ಗಾಳಿ ಮಳೆಗೆ ಕುಸಿದ ಮನೆಗಳು: ಅಪಾರ ನಷ್ಟ

ನೀರಿನ ಸಮಸ್ಯೆ ನಿವಾರಣೆಗೆ ನೋಡೆಲ್‌ ಅಧಿಕಾರಿಗಳ ನೇಮಕ

Team Udayavani, May 14, 2019, 9:45 AM IST

hasan-tdy-2..

ಹೊಳೆನರಸೀಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ಅತಿವೃಷ್ಟಿ ಅನಾವೃಷಿ ತುರ್ತುಸಭೆ ನಡೆಸಿದರು.

ಹೊಳೆನರಸೀಪುರ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಗಳು ಕುಸಿದು ಅಪಾರ ನಷ್ಟವಾಗಿದೆ ಎಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ನುಡಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ಸಾಕಷ್ಟು ನಷ್ಟಕ್ಕೆ ಕಾರಣ ವಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಬಾರದೇ ಕುಡಿಯುವ ನೀರಿನ ಕೊರತೆಯಿಂದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮೂರು ಹೋಬಳಿ ಗಳಿಗೆ ಮೂವರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಸಂಪೂರ್ಣ ತನಿಕೆ ನಡೆಸಿ ಪೂರ್ಣ ಮಾಹಿತಿ ನೀಡಿ ಸಂಕಷ್ಟದಲ್ಲಿರುವ ಜನತೆಗೆ ಸಹಕಾರ ನೀಡಲು ಮುಂದಾಗ ಬೇಕೆಂದು ಮನವಿ ಮಾತನಾಡಿದರು.

ನೋಡೆಲ್ ಅಧಿಕಾರಿಗಳ ನೇಮಕ: ತಾಲೂಕಿ ನಲ್ಲಿ ಮುಂಗಾರು ಮಳೆಯಿಂದಾಗಿ ಸಂಭವಿಸ ಬಹುದಾದ ನಷ್ಟಗಳನ್ನು ತಡೆಯಲು ಮುನ್ನೆಚ್ಚ ರಿಗೆ ಕ್ರಮವಾಗಿ ಮೂರು ಹೋಬಳಿಗಳಿಗೂ ಒಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

ತಾಲೂಕಿನ ಕಸಬಾ ಹೋಬಳಿಗೆ ಪಶು ಸಂಗೋಪನಾ ಇಲಾಖೆಯ ವೈದ್ಯ ಡಾ.ತಿಪ್ಪೇ ಸ್ವಾಮಿ, ಹಳೇಕೋಟೆ ಹೋಬಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಲಿಂಗು ಹಾಗು ಹಳ್ಳಿಮೈಸೂರು ಹೋಬಳಿಗೆ ಲೊಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನ್‌ ಅವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಯಿತು.

ಮಳೆಯಿಂದ ಮನೆಗಳಿಗೆ ಹಾನಿ: ಈಗಾಗಲೇ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ತಾಲೂಕಿನ ಅತ್ತಿಚೌಡೇನಹಳ್ಳಿ ಗ್ರಾಮದ ಸುಬ್ಬೇಗೌಡ‌, ಅವರಿಗೆ ಸೇರಿದ ವಾಸದ ಮನೆ ಬಿರುಗಾಳಿಯಿಂದ ನೆಲಕಚ್ಚಿದೆ, ಶಿಗರನಹಳ್ಳಿ ಗ್ರಾಮದ ಶಾರದಮ್ಮ ಅವರಿಗೆ ಸೇರಿದ 15 ಸಾವಿರ ಬಾಳೆಗಿಡಗಳಲ್ಲಿ ಶೇ. 40 ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಶಿಗರನಹಳ್ಳೀ ರಾಮೇಗೌಡ ಅವರ ಮನೆ ನೆಲಕಚ್ಚಿದೆ. ಕಾಮ ಸಮುದ್ರದ ಶಿವಣ್ಣ ಅವರಿಗೆ ಸೇರಿದ ಮನೆಗೆ ಅಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ಆಹಾರ ಪದಾರ್ಥಗಳು ಸೇರಿದಂತೆ ಸಾಕಷ್ಟು ಸುಟ್ಟುಕರಕಲಾಗಿದೆ.

ಅದೇ ರೀತಿ ಮಲ್ಲಪ್ಪನಹಳ್ಳಿ ಗ್ರಾಮ ವೃತ್ತಕ್ಕೆ ಸೇರಿದ ಕೃಷ್ಣಾಪುರ, ಸಂಕನಹಳ್ಳೀ, ಪಟ್ಟಣದ ಮಹದೇವಮ್ಮ, ಗಿರೀಶ್‌, ಬಂಡಿಶೆಟ್ಟಿಹಳ್ಳಿಯ ಯೋಗಣ್ಣ, ಗನ್ನಿಕಟ ಹುಲಿವಾಲ ಕಂಬೇಗೌಡ ಅವರಿಗೆ ಸೇರಿದ ಚಾವಣಿ ಸೇರಿದಂತೆ ಸಾಕಷ್ಟು ನಷ್ಟವಾಗಿದೆ. ಇದೇ ರೀತಿ ತಾಲೂಕಿನ ಹಾವಿನ ಮಾರನಹಳ್ಳಿ ಗ್ರಾಮದ ಕಮಲಮ್ಮ, ಬೋರೇ ಗೌಡ, ಶಾಂತಮ್ಮ ಹಾಗೂ ಕಾಳೇಗೌಡರಿಗೆ ಸೇರಿದ ಮನೆಗಳ ಹೆಂಚುಗಳು ಬಿರುಗಾಳಿಗೆ ತೂರಿ ಹೋಗಿ ಸಾಕಷ್ಟು ನಷ್ಟಕ್ಕೆ ಕಾರಣವಾಗಿದೆ.

ಈ ಬಗ್ಗೆ ತಾಲೂಕು ಆಡಳಿತ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿ ಸರ್ಕಾರ ನೀಡಿರು ಸುತ್ತೋಲೆ ಪ್ರಕಾರ ನಷ್ಟಕ್ಕೆ ಒಳಗಾಗಿರುವವರಿಗೆ ಸರ್ಕಾರದಿಂದ ಹಣ ಪಾವತಿಸಲು ಕ್ರಮಕೈಗೊಳ್ಳ ಲಾಗುವುದೆಂದು ತಿಳಿಸಿದರು.

ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ತುರ್ತು ಸಭೇಯಲ್ಲಿ ತಾಪಂ ಇಒ ಕೆ.ಯೋಗೇಶ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿ ಮಹೇಶ್‌, ಜಿಪಂ ಎಂಜಿನಿಯರ್‌ ಪ್ರಭು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.