗಾಲ: ನಗರದ ಪಾಪನಕೆರೆ ಸಮೀಪದಲ್ಲಿರುವ ರೈತರ ಜಮೀನುಗಳ ಮೇಲೆ ವಿದ್ಯುತ್‌ ಕಂಬ ಅಳವಡಿಸಿದ್ದು, ಕಂಬ ಮುರಿದು ತಂತಿ ಸಮೇತ ಜಮೀನಿಗೆ ಬಿದ್ದು ವಿದ್ಯುತ್‌ ಹರಿದು ರೈತನ್ನು ಸಾವಿಗೆ ಆಹ್ವಾನಿಸುವಂತಿದೆ. ಕೂಡಲೇ ಸೆಸ್ಕ್ ನಿಗಮದ ಅಧಿಕಾರಿಗಳು ವಿದ್ಯುತ್‌ ಕಂಬಗಳನ್ನು ಸರಿಪಡಿಸಿ ಸಾವಿಗೆ ಆಹ್ವಾನ ನೀಡುವಂತಿರುವ ಕಂಬವನ್ನು ಬದಲಾಯಿಸಿ ರೈತರ ಜೀವ ಕಾಪಾಡಬೇಕಾಗಿದೆ.

ಪಾಪನಕೆರೆಯ ಮೂಡಲ ಕೋಡಿ ಅರಿಗಿನಲ್ಲಿ ಸೆಸ್ಕ್ ನಿಗಮದವರು ಅಳವಡಿಸಿರುವ ವಿದ್ಯುತ್‌ ಕಂಬ ತುದಿಯ ಭಾಗ ಮುರಿದು ಹೋಗಿದ್ದು, ಯಾವುದೇ ಕ್ಷಣದಲ್ಲಿ ತಂತಿಯೊಂದಿಗೆ ನೆಲಕ್ಕೆ ಉರುಳುವಂತೆ ಇದ್ದು, ಆಕಸ್ಮಿಕವಾಗಿ ರೈತರು ಬೆಳಂಬೆಳಗ್ಗೆ ಜಮೀನು ವೀಕ್ಷಣೆಗೆಂದು ಬಂದ ವೇಳೆಯಲ್ಲಿ ಆಕಸ್ಮಿಕವಾಗಿ ತಂತಿ ಸ್ಪರ್ಶಿಸಿದಾಗ ರೈತರು ಸಾವಿಗೀಡಾಗುವಂತೆ ಇದ್ದು, ಕೂಡಲೇ ರೈತರ ಪ್ರಾಣ ಉಳಿಸುವ ಕೆಲಸ ಆಗಬೇಕು.

ಮುನ್ಸೂಚನೆಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಇತ್ತೀಚಿಗೆ ರೈತರು ವಿವಿಧ ಬೆಳೆಗಳನ್ನು ಬೆಳೆಯುವ ಸಲುವಾಗಿ ಬ್ಯಾಂಕ್‌ಗಳಲ್ಲಿ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಫ‌ಸಲಿನಿಂದ ಯಾವುದೇ ತರಹದ ಲಾಭ ಸಿಗದೆ ನಷ್ಟಕ್ಕೆ ಒಳಗಾಗಿ ಪಡೆದ ಸಾಲ ತೀರಿಸಲಾಗದೆ ವಿಷ ಸೇವನೆ ಮತ್ತು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗುತ್ತಿರುವ ಬೆನ್ನಲ್ಲೇ ಸೆಸ್ಕ್ ಇಲಾಖೆಯಿಂದ ಮುರಿದು ಬೀಳುವ ವಿದ್ಯುತ್‌ ಕಂಬದ ತಂತಿಯಿಂದ ರೈತರು ಅಪಾರ ಸಾವು- ನೋವಿಗೆ ಒಳಗಾಗುವ ಮುನ್ಸೂಚನೆ ಕಂಬ ತುದಿ ಮುರಿದಿರುವುದೇ ಸಾಕ್ಷಿಯಾಗಿದೆ.

ವಿದ್ಯುತ್‌ ಕಂಬ ಮುರಿದರೆ ಅಪಾಯ: ಮೂಡಲಕೋಡಿ ಬಳಿ ಇರುವ ಸಾವಿರಾರು ಎಕರೆ ಜಮೀನುಗಳಲ್ಲಿ ವಿವಿಧ ಫ‌ಸಲುಗಳನ್ನು ಹಾಕಲಾಗಿದೆ. ಬೇಸಿಗೆಯಲ್ಲಿ ಸರಿಯಾದ ಮಳೆಯಾಗದೆ ರೈತರು ತಮ್ಮ ಜಮೀನುಗಳಲ್ಲಿರುವ ಪಂಪ್‌ಸೆಟ್‌ಗಳ ಮೂಲಕ ನೀರು ಹರಸಿಕೊಂಡು ಬೆಳೆಗಳನ್ನು ಬೆಳೆಯಲು ಮುಂದಾಗಿರುವ ಸಂದರ್ಭದಲ್ಲಿ ವಿದ್ಯುತ್‌ ಕಂಬ ಮುರಿದು ಬಿದ್ದು, ಅನಾಹುತ ಸಂಭವಿಸಿದರೆ ಸೆಸ್ಕ್ ಇಲಾಖೆಯ ಅಧಿಕಾರಿಗಳೇ ನೇರ ಹೊಣೆಗಾರರು ಆಗಬೇಕಾಗುತ್ತದೆ ಎಂದು ರೈತರ ಒತ್ತಾಯವಾಗಿದೆ.

ರೈತರ ಒತ್ತಾಯ: ಮೂಡಲಕೋಡಿ ಬಳಿ ಅಳವಡಿಸಿರುವ ವಿದ್ಯುತ್‌ ಕಂಬದ ತುದಿ ಮುರಿದು ತಂತಿ ಸಮೇತ ಜಮೀನಿಗೆ ಉರುಳುವಂತೆ ಆಗಿದೆ. ಅದೇ ಕಂಬದ ಪಕ್ಕದಲ್ಲೊಂದು ಕಂಬವು ಮತ್ತೂಂದು ದಿಕ್ಕಿಗೆ ಬಾಗಿದ್ದು, ಜಮೀನುಗಳಿಗೆ ರೈತರು ಕಾಲಿಡಲು ಭಯವಾಗುತ್ತಿದೆ. ಕೂಡಲೇ ಸೆಸ್ಕ್ ನಿಗಮದ ಅಧಿಕಾರಿಗಳು ಮುರಿದಿರುವ ಕಂಬವನ್ನು ಬದಲಾಯಿಸಿ ರೈತರ ಜೀವ ಕಾಪಾಡಬೇಕೆಂದು ರೈತ ಮುಖಂಡ ಚಿನ್ನಸ್ವಾಮಿ ಮಾಳಿಗೆ ಒತ್ತಾಯಿಸಿದ್ದಾರೆ.

ಪ್ರತಿ ಭಾನುವಾರ ವಿದ್ಯುತ್‌ ಕಂಬಗಳ ಜೋಡಣೆ ಮತ್ತು ತಂತಿ ನಿರ್ಮಾಣ ಹಾಗೂ ಜಂಗಲ್‌ ಕಟ್ಟಿಂಗ್‌ ಮಾಡುತ್ತಿದ್ದು, ಮೂಡಲಕೋಡಿ ಬಳಿ ಇರುವ ವಿದ್ಯುತ್‌ ಕಂಬ ತುದಿ ಮುರಿದು ಬಿದ್ದು, ತಂತಿಯು ಸಹ ಜಮೀನಿಗೆ ಬೀಳುವ ಸ್ಥಳದಲ್ಲಿ ಇದ್ದು, ಈ ಭಾನುವಾರ ಕಂಬ ಬದಲಾಯಿಸಿ, ರೈತರಿಗೆ ಯಾವುದೇ ತರಹದ ಅನಾಹುತ ಆಗದಂತೆ ಕ್ರಮ ಕೈಗೊಳ್ಳಲಾಗುವುದು.
-ಲಿಂಗರಾಜು, ಸೆಸ್ಕ್ ನಿಗಮದ ಕಾರ್ಯಪಾಲಕ ಸಹಾಯಕ ಅಭಿಯಂತರ

* ಡಿ.ನಟರಾಜು

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.