ಸೇತುವೆ ತಡೆಗೋಡೆ ಮುರಿದರೂ ನಿರ್ಲಕ್ಷ್ಯ
ತಡೆಗೋಡೆ ದುರಸ್ತಿಗೊಳಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ, ವಾಹನ ಸಂಚಾರಕ್ಕೆ ಅಡ್ಡಿ
Team Udayavani, May 14, 2019, 1:35 PM IST
ರಾಮನಗರ ತಾಲೂಕು ಬಿಡದಿಯಿಂದ ಗಾಣಕಲ್ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ನಲ್ಲಿಗುಡ್ಡೆ ಕೆರೆ ಕೋಡಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ತಡೆಗೋಡೆ ಮುರಿದು ಬಿದ್ದಿರುವುದು.
ರಾಮನಗರ: ತಾಲೂಕಿನ ಬಿಡದಿ ಪಟ್ಟಣದಿಂದ ಗಾಣಕಲ್ಗೆ ತೆರಳುವ ರಸ್ತೆಯಲ್ಲಿರುವ ನಲ್ಲಿಗುಡ್ಡೆ ಕೆರೆ ಕೋಡಿಗೆ ನಿರ್ಮಿಸಿರುವ ಸೇತುವೆ ಶಿಥಿಲಗೊಂಡಿದೆ. ಸೇತುವೆಯ ತಡೆಗೋಡೆ ಪೈಕಿ ಒಂದು ಭಾಗ ಮುರಿದು ಬಿದ್ದಿದ್ದ ವಾಹನ ಸವಾರರಿಗೆ ಅಪಾಯಕಾರಿ ಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ ಮಾಡಿದರೂ ಅಧಿಕಾರಿಗಳ ನಿರ್ಲಕ್ಷ್ಯ:ಬಿಡದಿ ಪಟ್ಟಣದಿಂದ ಗಾಣಕಲ್ ಮಾರ್ಗವಾಗಿ ಮಂಚನಬೆಲೆ ಹಾಗೂ ಬೆಂಗಳೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿರುವ ನಲ್ಲಿಗುಡ್ಡೆ ಕೆರೆ ಕೋಡಿಗೆ ಅಡ್ಡಲಾಗಿ ಬಹಳಷ್ಟು ವರ್ಷಗಳ ಹಿಂದೆಯೇ ಸೇತುವೆಯನ್ನು ನಿರ್ಮಿಸಲಾಗಿದೆ. ಸದ್ಯ ಸೇತುವೆ ಸಂಪೂರ್ಣ ಶಿಥಿಲಗೊಂಡಿದ್ದು, ತಡೆಗೋಡೆಯ ಒಂದು ಭಾಗ ಕಳಚಿಕೊಂಡು ಬಿದ್ದಿದೆ. ತಕ್ಷಣ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳುವಂತೆ ನಾಗರಿಕರು ಹಲವು ಬಾರಿ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಈವರೆಗೂ ದುರಸ್ತಿ ಕಾರ್ಯಕ್ಕೆ ಕ್ರಮಕೈಗೊಂಡಿಲ್ಲ.
ರಸ್ತೆಯಲ್ಲಿ ಹೆಚ್ಚು ಸಂಚಾರ: ಬಿಡದಿಯಿಂದ ಕಾಕರಾಮನಹಳ್ಳಿ, ಎಂ.ಕರೇನಹಳ್ಳಿ, ಗಾಣಕಲ್ಲು, ಕೆಂದಾಪನಹಳ್ಳಿ, ಚಿಕ್ಕೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳು ಈ ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದೆ. ಮಂಚನಬೆಲೆ ಡ್ಯಾಂ, ದೊಡ್ಡಾಲದಮರಕ್ಕೆ ಹೋಗುವ ಪ್ರಯಾಣಿಕರು ಸಹ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಬಿಎಂಟಿಸಿ ಬಸ್ಸು, ಶಾಲಾ-ಕಾಲೇಜುಗಳ ಬಸ್ಸು ಸೇರಿದಂತೆ ಪ್ರತಿದಿನ ಸಾವಿರಾರು ವಾಹನಗಳು ಈ ಮುಖ್ಯರಸ್ತೆಯಲ್ಲಿ ಸಂಚರಿಸುತ್ತವೆ. ಸೇತುವೆ ಸಮೀಪ ರಸ್ತೆಯಲ್ಲಿ ತಿರುವು ಇದ್ದು, ವಾಹನ ಸಂಚಾರಿಗಳಿಗೆ ಅಪಾಯಕಾರಿಯಾಗಿದೆ.
ಶಾಲಾ ವಾಹನ ಢಿಕ್ಕಿ: ಕೆಲವು ತಿಂಗಳುಗಳ ಹಿಂದೆ ಶಾಲಾ ವಾಹನವೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ ತಡೆಗೋಡೆಯ ಕೆಲ ಭಾಗ ಮುರಿದು ಹೋಗಿದೆ. ಹೀಗೆ ಮುರಿದ ತಡೆಗೋಡೆಯನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇಲ್ಲಿಯವರೆಗೂ ದುರಸ್ತಿ ಮಾಡಿಲ್ಲ. ಕೆಲ ವಾರಗಳ ಹಿಂದೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದಿತ್ತು. ಪದೇ ಪದೇ ಇಂತಹ ಅನಾಹುತಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಅಪಾಯವಿದೆ ಎಂಬ ಸೂಚನೆ ಕೊಡಲು ಕೆಲವರು ಪ್ಲಾಸ್ಟಿಕ್ ಟೇಪ್ ಕಟ್ಟಿದ್ದಾರೆ. ಆದರೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Channapatna: ಜೆಡಿಎಸ್ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.