ಎಚ್.ವಿಶ್ವನಾಥ್‌ ಚಮಚಾಗಿರಿ ಹೇಳಿಕೆ ಸದಭಿರುಚಿ ನಡವಳಿಕೆಯಲ್ಲ

ಸಿದ್ದರಾಮಯ್ಯ ಸಮರ್ಥ ಮುಖ್ಯಮಂತ್ರಿ ಎಂಬುದು ನಿರ್ವಿವಾದ, ಹೇಳಿಕೆಯಿಂದ ನಾನೇನು ವಿಚಲಿತನಾಗಿಲ್ಲ: ಸಚಿವ ಕೃಷ್ಣಬೈರೇಗೌಡ

Team Udayavani, May 14, 2019, 11:02 AM IST

KOLAR-TDY-1..

ಕೋಲಾರದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕರ ಕುರಿತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ರ ಹೇಳಿಕೆ ಸಾರ್ವಜನಿಕ ಜೀವನದಲ್ಲಿ ಸದಭಿರುಚಿಯ ನಡವಳಿಕೆ ಅಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಟೀಕಿಸಿದರು.

ಬರ ಪರಿಶೀಲನೆಗೆಂದು ಸೋಮವಾರ ಜಿಲ್ಲೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸಮರ್ಥ ಮುಖ್ಯಮಂತ್ರಿ ಎಂಬುದು ನಿರ್ವಿವಾದ, ಈ ನಾಡಿನ ಜನತೆಯೇ ಒಪ್ಪಿಕೊಂಡಿ ದ್ದಾರೆ, ವಿಶ್ವನಾಥ್‌ರ ಹೇಳಿಕೆಗೆ ನಾನೇನು ವಿಚಲಿತ ನಾಗಿಲ್ಲ ಮತ್ತು ಸಿದ್ದರಾಮಯ್ಯ ಅವರ ನಡವಳಿಕೆಯ ಮೇಲೂ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.

ಚುನಾವಣೆ ಫಲಿತಾಂಶದ ಆಧಾರದ ಮೇಲೆಯೇ ಮುಖ್ಯಮಂತ್ರಿ ಸಮರ್ಥನೆಂದು ಭಾವಿಸಲು ಆಗಲ್ಲ, ಸೋಲುಗೆಲುವು ಬೇರೆ, ಅರಸು ಸಹಾ ಚುನಾವಣೆಯಲ್ಲಿ ಸೋತಿದ್ದರು, ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಎಸ್‌.ಎಂ.ಕೃಷ್ಣ ಸರಕಾರವೂ ಸೋಲುಂಡಿತ್ತು. ಚುನಾವಣೆಯೊಂದೇ ಉತ್ತಮ ಆಡಳಿತಕ್ಕೆ ಮಾನದಂಡವಲ್ಲ ಎಂದರು.

ಸಹೋದ್ಯೋಗಿ ಶಾಸಕರ ಕುರಿತು ಚಮಚಾಗಿರಿ ಎಂಬ ಪದ ಬಳಕೆ ಮಾಡಿರುವುದು ಉತ್ತಮ ನಡವಳಿಯಲ್ಲ. ಸಾರ್ವಜನಿಕ ಜೀವನದಲ್ಲಿ ಸಹೋದ್ಯೋಗಿಗಳ ಕುರಿತು ಈ ರೀತಿ ಮಾತನಾಡಬಾರದು, ಇದು ಅವರ ವೈಯಕ್ತಿಕ ಟೀಕೆ ಇರಬಹುದು ಇದರ ಕುರಿತು ಗಂಭೀರವಾಗಿ ಪರಿಗಣಿಸಲು ಹೋಗಲ್ಲ ಮತ್ತು ಅವರ ಹೇಳಿಕೆ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರಲ್ಲ ಎಂದು ತಿಳಿಸಿದರು.

ಶಿಸ್ತು ಕಾಪಾಡಬೇಕು, ಬಹಳ ವೈಯುಕ್ತಿಕವಾಗಿ ತೆಗೆದುಕೊಳ್ಳುವುದು ಸರಿಯಲ್ಲ, ಎರಡು ಪಕ್ಷಗಳ ಹಾದಿಯಲ್ಲಿ ಸಮನ್ವಯತೆಯಡಿ ಸಾಗಬೇಕಾಗುತ್ತದೆ ಎಂದು ಸಲಹೆ ನೀಡಿದರು.

ಜೆಡಿಎಸ್‌ ನಾಯಕರು ವಿಶ್ವನಾಥ್‌ರನ್ನು ಛೂ ಬಿಡುತ್ತಿದ್ದಾರಾ ಎಂಬ ಪ್ರಶ್ನೆಗೆ ನಾನು ಅಷ್ಟೊಂದು ಆಳವಾಗಿ ವಿಶ್ಲೇಷಣೆ ಮಾಡಲು ಹೋಗೋದಿಲ್ಲ, ಅವರ ಉದ್ದೇಶ ಏನೆಂದು ಅವರನ್ನೇ ಪ್ರಶ್ನಿಸಿ ಎಂದು ಜಾರಿಕೊಂಡರು.

ಸರಕಾರ ಭದ್ರ, ಆತಂಕವೇ ಇಲ್ಲ: ಸರಕಾರದ ಭದ್ರತೆಗೆ ಯಾವುದೇ ಧಕ್ಕೆ ಇಲ್ಲ, ಅಳಿವು-ಉಳಿವು ಮಾತುಗಳ ಅಗತ್ಯತೆಯೂ ಇಲ್ಲ, ನಾವೆಲ್ಲಾ ಒಟ್ಟಾಗಿದ್ದೇವೆ, ಎರಡು ಪಕ್ಷಗಳಾದ್ದರಿಂದ ಸ್ವಲ್ಪಮಟ್ಟಿನ ಭಿನ್ನಾಭಿಪ್ರಾಯ ಸಹಜ, ಇದನ್ನು ರಾಹುಲ್ಗಾಂಧಿ, ದೇವೇಗೌಡ, ಸಿದ್ದರಾಮಯ್ಯ, ಕುಮಾರಸ್ವಾಮಿ, ದಿನೇಶ್‌ ಗುಂಡೂರಾವ್‌ ಕುಳಿತು ಮಾತನಾಡಿ ಸಮಸ್ಯೆಗಳಿದ್ದರೆ ಪರಿಹರಿಸುತ್ತಾರೆ ಎಂದರು.

ರಾಜಕೀಯ ಧೃವೀಕರಣ, ಪ್ರತಿಪಕ್ಷ ಸರಕಾರ:ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬದಲಾವಣೆ ಬಯಸಿದ್ದಾರೆ, ದೇಶದಲ್ಲಿ ಖಂಡಿತ ಬದಲಾವಣೆಯಾಗುತ್ತದೆ, ಪ್ರತಿಪಕ್ಷಗಳ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಬರಲಿದೆ, ಇದರಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರಕ್ಕೆ ಅನುಕೂಲವಾಗಲಿದೆ. ರಾಜಕೀಯ ಧೃವೀಕರಣದಿಂದಾಗಿ ಪ್ರತಿ ಪಕ್ಷಗಳ ಸರ್ಕಾರ ಕೇಂದ್ರದಲ್ಲಿ ಬಂದರೆ ಧನಾತ್ಮಕ ಪರಿಣಾಮ ರಾಜ್ಯ ಸರ್ಕಾರದ ಮೇಲೆ ಬೀಳುತ್ತದೆ, ರಾಜ್ಯ ಸರ್ಕಾರದ ಭವಿಷ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ವಷ್ಟಪಡಿಸಿದರು.

ಬೆಂಗಳೂರು ಉತ್ತರ ಗೆಲ್ಲುವ ವಿಶ್ವಾಸ: ಬೆಂಗಳೂರು ಉತ್ತರದಲ್ಲಿ ಗೆಲ್ಲುವ ವಿಶ್ವಾಸವಿದೆ ಆದರೆ, ಚುನಾವಣೆಯಾದ್ದರಿಂದ ಮತ ಎಣಿಕೆಯವರೆಗೂ ಕಾಯಬೇಕು ಎಂದ ಅವರು, ಕೋಲಾರದಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ. ಕೋಲಾರದಲ್ಲಿ ಎರಡೂ ಪಕ್ಷಗಳು ಒಂದಾಗಿ ಅಭ್ಯರ್ಥಿಯನ್ನು ಹಾಕಿರುವುದರಿಂದ ಇಲ್ಲಿ ಗೆಲ್ಲುವ ವಿಶ್ವಾಸವಿದೆ, ದೇಶದಲ್ಲೂ ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಸ್ಥಿತಿ ಮುಂದುವರಿದಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಚುನಾವಣಾ ನೀತಿ ಸಂಹಿತೆ ಇದ್ದಿದ್ದರಿಂದಾಗಿ ಪರಿಶೀಲನೆಗೆ ಬರಲಾಗಲಿಲ್ಲ, ಬುಧವಾರವಷ್ಟೇ ನನ್ನ ಒತ್ತಾಯಕ್ಕೆ ಕೇಂದ್ರ ಚುನಾವಣಾ ಆಯೋಗ ಬರ ಪರಿಶೀಲನಾ ಸಭೆಗೆ ಮಾತ್ರ ಅವಕಾಶ ನೀಡಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.